ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ವೇಳೆ ನಾಗರಿಕ ಸಾವು
ಶ್ರೀನಗರ್, ಜೂನ್ 7: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಅಡಗಿದ್ದ ಉಗ್ರರ ಶೋಧ ಕಾರ್ಯಾಚರಣೆ ವೇಳೆ ಉಂಟಾದ ಗಲಭೆ ಸಂದರ್ಭದಲ್ಲಿ ಮಂಗಳವಾರ ಸಂಜೆ ಒಬ್ಬ ನಾಗರಿಕ ಮೃತಪಟ್ಟಿದ್ದಾನೆ.
ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಯುವಕರು ಗುಂಪೊಂದು ಪ್ರತಿಭಟನೆ ನಡೆಸಿತು. ಸಂಜೆ ಇನ್ನೇನು ರಂಜಾನ್ ನ ರೋಜಾ ಉಪವಾಸ ಮುಗಿಯುವುದರಲ್ಲಿತ್ತು. ಆ ವೇಳೆ ಪ್ರತಿಭಟನಾಕಾರರ ಗುಂಪಿನತ್ತ ರಕ್ಷಣಾ ಪಡೆಯು ಗುಂಡು ಹಾರಿಸಿತು.[ಏಟಿಗೆ ಎದುರೇಟು, ನಾಲ್ವರು ಉಗ್ರರನ್ನು ಹೊಡೆದುರಿಳಿಸಿದ ಭಾರತೀಯ ಸೇನೆ]
ಸಿಕ್ಕಿಬಿದ್ದ ಉಗ್ರಗಾಮಿಗಳು ತಪ್ಪಿಸಿಕೊಳ್ಳುವುದಕ್ಕೆ ಆ ಗುಂಪು ಬೆಂಬಲ ನೀಡುತ್ತಿತ್ತು. ಹನ್ನೆರಡನೇ ತರಗತಿ ವಿದ್ಯಾರ್ಥಿ, ಗನವ್ ಪೋರ್ ನ ನಿವಾಸಿ ಅದಿಲ್ ಫಾರೂಕ್ ಮಗ್ರೆ ಎಂಬಾತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಮೃತಪಟ್ಟಿದ್ದ. ಆತನಿಗೆ ಗುಂಡು ತಗುಲಿತು ಎಂದು ಆರೋಪಿಸಲಾಗಿದೆ. ಇನ್ನು ನಾಲ್ವರು ನಾಯಕರಿಗೆ ಗಾಯಗಳಾಗಿವೆ.

ಹಿಜ್ಬುಲ್ ಮುಜಾಹಿದೀನ್ ನ ಇಬ್ಬರು ಉಗ್ರರು, ಆ ಪೈಕಿ ಒಬ್ಬ ಕಮ್ಯಾಂಡರ್ ಅಲ್ಲಿ ಅಡಗಿದ್ದ ಎಂದು ವರದಿಯಾಗಿದೆ. ರಾಷ್ಟ್ರೀಯ ರೈಫಲ್ಸ್, ಸಿಆರ್ ಪಿಎಫ್ ಯೋಧರು ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications