ಈ ವಾರದಲ್ಲೇ ಭಾರತಕ್ಕೆ ಬರಲಿದ್ದಾನೆ ಛೋಟಾ ರಾಜನ್
ಬೆಂಗಳೂರು, ಅಕ್ಟೋಬರ್ 27 : ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ ಬಂಧಿತನಾಗಿರುವ ಭೂಗತ ಪಾತಕಿ ಛೋಟಾ ರಾಜನ್ಅನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಗಳು ಆರಂಭವಾಗಿವೆ. ಮುಂಬೈ ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳ ತಂಡ ವಾರಾಂತ್ಯದಲ್ಲಿ ರಾಜನ್ಅನ್ನು ಭಾರತಕ್ಕೆ ಕರೆತರಲಿದ್ದಾರೆ.
ರಾಜೇಂದ್ರ ಸದಾಶಿವ್ ನಿಕ್ಲಾಜೆ ಅಲಿಯಾಸ್ ಛೋಟಾ ರಾಜನ್ ಅನ್ನು ಸುಮಾರು ಎರಡು ದಶಕಗಳ ನಂತರ ಬಂಧಿಸಲಾಗಿದೆ. ಆಸ್ಟ್ರೇಲಿಯನ್ ಪೊಲೀಸರು ನೀಡಿದ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಇಂಡೋನೇಷಿಯಾ ಪೊಲೀಸರು ಬಾಲಿ ದ್ವೀಪದಲ್ಲಿ ರಾಜನ್ ಅನ್ನು ಬಂಧಿಸಿದ್ದಾರೆ. [ಛೋಟಾ ರಾಜನ್ : ಡಾನ್ ಆಗಿದ್ದು ಹೇಗೆ?]

ರಾಜನ್ಅನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಯನ್ನು ಸಿಬಿಐ ಆರಂಭಿಸಿದೆ. ರಾಜನ್ ಮೇಲೆ ಮುಂಬೈಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಆದ್ದರಿಂದ, ಮುಂಬೈ ಪೊಲೀಸರು ಸಿಬಿಐ ಅಧಿಕಾರಿಗಳೊಂದಿಗೆ ತೆರಳಿ ರಾಜನ್ಅನ್ನು ಕರೆತರಲಿದ್ದಾರೆ. [ಛೋಟಾ ರಾಜನ್ ಬಂಧನ]
ವಿಳಂಬ ಬೇಡ : ಛೋಟಾ ರಾಜನ್ ಹಸ್ತಾಂತರದ ವಿಚಾರದಲ್ಲಿ ವಿಳಂಬ ಧೋರಣೆ ಬೇಡ ಎಂದು ಇಂಡೋನೇಷಿಯಾ ಪೊಲೀಸರು ಸಿಬಿಐಗೆ ಸೂಚನೆ ನೀಡಿದ್ದಾರೆ. ಹಸ್ತಾಂತರ ಪ್ರಕ್ರಿಯೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಸಿಬಿಐ ಅಧಿಕಾರಿಗಳು ಮಾಡಿಕೊಳ್ಳುತ್ತಿದ್ದಾರೆ.
ಸಿಬಿಐ ಅಧಿಕಾರಿಗಳ ಜೊತೆ ಮುಂಬೈ ಪೊಲೀಸರು ಬಾಲಿ ದ್ವೀಪಕ್ಕೆ ತೆರಳಿ ಛೋಟಾ ರಾಜನ್ ಅನ್ನು ಕರೆತರಲಿದ್ದಾರೆ. ಭಾರತಕ್ಕೆ ಕರೆತಂದ ನಂತರ ರಾಜನ್ಅನ್ನು ಮುಂಬೈ ಜೈಲಿನಲ್ಲಿ ಇಡಲು ನಿರ್ಧರಿಸಲಾಗಿದೆ. ಮುಂಬೈನಲ್ಲಿ ರಾಜನ್ ವಿರುದ್ಧ ಬೆದರಿಕೆ ಕರೆ ಸೇರಿದಂತೆ ಹಲವು ಪ್ರಕರಣಗಳಿದ್ದು, ಪೊಲೀಸರು ಅವುಗಳ ಕುರಿತು ವಿಚಾರಣೆ ನಡೆಸಲಿದ್ದಾರೆ.
ಹಸ್ತಾಂತರದ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ರಾಜನ್ಅನ್ನು ಗರಿಷ್ಠ ಭದ್ರತೆಯ ಜೈಲಿನಲ್ಲಿಡಲು ಸಿದ್ಧತೆಗಳನ್ನು ಆರಂಭಿಸಲಾಗುತ್ತದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ. ಛೋಟಾ ರಾಜನ್ ಮತ್ತು ಛೋಟಾ ಶಕೀಲ್ ಗ್ಯಾಂಗ್ ನಡುವೆ ವೈರತ್ವವಿದೆ. ಆದ್ದರಿಂದ ಛೋಟಾ ರಾಜನ್ ಹತ್ಯೆಗೆ ಪ್ರಯತ್ನ ನಡೆಸಬಹುದು ಎಂದು ಗರಿಷ್ಠ ಭದ್ರತೆ ಒದಗಿಸಲು ಪೊಲೀಸರು ತೀರ್ಮಾನಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications