Breaking; ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟ, 6 ಜನರು ನಾಪತ್ತೆ
ಶಿಮ್ಲಾ, ಜುಲೈ 06; ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟವಾಗಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಇದುವರೆಗೂ 6 ಜನರು ನಾಪತ್ತೆಯಾಗಿದ್ದಾರೆ.
ರಾಜ್ಯದ ಶಿಮ್ಲಾ, ಮಣಿಕರನ್ ಮುಂತಾದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಮುಂಜಾನೆಯಿಂದ ಹಲವು ಪ್ರದೇಶಗಳಲ್ಲಿ ಮಳೆ ಬಿರುಸಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಆರಿದ್ರಾ ಮಳೆ ರೌದ್ರಾವತಾರ: ದ.ಕ ಜಿಲ್ಲಾ ಶಾಲಾ-ಕಾಲೇಜಿಗೆ ರಜೆ
ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಇದುವರೆಗೂ 6 ಜನರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಪ್ರಾಕೃತಿಕ ವಿಕೋಪ ಪರಿಹಾರ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
Breaking; ವಿಡಿಯೋ, ಮುಂಬೈನಲ್ಲಿ ಮಳೆಯ ಅಬ್ಬರ
ವಿಡಿಯೋ; ರಾಜ್ಯದ ಕುಲ್ಲು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ
#WATCH | Himachal Pradesh: Flash flood hits Manikaran valley of Kullu district due to heavy rainfall, dozens of houses and camping sites damaged in Choj village: SP Kullu Gurdev Sharma pic.twitter.com/NQhq8o8JXC
— ANI (@ANI) July 6, 2022
ಶಿಮ್ಲಾದಲ್ಲಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದೆ. ಒಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಮಂಗಳವಾರ ರಾತ್ರಿಯಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಲ್ಕಾ-ಶಿಮ್ಲಾ ರೈಲು ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಯಶಸ್ವಿ
ಚೋಗ್ ಎಂಬ ಪ್ರದೇಶದಲ್ಲಿ ನಾಲ್ವರು ಜಾನುವಾರುಗಳ ಸಮೇತ ಕೊಚ್ಚಿ ಹೋಗಿದ್ದಾರೆ. ವಿದ್ಯುತ್ ಘಟಕವೊಂದರ ಕಾಮಗಾರಿಯಲ್ಲಿ ತೊಡಗಿರುವ 25-30 ಕಾರ್ಮಿಕರು ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ.
ಮಣಿಕರಣ್ ಪ್ರದೇಶದಲ್ಲಿ ಅತಿ ಹೆಚ್ಚಿನ ರಭಸದಲ್ಲಿ ನೀರು ಹರಿಯುತ್ತಿದೆ. ಶಿಮ್ಲಾದಲ್ಲಿ ಮಳೆಯ ಕಾರಣ ಭೂ ಕುಸಿತ ಉಂಟಾಗಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ. ಈ ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕುಲ್ಲು ಜಿಲ್ಲೆಯ ಎಸ್ಪಿ ಗುರುದೇವ್ ಶರ್ಮಾ ಮಾತನಾಡಿ, "ನಾಪತ್ತೆಯಾಗಿರುವ ಜನರಿಗಾಗಿ ಶೋಧ ಆರಂಭವಾಗಿದೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ" ಎಂದು ಹೇಳಿದ್ದಾರೆ.
ಪ್ರವಾಹದಿಂದ ಇದುವರೆಗೂ 7 ಮನೆಗಳಿಗೆ ಹಾನಿಯಾಗಿದೆ. ಮೂರು ರಸ್ತೆ ಯೋಜನೆಗಳ ಕಾಮಗಾರಿಗೆ ಸಹ ಅಡಚಣೆ ಉಂಟಾಗಿದೆ. ಡ್ಯಾಂಗಳಿಂದ ಯಾವುದೇ ಸಂದರ್ಭದಲ್ಲಿ ನೀರು ಹೊರಬಿಡಲಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.