ಸಿಎಂ ಸಿದ್ದು ವಿರುದ್ಧ ಸೋನಿಯಾಗೆ ಷರೀಫ್ ಪತ್ರ
ಊಟಿ, ಏ.6: ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಷರೀಫ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಪತ್ರದುದ್ದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಅವರಿಂದ ನಾನು ಚುನಾವಣೆ ಸ್ಪರ್ಧಿಸಲು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಿಎಂ ಇಬ್ರಾಹಿಂಗೆ ಮನ್ನಣೆ ನೀಡುತ್ತಿದ್ದಾರೆ. ಇಬ್ರಾಹಿಂ ಅಸಲಿಗೆ ಮುಸ್ಲಿಂ ನಾಯಕ ಎಂದು ಕರೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮತ ಬ್ಯಾಂಕ್ ಮೇಲೆ ಹೆಚ್ಚಿನ ಅವಲಂಬನೆ ಮಾಡಿಕೊಂಡಿರುವುದು ಮುಂದೆ ದೊಡ್ದಪಾಠ ಕಲಿಸಲಿದೆ. ಅಮಾನತ್ ಬ್ಯಾಂಕ್ ಅವ್ಯವಹಾರ ಬೆಳಕಿಗೆ ಬಂದಿದ್ದರೂ ಯಾರಿಗೂ ಶಿಕ್ಷೆಯಾಗಿಲ್ಲ. ಪಕ್ಷ ಹಿರಿಯ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಬೇಸರ ತರೆಸಿದೆ. ಸಿಎಂ ಸಿದ್ದರಾಮಯ್ಯ ನನ್ನನ್ನು ಕಡೆಗಣಿಸಿದ್ದಾರೆ ಎಂದು ಜಾಫರ್ ಷರೀಫ್ ಅವರು ಪತ್ರದಲ್ಲಿ ವಿವರಿಸಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಕಾಂಗ್ರೆಸ್ ಪಕ್ಷದೊಂದಿಗಿನ ದಶಕಗಳ ಸಂಬಂಧವನ್ನು ಕಡಿದುಕೊಂಡಿರುವ ಜಾಫರ್ ಷರೀಫ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಯಾವುದೇ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡದೆ ತಟಸ್ಥವಾಗಿ ಉಳಿಯುವುದಾಗಿ ತಿಳಿಸಿದ್ದರು. ಈಗ ಮೆಕ್ಕಾ ಯಾತ್ರೆ ನಂತರ ತಮಿಳುನಾಡಿನ ಊಟಿಗೆ ಬಂದಿರುವ ಷರೀಫ್ ಅವರು ಅಲ್ಲಿಂದಲೇ ಸೋನಿಯಾ ಅವರಿಗೆ ಪತ್ರ ರವಾನಿಸಿದ್ದಾರೆ.
ಮೆಕ್ಕಾ ಯಾತ್ರೆ ತೆರಳಿದ್ದ ಜಾಫರ್ ಷರೀಫ್ ಅವರು ಮಾ.25ರಂದು ಅಲ್ಲಿಂದಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದರು.. ಆದರೆ, ಕಾಂಗ್ರೆಸ್ ಹೈಕಮಾಂಡ್ ಷರೀಫ್ ಅವರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಜಾಫರ್ ಷರೀಫ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಯಾವುದೇ ಪಕ್ಷ ಸೇರದಿರಲು ಷರೀಫ್ ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಪಕ್ಷದೊಂದಿಗೆ ಜಾಫರ್ ಷರೀಫ್ ಅವರದ್ದು ದಶಕಗಳ ಸಂಬಂಧ ಇಂದಿರಾಗಾಂಧಿ ನಿಕಟವರ್ತಿಯಾಗಿದ್ದ ಷರೀಫ್, ಬೆಂಗಳೂರು ಉತ್ತರದಿಂದ 7 ಬಾರಿ ಹಾಗೂ ಕನಕಪುರ ಕ್ಷೇತ್ರದಿಂದ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದರು. 1991-95ರ ವರೆಗೆ ಕೇಂದ್ರ ರೈಲ್ವೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈ ತಪ್ಪಿತ್ತು. ಅಲ್ಲಿ ಈಗ ಯುವ ಕ್ರಾಂಗ್ರೆಸ್ ನಾಯಕ ರಿಜ್ವಾನ್ ಅರ್ಷದ್ ಕಣದಲ್ಲಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications