ಖಲಿಸ್ತಾನಿ ವಿಚಾರದಲ್ಲಿ ಭಾರತದ ವಿರುದ್ಧ ಅಮೆರಿಕ ಮತ್ತೊಂದು ಗಂಭೀರ ಆರೋಪ!
ಭಾರತ ಮತ್ತು ಅಮೆರಿಕ ನಡುವೆ ಖಲಿಸ್ತಾನಿಗಳ ವಿಚಾರದಲ್ಲಿ ಕಿರಿಕ್ ಜೋರಾಗುವ ಲಕ್ಷಣ ಗೋಚರಿಸುತ್ತಿದೆ. ಇದರ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪವನ್ನು ಈಗ ಅಮೆರಿಕದ ಪ್ರಾಸಿಕ್ಯೂಟರ್ಗಳು ಮಾಡಿದ್ದಾರೆ. ಅದರಲ್ಲೂ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನ ಈ ಪ್ರಕರಣದಲ್ಲಿ ಹೊಣೆ ಮಾಡುತ್ತಿರುವ ಅಮೆರಿಕದ ಪ್ರಾಸಿಕ್ಯೂಟರ್ಸ್, ಈಗ ಮತ್ತೊಂದು ಆರೋಪದ ಬಾಂಬ್ ಸಿಡಿಸಿದ್ದಾರೆ!
ಹೌದು, ಖಲಿಸ್ತಾನಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆ ಯತ್ನವನ್ನು ಭಾರತದ ಪ್ರಜೆ ನಿಖಿಲ್ ಗುಪ್ತಾ ಎನ್ನುವವರ ತಲೆಗೆ ಕಟ್ಟಿರುವ ಅಮೆರಿಕ ಮತ್ತೊಂದು ಗಂಭೀರವಾದ ಆರೋಪ ಮಾಡಿದೆ. ಭಾರತದ ಪ್ರಜೆ ನಿಖಿಲ್ ಗುಪ್ತ ಎಂಬುವವರ ವಿರುದ್ಧ ಸಂಚು ರೂಪಿಸಿದ ದೋಷಾರೋಪ ಹೊರಿಸಿತ್ತು ಅಮೆರಿಕ. ನಿಖಿಲ್ ಗುಪ್ತಾ 2023ರ ಜೂನ್ನಲ್ಲಿ ಜೆಕ್ ಗಣರಾಜ್ಯದ ಅಧಿಕಾರಿಗಳಿಂದ ಅರೆಸ್ಟ್ ಆಗಿದ್ದ. ಆದರೆ ಈ ನಿಖಿಲ್ ಗುಪ್ತಾ ಹೀಗೆ ಪನ್ನೂನ್ ಹತ್ಯೆಗೆ ಸ್ಕೆಚ್ ಹಾಕಲು ಒಪ್ಪಿದ್ದು ಯಾವ ಕಾರಣಕ್ಕಂತೆ ಗೊತ್ತಾ? ಅಮೆರಿಕದ ಆರೋಪ ಏನು?

ಕೇಸ್ ರದ್ದು ಮಾಡ್ತಾರೆ ಅಂತಾ ಸ್ಕೆಚ್?
ಅಂದಹಾಗೆ ಈಗ ಅಮೆರಿಕದ ಪ್ರಾಸಿಕ್ಯೂಟರ್ಸ್ ಮಾಡಿರುವ ಆರೋಪದಂತೆ, ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ನಿಖಿಲ್ ಗುಪ್ತಾ ಕೈಹಾಕಿದ್ದು ಆತನ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು ಮಾಡಿಕೊಳ್ಳಲು ಅಂತೆ. ಗುಜರಾತ್ನಲ್ಲಿ ತನ್ನ ವಿರುದ್ಧ ಕ್ರಿಮಿನಲ್ ಮೊಕದ್ದಮೆಯ ವಜಾಗೊಳಿಸುವ ಭರವಸೆ ನೀಡಿದ ನಂತರ ಗುಪ್ತಾ ಸಂಚು ರೂಪಿಸಲು ಒಪ್ಪಿಕೊಂಡಿದ್ದಾನೆಂದು ಅಮೆರಿಕ ಪ್ರಾಸಿಕ್ಯೂಟರ್ಸ್ ಆರೋಪ ಮಾಡಿದ್ದಾರೆ. ಈ ಮೂಲಕ ಮೊದಲೇ ಧಗಧಗಿಸಿದ್ದ ಭಾರತ & ಅಮೆರಿಕ ಸಂಬಂಧದಲ್ಲಿ ಸಂಚಲನ ಸೃಷ್ಟಿಯಾಗಿದೆ.

ಇದಕ್ಕೂ ಹಿಂದೆ ಹೇಳಿದ್ದು ಏನು?
ಖಾಲಿಸ್ತಾನ್ ರಾಷ್ಟ್ರ ಸ್ಥಾಪನೆ ಪ್ರತಿಪಾದಿಸಿದ್ದ ಅಮೆರಿಕ ಪ್ರಜೆ ಪನ್ನೂ ಹತ್ಯೆಗೆ ಸ್ಕೆಚ್ ಹಾಕಿದ್ದರು ಎಂಬ ಆರೋಪವನ್ನ ಅಮೆರಿಕ ಮಾಡಿತ್ತು. ಈ ಸಂಬಂಧ ಭಾರತದ ಪ್ರಜೆ ನಿಖಿಲ್ ಗುಪ್ತ ಎಂಬುವವರ ವಿರುದ್ಧ ಸಂಚು ರೂಪಿಸಿದ ದೋಷಾರೋಪ ಹೊರಿಸಿದೆ ಅಮೆರಿಕ. ನಿಖಿಲ್ ಗುಪ್ತಾ 2023 ರ ಜೂನ್ನಲ್ಲಿ ಜೆಕ್ ಗಣರಾಜ್ಯದ ಅಧಿಕಾರಿಗಳಿಂದ ಅರೆಸ್ಟ್ ಆಗಿದ್ದ. ಆದ್ರೆ ಈಗ ಇದೇ ನಿಖಿಲ್ ವಿರುದ್ಧ ಗಂಭೀರ ಆರೋಪ ಹೊರಿಸಲಾಗಿದೆ. ಇದರ ಜೊತೆಗೆ ಈತ ತನ್ನ ವಿರುದ್ಧ ಭಾರತದಲ್ಲಿ ಇರುವ ಕ್ರಿಮಿನಲ್ ಕೇಸ್ ರದ್ದು ಮಾಡಲು ಇಂತಹ ಕೃತ್ಯಕ್ಕೆ ಮುಂದೆ ಬಂದಿದ್ದ ಎಂಬ ಆರೋಪ ಮಾಡಿದೆ ಅಮೆರಿಕ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications