ಸ್ವಾಮಿಗೆ ಸ್ಸಾರಿ ಎಂದ ಕಾಂಗ್ರೆಸ್ಸಿನ ಸಂಜಯ್
ನವದೆಹಲಿ, ಜೂ.17: ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಅವರು ಸಿಐಎ ಏಜೆಂಟ್ ಜರೆದು ವಿವಾದಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಂಜಯ್ ಝಾ ಅವರು ಕೊನೆಗೂ ಬೇಷರತ್ ಕ್ಷಮೆಯಾಚಿಸಿದ್ದಾರೆ. ಸಂಜಯ್ ಅವರು 'ಸ್ಸಾರಿ' ಹೇಳಿರುವ ಬಗ್ಗೆ ಸುಬ್ರಮಣ್ಯಂ ಸ್ವಾಮಿ ಎಂದಿನಂತೆ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ಅವರುನ್ನು ಕೇಂದ್ರ ತನಿಖಾ ದಳ (ಸಿಐಎ) ಸಂಸ್ಥೆಯ ಏಜೆಂಟ್ ಎಂದು ಕರೆದು ವಿವಾದಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಂಜಯ್ ಝಾ ಅವರು ಪತ್ರ ಬರೆದಿದ್ದಾರೆ ಎಂದು ಟ್ವೀಟಿಸಿರುವ ಸ್ವಾಮಿ, ನನ್ನ ಕಾನೂನು ಸಲಹೆಗಾರರಾದ ಸುಪ್ರಿಯಾ ಮನನ್, ಇಷ್ಕರನ್ ಭಂಡಾರಿ ಮತ್ತು ನನ್ನ ಪತ್ನಿ ಡಾ. ರೊಕ್ಸಾನಾ ಸ್ವಾಮಿ ತನಗೆ ಝಾ ಅವರು ಇಮೇಲ್ ಕಳುಹಿಸಿದ್ದಾರೆ ಎಂಬುದನ್ನು ದೃಢೀಕರಿಸಿದ್ದಾರೆ.
1977ರಲ್ಲಿ ಇಂದಿರಾ ಗಾಂಧಿ ಅವರ ಅನಾರೋಗ್ಯದ ಬಗ್ಗೆ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಅಮೆರಿಕಕ್ಕೆ ಮಾಹಿತಿ ನೀಡಿದ್ದರು ಎಂದು ವಿಕಿಲೀಕ್ಸ್ ಬಹಿರಂಗ ಪಡಿಸಿತ್ತು. ಈ ವಿಷಯ ಬಹಿರಂಗವಾದಾಗ ಝಾ ಅವರು ಸುಬ್ರಮಣಿಯನ್ ಸ್ವಾಮಿ ಅವರನ್ನು ಸಿಐಎ ಏಜೆಂಟ್ ಎಂದು ಕರೆದಿದ್ದರು. ಆ ಇ ಮೇಲ್ ಸಂಜಯ್ ಝಾ ಕಳುಹಿಸಿದ ಕ್ಷಮೆಯಾಚನೆ ಪತ್ರವಾಗಿತ್ತು ಎಂದು ಸ್ವಾಮಿ ಆಮೇಲೆ ರೀಟ್ವೀಟ್ ಮಾಡಿದ್ದರು.ಸ್ವಾಮಿ ಟ್ವೀಟ್ ಗಳು ಹಾಗೂ ಸಿಐಐ ಏಜೆಂಟ್ ಕಥೆ ಮುಂದೆ ಓದಿ...

ಕ್ಷಮೆಯಾಚಿಸಿದ ಕಾಂಗ್ರೆಸ್ ನಾಯಕ ಸಂಜಯ್
ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಅವರು ಸಿಐಎ ಏಜೆಂಟ್ ಜರೆದು ವಿವಾದಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಂಜಯ್ ಝಾ ಅವರು ಕೊನೆಗೂ ಬೇಷರತ್ ಕ್ಷಮೆಯಾಚಿಸಿದ್ದಾರೆ.
|
ನಾಲಗೆ ತಪ್ಪಿ ಬಂದ ಮಾತುಗಳಾಗಿತ್ತು
ಮಾತಿನ ಬರದಲ್ಲಿ ನಾಲಗೆ ತಪ್ಪಿ ಬಂದ ಮಾತುಗಳಾಗಿತ್ತು. ಸ್ವಾಮಿ ಅವರನ್ನು ಅವಮಾನಿಸುವ ಯಾವ ಉದ್ದೇಶವೂ ನನಗಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ವಿಕಿಲೀಕ್ಸ್ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಯಾಗಲಿ ಎಂದು ಸಂಜಯ್ ಹೇಳಿದ್ದಾರೆ.

ಇಂದಿರಾ ಗಾಂಧಿ ಅನಾರೋಗ್ಯದ ಮಾಹಿತಿ
ಬಿಜೆಪಿಯಲ್ಲಿರುವ ಸುಬ್ರಮಣ್ಯ ಸ್ವಾಮಿ ಅವರು ಅಮೆರಿಕದ ಗುಪ್ತಚರ ದಳಕ್ಕೆ ರವಾನಿಸಿದ್ದರು ಎಂದು ಪತ್ರಿಕೆಯೊಂದರ ವರದಿಯನ್ನು ಉಲ್ಲೇಖಿಸಿ 'ವಿಕಿಲೀಕ್ಸ್' ವರದಿ ಮಾಡಿತ್ತು.
ಇಂದಿರಾ ಗಾಂಧಿ ಅವರ ಆರೋಗ್ಯಕ್ಕೆ ಸಂಬಂಧಿಸಿದ ಗುಪ್ತ ಮಾಹಿತಿಯಷ್ಟೇ ಅಲ್ಲ. ಪ್ರಧಾನಿಯಾಗಿ 1977ರಲ್ಲಿ ತುರ್ತುಪರಿಸ್ಥಿತಿ ವೇಳೆ ಇಂದಿರಾ ಏನೆಲ್ಲಾ ಚುನಾವಣಾ ತಂತ್ರಗಳನ್ನು ಅಳವಡಿಸಿಕೊಂಡಿದ್ದರು ಎಂಬುದರ ಕುರಿತೂ ಬಿಜೆಪಿಯ ಹಿರಿಯ ನಾಯಕ ಸುಬ್ರಮಣ್ಯ ಸ್ವಾಮಿ ಅವರು ಅಮೆರಿಕಕ್ಕೆ ಮಾಹಿತಿ ನೀಡಿದ್ದರು. [ಹೆಚ್ಚಿನ ವಿವರ ಇಲ್ಲಿ ಓದಿ ]
|
ಕ್ಷಮೆಯಾಚನೆ ಬಗ್ಗೆ ಸ್ವಾಮಿ ಟ್ವೀಟ್
ನನ್ನ ಕಾನೂನು ಸಲಹೆಗಾರರಾದ ಸುಪ್ರಿಯಾ ಮನನ್, ಇಷ್ಕರನ್ ಭಂಡಾರಿ ಮತ್ತು ನನ್ನ ಪತ್ನಿ ಡಾ. ರೊಕ್ಸಾನಾ ಸ್ವಾಮಿ ತನಗೆ ಝಾ ಅವರು ಇಮೇಲ್ ಕಳುಹಿಸಿದ್ದಾರೆ ಎಂಬುದನ್ನು ದೃಢೀಕರಿಸಿದ್ದಾರೆ.
|
ಕ್ಷಮೆಯಾಚನೆ ಬಗ್ಗೆ ಸ್ವಾಮಿ ಮತ್ತೊಂದು ಟ್ವೀಟ್
ಕಾಂಗ್ರೆಸ್ ನಾಯಕ ಸಂಜಯ್ ಝಾ ಕ್ಷಮೆಯಾಚನೆ ಬಗ್ಗೆ ಸ್ವಾಮಿ ಮತ್ತೊಂದು ಟ್ವೀಟ್ ಮಾಡಿದ್ದು ಹೀಗೆ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications