ಸಿಜೆಐ ಎಚ್ಎಲ್ ದತ್ತು ನಿವೃತ್ತಿ, ಠಾಕೂರ್ ಮುಂದಿನ ಸಿಜೆಐ
ನವದೆಹಲಿ, ನ.04: ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ, ಕರ್ನಾಟಕದ ಮೂಲದ ಎಚ್.ಎಲ್ ದತ್ತು ಅವರ ನಿವೃತ್ತಿ ದಿನಾಂಕ ಘೋಷಣೆಯಾಗಿದೆ. ನ್ಯಾ. ದತ್ತು ಅವರ ಸ್ಥಾನಕ್ಕೆ ಮುಂದಿನ ಸಿಜೆಐಯಾಗಿ ಜಸ್ಟೀಸ್ ಟಿಎಸ್ ಠಾಕೂರ್ ಅವರನ್ನು ಶಿಫಾರಸು ಮಾಡಲಾಗಿದೆ.
ಡಿಸೆಂಬರ್ 2, 2015ರಂದು ಎಚ್. ಎಲ್ ದತ್ತು ಅವರು ನಿವೃತ್ತಿಯಾಗಲಿದ್ದಾರೆ. ಜಸ್ಟೀಸ್ ಟಿ.ಎಚ್ ಠಾಕೂರ್ ಅವರ ಹೆಸರನ್ನು ನ್ಯಾ. ದತ್ತು ಅವರು ಶಿಫಾರಸು ಮಾಡಿದ್ದಾರೆ. [ಸಿಜೆಐ ಹಂದ್ಯಾಲ ಲಕ್ಷ್ಮೀನಾರಾಯಣಸ್ವಾಮಿ ದತ್ತು ವ್ಯಕ್ತಿ ಚಿತ್ರ]

ನ್ಯಾ. ದತ್ತು ಅವರ ಶಿಫಾರಸ್ಸನ್ನು ಮೋದಿ ಸರ್ಕಾರ ಈಗ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕಳಿಸಿ ಅವರ ಅಂಕಿತ ಪಡೆಯಬೇಕಿದೆ. ರಾಷ್ಟ್ರಪತಿಗಳ ಅಂಕಿತ ಬಿದ್ದ ಬಳಿಕ ಅಧಿಕೃತವಾಗಿ ಮುಂದಿನ ಸಿಜೆಐ ಹೆಸರನ್ನು ಘೋಷಿಸಲಾಗುತ್ತದೆ.
ಜಸ್ಟೀಸ್ ಠಾಕೂರ್ ಅವರು ಕೂಡಾ ನಿವೃತ್ತಿ ಹೊಸ್ತಿಲಲ್ಲಿದ್ದಾರೆ. ಜನವರಿ 3, 2017ರಂದು ನಿವೃತ್ತಿ ಹೊಂದಲಿರುವ ಠಾಕೂರ್ ಅವರು ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2009ರಲ್ಲಿ ಸುಪ್ರೀಂಕೋರ್ಟಿನ ಜಡ್ಜ್ ಆಗಿ ಬಡ್ತಿ ಪಡೆದಿದ್ದರು.
ಸಿಜೆಐ ದತ್ತು: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಆರ್.ಎಂ ಲೋಧಾ ಅವರ ಸೇವಾ ಅವಧಿ ಪೂರ್ಣಗೊಂಡ ಬಳಿಕ. ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ನ್ಯಾ.ದತ್ತು ಅಲಂಕರಿಸಿದ್ದಾರೆ. ದತ್ತು ಅವರು ಸಿಜೆಐ ಆದ ನಾಲ್ಕನೇ ಕನ್ನಡಿಗರಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಎಚ್.ಎಲ್.ದತ್ತು ಅವರು, ಕೇರಳ ಹಾಗೂ ಪಂಜಾಬ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications