ಮಹಿಳಾ ಸಿಜೆಐ ನೇಮಿಸುವ ಕಾಲ ಬಂದಿದೆ: ಎಸ್ಎ ಬೋಬ್ಡೆ
ನವದೆಹಲಿ, ಏಪ್ರಿಲ್ 16: ಸುಪ್ರೀಂಕೋರ್ಟ್ಗೆ ಮಹಿಳೆಯೊಬ್ಬರು ಮುಖ್ಯ ನ್ಯಾಯಮೂರ್ತಿಯಾಗುವ ಸಮಯ ಬಂದಿದೆ ಎಂದು ಸಿಜೆಐ ಎಸ್ಎ ಬೋಬ್ಡೆ ಹೇಳಿದ್ದಾರೆ. ನ್ಯಾಯಾಂಗದಲ್ಲಿ ಮಹಿಳೆಯ ಪ್ರಾತಿನಿಧ್ಯ ಹೆಚ್ಚುವಂತೆ ಮಾಡಲು ಕೊಲಿಜಿಯಂ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
'ಮಹಿಳೆಯೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಸಮಯ ಬಂದಿದೆ ಎಂದು ನಮಗೆ ಅನಿಸುತ್ತಿದೆ. ಮಹಿಳೆಯರ ಹಿತಾಸಕ್ತಿ ವಿಚಾರ ನಮ್ಮ ಮನದಲ್ಲಿದೆ. ಕೊಲಿಜಿಯಂ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಮಹಿಳಾ ಸಿಜೆಐ ನೇಮಕವಾಗುತ್ತಾರೆ ಎಂಬ ಆಶಾವಾದವಿದೆ' ಎಂದು ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ ವಿಶೇಷ ನ್ಯಾಯಪೀಠ ಹೇಳಿತು.
ಮನೆ ನಿರ್ವಹಣೆಯ ಜವಾಬ್ದಾರಿಗಳನ್ನು ಮುಂದಿಟ್ಟು ಅನೇಕ ಮಹಿಳಾ ವಕೀಲರು ನ್ಯಾಯಾಧೀಶ ಸ್ಥಾನಕ್ಕೆ ಏರುವ ಪ್ರಸ್ತಾವಗಳನ್ನು ತಿರಸ್ಕರಿಸುತ್ತಿದ್ದಾರೆ ಎಂದು ಸಿಜೆಐ ಹೇಳಿದ್ದಾರೆ.

'ನ್ಯಾಯಾಧೀಶರನ್ನಾಗಿ ಮಹಿಳಾ ವಕೀಲರನ್ನು ನೇಮಿಸುವಲ್ಲಿನ ಸಮಸ್ಯೆಗಳ ಬಗ್ಗೆ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳು ನನಗೆ ಹೇಳಿದ್ದಾರೆ. ತಮ್ಮ ಮಕ್ಕಳ ಓದಿನ ಬಗ್ಗೆ ಗಮನ ಹರಿಸಬೇಕು ಅಥವಾ ಮನೆ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂಬ ಕಾರಣಗಳಿಂದ ಅವರು ಹೆಚ್ಚಿನ ಸಂದರ್ಭಗಳಲ್ಲಿ ಈ ಹುದ್ದೆಯನ್ನು ನಿರಾಕರಿಸುತ್ತಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
ಆದರೆ ಸಿಜೆಐ ಅವರ ಹೇಳಿಕೆಗೆ ಮಹಿಳಾ ವಕೀಲರು ತೀಕ್ಷ್ಣ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. 'ನಾವು ಸಿದ್ಧ. ಈ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಮತ್ತು ಸಂಸ್ಥೆಗೆ ಸೇವೆ ಸಲ್ಲಿಸಲು ಹೆಚ್ಚು ಸಂತಸಪಡುತ್ತೇವೆ' ಎಂದು ದೆಹಲಿ ಹೈಕೋರ್ಟ್ ಮಹಿಳಾ ವಕೀಲರ ವೇದಿಕೆ ಹೇಳಿದೆ.
-
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications