ಅಮಿತ್ ಶಾ ಭದ್ರತೆಯ ವೆಚ್ಚದ ವಿವರ ಬಹಿರಂಗಕ್ಕೆ ಸಿಐಸಿ ನಕಾರ
ನವದೆಹಲಿ, ಆಗಸ್ಟ್ 27: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ನೀಡಿರುವ ಭದ್ರತೆಯ ವೆಚ್ಚವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (ಸಿಐಸಿ) ತಿಳಿಸಿದೆ.
ಖಾಸಗಿ ಮಾಹಿತಿ ಹಾಗೂ ಸುರಕ್ಷತೆಯ ಕಾರಣಗಳಿಂದ ಈ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿಐಸಿ ಹೇಳಿದೆ.
ಖಾಸಗಿ ವ್ಯಕ್ತಿ ಮತ್ತು ಅಧಿಕಾರಿಗಳಿಗೆ ಭದ್ರತಾ ಸೌಲಭ್ಯವನ್ನು ಒದಗಿಸುವ ಆಡಳಿತ ನಿಯಮಗಳ ಕುರಿತು ಸಹ ವಿವರ ನೀಡಲಾಗದು ಎಂದು ಸಹ ಅರ್ಜಿದಾರರಿಗೆ ಅದು ತಿಳಿಸಿದೆ.

ಅಮಿತ್ ಶಾ ಅವರು ರಾಜ್ಯಸಭೆಯ ಸದಸ್ಯರಾಗುವ ಮೊದಲು, 2014ರ ಜುಲೈ 5ರಂದು ಅರ್ಜಿ ಸಲ್ಲಿಸಿದ್ದ ಆರ್ಟಿಐ ಕಾರ್ಯಕರ್ತ ದೀಪಕ್ ಜುನೇಜಾ, ಸರ್ಕಾರದಿಂದ ಭದ್ರತೆ ಪಡೆದುಕೊಂಡಿರುವ ಜನರ ಪಟ್ಟಿಯನ್ನು ನೀಡುವಂತೆಯೂ ಕೋರಿದ್ದರು.
ಯಾವುದೇ ವ್ಯಕ್ತಿಯ ಜೀವ ಅಥವಾ ದೈಹಿಕ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಮಾಹಿತಿಯನ್ನು ಹೊರತಾಗಿಸುವ ಸೆಕ್ಷನ್ 8 (1) (g) ಅಡಿಯಲ್ಲಿ ಒದಗಿಸಲು ಸಾಧ್ಯವಿಲ್ಲ ಎಂದು ಗೃಹಸಚಿವಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.
ಆರ್ಟಿಐ ಕಾಯ್ದೆಯ ಸೆಕ್ಷನ್ 8 (1) jಅನ್ನೂ ಉಲ್ಲೇಖಿಸಿದ್ದ ಸಚಿವಾಲಯ, ಖಾಸಗಿತನಕ್ಕೆ ಭಂಗತರುವಂತಹ ಮಾಹಿತಿ ಮತ್ತು ಸಾರ್ವಜನಿಕ ಚಟುವಟಿಕೆಗೆ ಸಂಬಂಧವಿರದ ಮಾಹಿತಿಗಳನ್ನು ನೀಡಲಾಗದು ಎಂದಿತ್ತು. ಇದನ್ನು ಎತ್ತಿಹಿಡಿದಿದ್ದ ಸಿಐಸಿ, ಸಂಸತ್ನಲ್ಲಿ ಇದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಸಿಐಸಿ ಆದೇಶವನ್ನು ಜುನೇಜಾ ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅರ್ಜಿದಾರರು ಬಯಸಿದ ಮಾಹಿತಿಯು ಸೆಕ್ಷನ್ 8(1) g ಮತ್ತು j ಅಡಿಯಿಂದ ಹೊರತಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಮತ್ತೆ ಪರಿಶೀಲಿಸುವಂತೆ ಸಿಐಸಿಗೆ ಕೋರ್ಟ್ ಸೂಚಿಸಿತ್ತು.
ಗೃಹಸಚಿವಾಲಯ ಮತ್ತು ಜುನೇಜಾ ಅವರ ಹೇಳಿಕೆಗಳನ್ನು ಮತ್ತೆ ಪರಿಶೀಲನೆಗೆ ಒಳಪಡಿಸಿದ ಸಿಐಸಿಯ ಆಯುಕ್ತ ಯಶೋವರ್ಧನ್ ಆಜಾದ್, ಜೀವಬೆದರಿಕೆಗೆ ಒಳಗಾಗಿರುವ ವ್ಯಕ್ತಿಯ ಭದ್ರತೆಯ ವಿವರಗಳನ್ನು ನೀಡಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications