ಔರಂಗಜೇಬ್ ಸಮಾಧಿ ವಿವಾದ: ನಾಗ್ಪುರದಲ್ಲಿ ಘರ್ಷಣೆ 15 ಮಂದಿ ಪೊಲೀಸರಿಗೆ ಗಾಯ
ಸೋಮವಾರ ನಾಗ್ಪುರದಲ್ಲಿ ಕೋಮು ಗಲಭೆ ಉಂಟಾಗಿದ್ದು ಹಿಂಸಾಚಾರಕ್ಕೆ ತಿರುಗಿದೆ. ಸಂಭಾಜಿ ನಗರದಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ತೆರವು ಮಾಡುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮತ್ತು ಬಜರಂಗ ದಳ ಸೇರಿದಂತೆ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ ಬಳಿಕ ವಾಹನಗಳಿಗೆ ಬೆಂಕಿ ಹಚ್ಚಿದ್ದು ಕಲ್ಲು ತೂರಾಟ ನಡೆಸಲಾಗಿದೆ.
ಈ ಸಂಘರ್ಷದಲ್ಲಿ 15 ಪೊಲೀಸರು ಮತ್ತು 5 ನಾಗರಿಕರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ 17 ಜನರನ್ನು ವಶಕ್ಕೆ ಪಡೆಯಾಗಿದೆ. ಹಿಂಸಾಚಾರದಲ್ಲಿ ಪಾಲ್ಗೊಂಡವರನ್ನು ಪೊಲೀಸರು ಹುಡುಕಿ ಬಂಧಿಸುತ್ತಿದ್ದಾರೆ.

ವದಂತಿಗಳಿಂದ ಗಲಭೆ ಸೃಷ್ಟಿ
ಸುಳ್ಳು ವದಂತಿಗಳಿಂದಾಗಿ ಈ ಗಲಭೆ ಸಂಭವಿಸಿದೆ ಎಂದು ನಾಗ್ಪುರ ಪೊಲೀಸರು ಮಾಹಿತಿ ನೀಡಿದ್ದಾರೆ. ವದಂತಿಗಳಿಗೆ ಯಾರೂ ಕಿವಿಗೊಡದಂತೆ ಶಾಂತಿ ಕಾಪಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮನವಿ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಎಲ್ಲಾ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ವದಂತಿಗಳಿಂದಾಗಿ ಹಿಂಸಾಚಾರ ಸಂಭವಿಸಿದೆ ಎಂದು ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಕೂಡ ಹೇಳಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನಾಗ್ಪುರ ಗ್ರಾಮೀಣ ಪೊಲೀಸರನ್ನು ಕೂಡ ಕರೆಸಿಕೊಳ್ಳಲಾಗಿದೆ. ವದಂತಿ ಹರಡದಂತೆ ಯಡೆಯಲು ಸೈಬರ್ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಹಿಂಸಾಚಾರದ ಪರಿಣಾಮವಾಗಿ 25 ರಿಂದ 30 ದ್ವಿಚಕ್ರ ವಾಹನಗಳು ಮತ್ತು 2 ರಿಂದ 3 ಕಾರುಗಳು ಸುಟ್ಟುಹೋಗಿವೆ.
ವದಂತಿ ಹರಡುತ್ತಿದ್ದಂತೆ ಪರಿಸ್ಥಿತಿ ಉದ್ವಿಗ್ನವಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದು, ಮತ್ತಷ್ಟ ವಿಕೋಪಕ್ಕೆ ತಿರುಗಿದ ನಂತರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘರ್ಷಣೆಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಸೂಚಿಸುತ್ತವೆ. ಪ್ರತಿಭಟನೆ ವೇಳೆ ಜೆಸಿಬಿ ಯಂತ್ರಕ್ಕೆ ಕೂಡ ಬೆಂಕಿ ಹಚ್ಚಲಾಗಿದೆ ಎನ್ನುವ ವಿಡಿಯೋ ವೈರಲ್ ಆಗಿದೆ.
ಘರ್ಷಣೆ ಶುರುವಾಗುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹಿಂಸಾಚಾರವನ್ನು ನಿಯಂತ್ರಿಸಲು ಮತ್ತು ಪರಿಸ್ಥಿತಿಯನ್ನು ತಹಬದಿಗೆ ತರಲು ಪ್ರಯತ್ನ ಮಾಡಿದರು. ಇದೀಗ ಮತ್ತಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಕಟ್ಟೆಚ್ಚರ ವಹಿಸಲಾಗಿದೆ.
ಚಿಟ್ನಿಸ್ ಪಾರ್ಕ್ ಮತ್ತು ಮಹಲ್ ಪ್ರದೇಶಗಳಲ್ಲಿ ಜನಸಮೂಹವನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿ ಲಾಠಿ ಚಾರ್ಜ್ ನಡೆಸಿದ್ದಾರೆ. ಈ ಪ್ರದೇಶಗಳಲ್ಲಿ ಗಲಭೆ ಹೆಚ್ಚಾಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಘಟನೆ ಬಗ್ಗೆ ಅಗ್ನಿಶಾಮಕ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದು, ಎರಡು ಜೆಸಿಬಿಗಳನ್ನು ಸುಟ್ಟುಹಾಕಲಾಗಿದೆ, ಜನರನ್ನು ನಿಯಂತ್ರಿಸಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಆದರೆ ಅವರು ಕಲ್ಲು ತೂರಾಟ ನಡೆಸುತ್ತಿದ್ದು ನಮ್ಮ ಅಧಿಕಾರಿಯೊಬ್ಬರು ಕೂಡ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications