ಯುಪಿಎಸ್ಸಿ ಟಾಪರ್ ನಂದಿನಿಗೆ ಸಿಕ್ಕ ಅಂಕಗಳು ಬಹಿರಂಗ
ಯುಪಿಎಸ್ಸಿ ಟಾಪರ್ ಆಗಿರುವ ಕೋಲಾರ ಮೂಲದ ನಂದಿನಿ ಕೆ. ಆರ್ ಅವರು ಗಳಿಸಿರುವ ಅಂಕಗಳನ್ನು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ಸೋಮವಾರ ಬಹಿರಂಗಗೊಳಿಸಿದೆ.
ನವದೆಹಲಿ, ಜೂನ್ 05: ಯುಪಿಎಸ್ಸಿ ಟಾಪರ್ ಆಗಿರುವ ಕೋಲಾರ ಮೂಲದ ನಂದಿನಿ ಕೆ. ಆರ್ ಅವರು ಗಳಿಸಿರುವ ಅಂಕಗಳನ್ನು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ಸೋಮವಾರ ಬಹಿರಂಗಗೊಳಿಸಿದೆ.
2016ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ಕರ್ನಾಟಕದ ಕೋಲಾರ ಮೂಲದ ನಂದಿನಿ ಕೆ.ಆರ್ ಅವರು ಶೇ 55.3ರಷ್ಟು ಅಂಕಗಳನ್ನು ಗಳಿಸಿದ್ದಾರೆ. 2015ನೇ ಸಾಲಿನಲ್ಲಿ ಟೀನಾ ದಾಬಿ ಅವರು ಶೇ 52.49ರಷ್ಟು(1,063 ಅಂಕಗಳು) ಅಂಕಗಳನ್ನು ಗಳಿಸಿದ್ದರು. [ಕರ್ನಾಟಕದ ಹೆಮ್ಮೆ ಕೋಲಾರಕ್ಕೆ ನಂದಿನಿ ಎಂಬ ಮತ್ತೊಂದು ಕೋಡು!]

ಎರಡನೇ ಸ್ಥಾನ ಗಳಿಸಿರುವ ಅನ್ಮೋಲ್ ಶೇರ್ ಸಿಂಗ್ ಬೇಡಿ ಶೇಕಡಾ 54.56 ಗಳಿಸಿದ್ದಾರೆ.ಮೂರನೇ ಸ್ಥಾನ ಗಳಿಸಿದ ಗೋಪಾಲಕೃಷ್ಣ ರೋನಂಕಿ ಶೇಕಡಾ 54.37 ಅಂಕಗಳನ್ನು ಪಡೆದಿದ್ದಾರೆ ಎಂದು ಯುಪಿಎಸ್ಸಿ ತಿಳಿಸಿದೆ. [ಕನ್ನಡ ಮಾಧ್ಯಮದಲ್ಲಿ ಓದಿದ ಕೆಆರ್ ನಂದಿನಿ ಐಎಎಸ್ ಮುಕುಟ ಮಣಿ]
ನಂದಿನಿ ಕೆ. ಆರ್ ಅವರು ಒಟ್ಟು 2,025 ಅಂಕಗಳಲ್ಲಿ 1,120 ಅಂಕ ಪಡೆದುಕೊಂಡಿದ್ದು, (927 ಮುಖ್ಯ ಪರೀಕ್ಷೆ ಮತ್ತು 193 ಸಂದರ್ಶನ) ಅಂಕಗಳನ್ನು ಗಳಿಸಿದ್ದಾರೆ.
ಕೇಂದ್ರ ಲೋಕ ಸೇವಾ ಅಯೋಗ IAS, IFS, IPS ಹುದ್ದೆಗಳಿಗಾಗಿ ನಡೆಸಿದ ಪರೀಕ್ಷೆಯಲ್ಲಿ ಒಟ್ಟು 1099 ಅಭ್ಯರ್ಥಿಗಳಿಗೆ ಸ್ಥಾನ ಹಂಚಿಕೆಯಾಗಿದ್ದು, 500 ಸಾಮಾನ್ಯ, 347 ಒಬಿಸಿ, 163 ಎಸ್ಸಿ ಹಾಗೂ 89 ಎಸ್ಟಿ ಅಭ್ಯರ್ಥಿಗಳಿದ್ದಾರೆ.(ಪಿಟಿಐ)
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ












Click it and Unblock the Notifications