ನಕಲಿ ಪಾಸ್ ಪೋರ್ಟ್: ಛೋಟಾ ರಾಜನ್ ಅಪರಾಧಿ ಎಂದ ದೆಹಲಿ ಕೋರ್ಟ್
ನವದೆಹಲಿ, ಏಪ್ರಿಲ್ 24: ನಕಲಿ ಪಾಸ್ ಪೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ದೊರೆ ಛೋಟಾ ರಾಜನ್ ಹಾಗೂ ಆತನಿಗೆ ನಕಲಿ ಪಾಸ್ ಪೋರ್ಟ್ ನೀಡಿದ ಮೂವರು ಪಾಸ್ ಪೋರ್ಟ್ ಅಧಿಕಾರಿಗಳನ್ನು ದೆಹಲಿಯ ಪಟಿಯಾಲಾ ಕೋರ್ಟ್ ಅಪರಾಧಿಗಳೆಂದು ಘೋಷಿಸಿದೆ.
ತೀರ್ಪಿನ ಬಗ್ಗೆ ವಾದ, ಪ್ರತಿವಾದಗಳ ವಿಚಾರಣೆಯನ್ನು ಏಪ್ರಿಲ್ 25ರಂದು ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

2017ರ ಜನವರಿಯಲ್ಲಿ ಛೋಟಾ ರಾಜನ್ ಹಾಗೂ ಆತನ ಮೂವರು ಸಹಚರರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಇದಲ್ಲದೆ, ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರೀಯ ತನಿಖಾ ದಳ (ಸಿಬಿಐ), ಪಾಸ್ ಪೋರ್ಟ್ ಅಧಿಕಾರಿಗಳಾದ ಜಯಶ್ರೀ ರಾಹಟೆ, ದೀಪಕ್ ನಟವರ್ ಲಾಲ್, ಲಲಿತಾ ಲಕ್ಷ್ಮಣ್ ಅವರು ನಕಲಿ ಪಾಸ್ ಪೋರ್ಟ್ ನೀಡಲು ಸಹಕರಿಸಿದ್ದಾರೆಂದು ಆರೋಪಿಸಿತ್ತಲ್ಲದೆ, ನ್ಯಾಯಾಲಯದಲ್ಲಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ಸಲ್ಲಿಸಿತ್ತು.
ಈ ಪ್ರಕರಣ ನಡೆದಿದ್ದು 90ರ ದಶಕದಲ್ಲಿ. ಆಗ, ಛೋಟಾ ರಾಜನ್ ಅವರಿಗೆ ಮೋಹನ್ ಕುಮಾರ್ ಎಂಬ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ನೀಡಲಾಗಿತ್ತು. ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವಾರು ದೇಶಗಳಿಗೆ ಬೇಕಿದ್ದ ಛೋಟಾ ರಾಜನ್ ಗೆ 1995ರಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದ್ದರಿಂದಾಗಿ ಆತ ನಕಲಿ ಪಾಸ್ ಪೋರ್ಟ್ ಪಡೆದು ತನಗೆ ಬೇಕಾದಲ್ಲಿಗೆ ಸುತ್ತಾಡಲು ಸಂಚು ರೂಪಿಸಿದ್ದ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications