2018ರೊಳಗೆ ಗಂಗಾ ನೈರ್ಮಲ್ಯೀಕರಣ ಅಸಾಧ್ಯ: ಎನ್ ಎಂಸಿಜಿ
ನವದೆಹಲಿ, ಏಪ್ರಿಲ್ 6: ಕಲುಷಿತವಾಗಿರುವ ಗಂಗಾ ನದಿಯನ್ನು ಈಗ ನಿಗದಿಗೊಳಿಸಲಾಗಿರುವಂತೆ 2018ರೊಳಗೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ (ಎನ್ಎಂಸಿಜಿ) ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಗಂಗಾ ನದಿ ಶುದ್ಧೀಕರಣದ ಗುರಿಯನ್ನು 2019ಕ್ಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಹುಕೋಟಿ ವೆಚ್ಛದ ಗಂಗಾ ನದಿ ಶುದ್ಧೀಕರಣ ಪ್ರಕ್ರಿಯೆಯು ಮಂದಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಎನ್ಎಂಸಿಜಿ ಅಧಿಕಾರಿಗಳ ಸಭೆ ಕರೆದಿದ್ದರು.

ಈ ಸಭೆಯಲ್ಲಿ, ಪ್ರಧಾನಿ ಮೋದಿಯವರಿಗೆ ಅಂಕಿ-ಅಂಶಗಳ ಸಹಿತ ವಿವರಗಳನ್ನು ನೀಡಿದ ಅಧಿಕಾರಿಗಳು, ಗಂಗಾ ನದಿಯನ್ನು ಇನ್ನೊಂದೇ ವರ್ಷದಲ್ಲಿ ಸ್ವಚ್ಛಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಗಂಗಾ ನದಿಯ ಜನ ಬಳಕೆ ಇಲ್ಲದ ಜಾಗಗಳಲ್ಲಿ ಒಟ್ಟಾರೆ ಅಂದಾಜು 2,525 ಕಿ.ಮೀ.ವರೆಗೂ ಕೊಳಚೆ ತುಂಬಿಕೊಂಡಿದೆ. ಇದನ್ನು ಗುರುತಿಸಲೇ ಇಷ್ಟು ದಿನ ಬೇಕಾಯಿತು.
ಅಲ್ಲದೆ, ಶುದ್ಧೀಕರಣ ಪ್ರಕ್ರಿಯೆ ಆರಂಭಕ್ಕೂ ಮೊದಲು ತ್ಯಾಜ್ಯ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಬೇಕಿದೆ. ಆದರೆ, ಈ ಘಟಕಗಳನ್ನು ಎಲ್ಲಿ ಸ್ಥಾಪಿಸಬೇಕೆಂಬುದೇ ದೊಡ್ಡ ಸಮಸ್ಯೆಯಾಗಿದೆ. ಗಂಗಾ ನದಿಯ ಇಕ್ಕೆಲಗಳಲ್ಲಿ ಸಮತಟ್ಟಾದ ಪ್ರದೇಶಗಳೆಲ್ಲವೂ ಜನ ವಸತಿಯಿಂದ ತುಂಬಿ ಹೋಗಿವೆ. ಬಹುತೇಕ ಕಡೆ ನದಿಯ ಪಾತ್ರಗಳಲ್ಲಿ ಬೆಟ್ಟ ಗುಡ್ಡ, ಕಾಡು, ಕಣಿವೆ ಕಂದರಗಳಿವೆ.
ಹಾಗಾಗಿ, ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲು ಸ್ಥಳ ಗುರುತಿಸುವುದೇ ದೊಡ್ಡ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಪ್ರಧಾನಿಗೆ ಬುಧವಾರದ ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟರು.
ಸಭೆಯ ಅಂತಿಮ ನಿಮಿಷಗಳಲ್ಲಿ ಮಾತನಾಡಿದ ಪ್ರಧಾನಿ, ಈ ಬಗ್ಗೆ ವಿವರವಾಗಿ ಚರ್ಚಿಸಿ ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳಲು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.
2014ರ ಲೋಕಸಭಾ ಚುನಾವಣೆ ವೇಳೆ, ಬಿಜೆಪಿ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯೋಜನೆಗಳಲ್ಲಿ ಗಂಗಾ ನದಿ ನೈರ್ಮಲ್ಯೀಕರಣವೂ ಒಂದು. ಹಾಗಾಗಿ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಸುಮಾರು 20,000 ಕೋಟಿ ವೆಚ್ಛದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications