ಕೋಲ್ಕತ್ತಾದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ: ತೃಣಮೂಲ ಮತ್ತು ಬಿಜೆಪಿ ಕೆಸರೆರೆಚಾಟ
ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ ಎರಡು ಗುಂಪುಗಳ ನಡುವೆ ಕೋಲ್ಕತ್ತಾದ ಖಿದರ್ಪೋರ್-ಮೊಮಿನ್ಪುರ್ ಪ್ರದೇಶದಲ್ಲಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ರಾಜ್ಯ ಪರಿಸ್ಥಿತಿಯನ್ನು ನಿಯಂತ್ರಿಸಿದೆ ಎಂದು ಉಲ್ಲೇಖಿಸಿದರೆ, ಹಲವಾರು ಬಿಜೆಪಿ ನಾಯಕರು ಘರ್ಷಣೆಯ ವೇಳೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ದೂರಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೇಸರಿ ಪಾಳೆಯ ಹೇಳಿಕೊಂಡಿದೆ. ಈ ಹೇಳಿಕೆಗೆ ಆಡಳಿತಾರೂಢ ಟಿಎಂಸಿ ಬಿಜೆಪಿಗೆ ತೀಕ್ಷ್ಣವಾದ ಪ್ರತ್ಯುತ್ತರವನ್ನು ನೀಡಿದೆ. ಇದು ಬಿಜೆಪಿಯು ರಾಜ್ಯದ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುತ್ತಿದೆ ಎಂದು ಆಡಳಿತಾರೂಢ ಟಿಎಂಸಿ ಆರೋಪಿಸಿದೆ.
ಈ ಪ್ರದೇಶಕ್ಕೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರನ್ನು ಸೋಮವಾರ ತಡೆದು ಬಂಧಿಸಲಾಯಿತು. ಭಾನುವಾರ ಸಂಜೆ ಖಿದರ್ಪೋರ್-ಮೊಮಿನ್ಪುರ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಕೆಲವು ಸ್ಥಳೀಯ ವಿಷಯಗಳಿಗೆ ಸಂಬಂಧಿಸಿದಂತೆ ಘರ್ಷಣೆಗಳು ನಡೆದಿದ್ದು, ಇದರಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಎಕ್ಬಾಲ್ಪುರ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆಯನ್ನೂ ನಡೆಸಿದರು.

ಆ ಪ್ರದೇಶದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ಎಎಫ್) ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
"ನಾನು ಗೌರವಾನ್ವಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಗೌರವಾನ್ವಿತ ಗವರ್ನರ್ ಗಣೇಶನ್ ಅವರಿಗೆ ಪತ್ರ ಬರೆದಿದ್ದೇನೆ, ಮೋಮಿನ್ಪುರ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಮತ್ತು ಎಕ್ಬಾಲ್ಪುರ ಪೊಲೀಸ್ ಠಾಣೆಯ ದಂಗೆಯ ಹಿನ್ನೆಲೆಯಲ್ಲಿ ಕೇಂದ್ರ ಪಡೆಗಳನ್ನು ತುರ್ತಾಗಿ ನಿಯೋಜಿಸಲು ವಿನಂತಿಸಿದೆ" ಎಂದು ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಟ್ವೀಟ್ ಮಾಡಿದ್ದಾರೆ.
Bikes and shops of Hindus vandalised by peaceful community today as they celebrate their festival at Maila Depot, Mominpore. As usual, CM isn’t talking any action against them and giving them free hand. pic.twitter.com/GJ7N2EHhpl
— Dr. Sukanta Majumdar (@DrSukantaBJP) October 9, 2022
ಪ್ರದೇಶಕ್ಕೆ ಭೇಟಿ ನೀಡಲು ಬಯಸಿದ ಮಜುಂದಾರ್ ಅವರನ್ನು ಉತ್ತರ ಕೋಲ್ಕತ್ತಾದ ಚಿಂಗ್ರಿಘಾಟಾ ಪ್ರದೇಶದಲ್ಲಿ ನಿಲ್ಲಿಸಲಾಯಿತು. ಜೊತೆಗೆ ಸಿಆರ್ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಆ ಪ್ರದೇಶದಲ್ಲಿ ವಿಧಿಸಲಾಗಿರುವುದರಿಂದ ಹಿಂತಿರುಗಲು ಕೇಳಲಾಯಿತು.
ಆದರೂ ಪೊಲೀಸರ ಮಾತು ಕಿವಿಗೆ ಹಾಕಿಕೊಳ್ಲದ ಸುಕಾಂತ ಮಜುಂದಾರ್ ಅವರು ಮುಂದೆ ಸಾಗಲು ಬಯಸಿದಾಗ ಅವರನ್ನು ಬಂಧಿಸಿ ಲಾಲ್ಬಜಾರ್ ಪೊಲೀಸ್ ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಾಜ್ಯದ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕೇಸರಿ ಶಿಬಿರದಲ್ಲಿ ಪಾಲ್ಗೊಂಡು ಸುಕಾಂತಾ ಮಜುಂದಾರ್ ದ್ವೇಷದ ಬಾಷಣ ಮಾಡುವುದನ್ನು ತಡೆದು ಬಂಧಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಹಿರಿಯ ಟಿಎಂಸಿ ನಾಯಕ ಸೌಗತ ರಾಯ್ ಹೇಳಿದ್ದಾರೆ.
ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ದ್ವೇಷದ ಭಾಷಣ ಮಾಡುವುದನ್ನು ಬಿಟ್ಟು ಸುಕಾಂತಾ ಮಜುಂದಾರ್ ಅಲ್ಲಿಗೆ ಹೋಗಿ ಏನು ಮಾಡುತ್ತಾರೆ? ಬಿಜೆಪಿಯು ರಾಜ್ಯದ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ, ಪ್ರತಿ ಘಟನೆಯನ್ನು ಬಿಜೆಪಿ ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು ಎಂದು ರಾಯ್ ಹೇಳಿದರು.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications