ಕರ್ನಾಟಕ, ದೆಹಲಿಯಲ್ಲಿ ಮೋಡ ಕವಿದ ವಾತಾವರಣ: ಲಘು ಮಳೆ ಮುನ್ಸೂಚನೆ!
ಕರ್ನಾಟಕ, ದೆಹಲಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ರಾಜ್ಯದ ಹಲವೆಡೆ ಇಂದು ಹಗುರದಿಂಧ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶದಲ್ಲಿ ಸಾಧಾರಣ ಮಳೆಯಾಘುವ ಸಾಧ್ಯತೆ ಇದೆ. ರಾಜ್ಯಾದ್ಯಾಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆಗಳಿವೆ. ಹರದನಹಳ್ಳಿ, ಹಾರಂಗಿ, ಕೃಷ್ಣರಾಜಸಾಗರ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ, ಗೋಣಿಕೊಪ್ಪಲು, ಕೆವಿಕೆ, ಮೈಸೂರು, ಚಿಕ್ಕಮಗಳೂರು, ಸುಂಟಿಕೊಪ್ಪ, ಕೊಪ್ಪ, ಮಡಿಕೇರಿಯಲ್ಲೂ ಮಳೆಯಾಗಿದೆ.
ದೆಹಲಿಯಲ್ಲಿ ಜನವರಿ 29 ರಂದು ಲಘು ಮಳೆಯಾಗಲಿದ್ದು ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ. ದೆಹಲಿ ಗರಿಷ್ಟ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್ನಲ್ಲಿ ನೆಲೆಸಿದೆ. ಹೊಸ ಪಾಶ್ಚಿಮಾತ್ಯ ಅಡಚಣೆಯು ಜನವರಿ 29 ರಂದು ಲಘು ಮಳೆಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಯ ಅಂಕಿಅಂಶಗಳ ಪ್ರಕಾರ, ರಾತ್ರಿ 7 ಗಂಟೆಗೆ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) 297 (ಕಳಪೆ ವರ್ಗ) ರಷ್ಟಿದೆ. ಸೊನ್ನೆ ಮತ್ತು 50 ರ ನಡುವಿನ AQI ಅನ್ನು 'ಒಳ್ಳೆಯದು', 51 ಮತ್ತು 100 'ತೃಪ್ತಿದಾಯಕ', 101 ಮತ್ತು 200 'ಮಧ್ಯಮ', 201 ಮತ್ತು 300 'ಕಳಪೆ', 301 ಮತ್ತು 400 'ಅತ್ಯಂತ ಕಳಪೆ' ಮತ್ತು 401 ಮತ್ತು 500 'ತೀವ್ರ' ಎಂದು ಪರಿಗಣಿಸಲಾಗುತ್ತದೆ.

ಸುದ್ದಿ ಸಂಸ್ಥೆ ಪಿಟಿಐಗೆ ವಿವರಗಳನ್ನು ನೀಡಿದ ಸ್ಕೈಮೆಟ್ ವೆದರ್ ಸರ್ವಿಸಸ್ನ ಮಹೇಶ್ ಪಲಾವತ್ ಅವರ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ದೆಹಲಿಯಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಬಹುದು.
"ಇಂದಿನ ಗರಿಷ್ಠ ತಾಪಮಾನವು ಸುಮಾರು 4 ಡಿಗ್ರಿಗಳಷ್ಟು ಕಡಿಮೆಯಾಗಿದೆ. ಜನವರಿ 25 ರಂದು ಗರಿಷ್ಠ ತಾಪಮಾನ 21.6 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಇಂದು ಅದು 17.3 ಡಿಗ್ರಿ ಸೆಲ್ಸಿಯಸ್ನಲ್ಲಿ ನೆಲೆಸಿದೆ. ಕನಿಷ್ಠ ತಾಪಮಾನ 12.8 ಆಗಿತ್ತು. ಇನ್ನೆರಡು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ'' ಎಂದು ಹೇಳಿದರು.

ಮೋಡಗಳು ಹಗಲಿನಲ್ಲಿ ಶಾಖವನ್ನು ಹಿಡಿದಿಟ್ಟುಕೊಳ್ಳುತ್ತವೆ. ರಾತ್ರಿಯ ತಾಪಮಾನವನ್ನು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಆದಾಗ್ಯೂ, ಮೋಡ ಕವಿದ ವಾತಾವರಣವು ಸೂರ್ಯನಿಗೆ ಅಡ್ಡಿಯಾಗುವುದರಿಂದ ಹಗಲಿನ ತಾಪಮಾನವನ್ನು ಕಡಿಮೆ ಮಾಡುತ್ತದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications