ಯುಪಿಎಸ್ಸಿ ಟಾಪರ್ ನಂದಿನಿಗೆ ಸಿಕ್ಕ ಅಂಕಗಳು ಬಹಿರಂಗ
ಯುಪಿಎಸ್ಸಿ ಟಾಪರ್ ಆಗಿರುವ ಕೋಲಾರ ಮೂಲದ ನಂದಿನಿ ಕೆ. ಆರ್ ಅವರು ಗಳಿಸಿರುವ ಅಂಕಗಳನ್ನು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ಸೋಮವಾರ ಬಹಿರಂಗಗೊಳಿಸಿದೆ.
ನವದೆಹಲಿ, ಜೂನ್ 05: ಯುಪಿಎಸ್ಸಿ ಟಾಪರ್ ಆಗಿರುವ ಕೋಲಾರ ಮೂಲದ ನಂದಿನಿ ಕೆ. ಆರ್ ಅವರು ಗಳಿಸಿರುವ ಅಂಕಗಳನ್ನು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ಸೋಮವಾರ ಬಹಿರಂಗಗೊಳಿಸಿದೆ.
2016ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ಕರ್ನಾಟಕದ ಕೋಲಾರ ಮೂಲದ ನಂದಿನಿ ಕೆ.ಆರ್ ಅವರು ಶೇ 55.3ರಷ್ಟು ಅಂಕಗಳನ್ನು ಗಳಿಸಿದ್ದಾರೆ. 2015ನೇ ಸಾಲಿನಲ್ಲಿ ಟೀನಾ ದಾಬಿ ಅವರು ಶೇ 52.49ರಷ್ಟು(1,063 ಅಂಕಗಳು) ಅಂಕಗಳನ್ನು ಗಳಿಸಿದ್ದರು. [ಕರ್ನಾಟಕದ ಹೆಮ್ಮೆ ಕೋಲಾರಕ್ಕೆ ನಂದಿನಿ ಎಂಬ ಮತ್ತೊಂದು ಕೋಡು!]

ಎರಡನೇ ಸ್ಥಾನ ಗಳಿಸಿರುವ ಅನ್ಮೋಲ್ ಶೇರ್ ಸಿಂಗ್ ಬೇಡಿ ಶೇಕಡಾ 54.56 ಗಳಿಸಿದ್ದಾರೆ.ಮೂರನೇ ಸ್ಥಾನ ಗಳಿಸಿದ ಗೋಪಾಲಕೃಷ್ಣ ರೋನಂಕಿ ಶೇಕಡಾ 54.37 ಅಂಕಗಳನ್ನು ಪಡೆದಿದ್ದಾರೆ ಎಂದು ಯುಪಿಎಸ್ಸಿ ತಿಳಿಸಿದೆ. [ಕನ್ನಡ ಮಾಧ್ಯಮದಲ್ಲಿ ಓದಿದ ಕೆಆರ್ ನಂದಿನಿ ಐಎಎಸ್ ಮುಕುಟ ಮಣಿ]
ನಂದಿನಿ ಕೆ. ಆರ್ ಅವರು ಒಟ್ಟು 2,025 ಅಂಕಗಳಲ್ಲಿ 1,120 ಅಂಕ ಪಡೆದುಕೊಂಡಿದ್ದು, (927 ಮುಖ್ಯ ಪರೀಕ್ಷೆ ಮತ್ತು 193 ಸಂದರ್ಶನ) ಅಂಕಗಳನ್ನು ಗಳಿಸಿದ್ದಾರೆ.
ಕೇಂದ್ರ ಲೋಕ ಸೇವಾ ಅಯೋಗ IAS, IFS, IPS ಹುದ್ದೆಗಳಿಗಾಗಿ ನಡೆಸಿದ ಪರೀಕ್ಷೆಯಲ್ಲಿ ಒಟ್ಟು 1099 ಅಭ್ಯರ್ಥಿಗಳಿಗೆ ಸ್ಥಾನ ಹಂಚಿಕೆಯಾಗಿದ್ದು, 500 ಸಾಮಾನ್ಯ, 347 ಒಬಿಸಿ, 163 ಎಸ್ಸಿ ಹಾಗೂ 89 ಎಸ್ಟಿ ಅಭ್ಯರ್ಥಿಗಳಿದ್ದಾರೆ.(ಪಿಟಿಐ)
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications