ಅಮೃತ್ಪಾಲ್ ಬಂಧನಕ್ಕೂ ಮುನ್ನ ಪೊಲೀಸ್ ಅಧಿಕಾರಿಗಳಿಗೆ ಪಂಜಾಬ್ ಸಿಎಂ ಕೊಟ್ಟ ಆದೇಶವೇನು?
ಅಮೃತಸರ, ಏಪ್ರಿಲ್. 25: 36 ದಿನಗಳಿಂದ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ 'ವಾರಿಸ್ ಪಂಜಾಬ್ ದೇ' ಮುಖ್ಯಸ್ಥ ಅಮೃತಪಾಲ್ ಸಿಂಗ್ ಮೊಗಾದ ಹಳ್ಳಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಸಿಕ್ಕಿತು. ಆಗ ಅವರು ಮಾಡಿದ ಮೊದಲ ಕೆಲಸ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಪ್ರಮಖ ಸೂಚನೆ ನೀಡಿದ್ದು.
ಹೌದು, ವಿಷಯ ತಿಳಿಯುತ್ತಿದ್ದಂತೆ ಸಿಎಂ ಭಗವಂತ್ ಮಾನ್ ಅವರು, ಭಾನುವಾರದ ಮಧ್ಯಂತರ ರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ಗುರುದ್ವಾರದ ಪಾವಿತ್ರ್ಯತೆಯನ್ನು ಕಾಪಾಡಲು ಮತ್ತು ಯಾವುದೇ ಗುಂಡುಗಳನ್ನು ಹಾರಿಸದಂತೆ ಖಚಿತಪಡಿಸಿಕೊಳ್ಳ ನಿರ್ದೇಶನ ನೀಡಿದ್ದರು ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

"ಬರ್ಗರಿ (Bargari ) ಮತ್ತು ಬೆಹಬಲ್ ಕಲಾನ್ (Behbal Kalan) ನಂತೆಯೇ ಈ ಸಮಸ್ಯೆ ಕೂಡ ವರ್ಷಗಟ್ಟಲೆ ರಾಜ್ಯವನ್ನು ಕಾಡಲು ಸಾಧ್ಯವಿಲ್ಲ. ಹೀಗಾಗಿಯೇ ಗುಂಡುಗಳನ್ನು ಹಾರಿಸಬಾರದು ಮತ್ತು ಪೊಲೀಸರು ಗುರುದ್ವಾರದ ಆವರಣಕ್ಕೆ ಪ್ರವೇಶಿಸಬಾರದು ಎಂದು ಅವರು ಆದೇಶವನ್ನು ನೀಡಿದರು" ಎಂದು ಸಿಎಂ ಭಗವಂತ್ ಮಾನ್ ಅವರ ಸಹಾಯಕರನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.
ಇದರ ಜೊತೆಗೆ ಘಟನೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ಗೆ ಕರೆ ಮಾಡಿ ಅವರಿಂದ ಎಲ್ಲಾ ವಿಷಯಗಳನ್ನು ತೆಗೆದುಕೊಳ್ಳುತ್ತಿದ್ದರು ಎನ್ನಲಾಗಿದೆ.
"ಇಡೀ ಗ್ರಾಮವನ್ನು ಸುತ್ತುವರಿಯಲು ನಿರ್ಧರಿಸಿದಾಗ, ಭಾರೀ ಪೊಲೀಸ್ ಭದ್ರತೆ ಇರಬೇಕು ಎಂದು ಡಿಜಿಪಿಗೆ ಸೂಚನೆ ನೀಡಲಾಗಿತ್ತು. ಸಮವಸ್ತ್ರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಪೊಲೀಸರು ಸೇರಿದರೆ ಗಾಬರಿ ಅಥವಾ ಪ್ರತಿಭಟನೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಸಿವಿಲ್ ಬಟ್ಟೆಯಲ್ಲಿ ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲು ನಿರ್ಧರಿಸಲಾಗಿತ್ತು" ಎಂದು ಅವರು ಮಾಹಿತಿ ನೀಡಿದ್ದಾರೆ.
ಸದ್ಯ ಅಮೃತಪಾಲ್ ಅವರ ಎಲ್ಲಾ ಜಾಲವನ್ನು ಸಂಪೂರ್ಣವಾಗಿ ಕಿತ್ತುಹಾಕಲಾಗಿದೆ. ಅವರ ಪ್ರಮುಖ ಸಹಾಯಕರನ್ನು ಬಂಧಿಸಿ ಜೈಲಿನಲ್ಲಿಡಲಾಗಿದೆ. ಈ ಹಿಂದೆ ಆತನಿಗೆ ಆಶ್ರಯ ನೀಡಿದವರೂ ಬಂಧನಕ್ಕೆ ಒಳಗಾಗಿದ್ದು, ಆತನಿಗೆ ಆಸರೆಯೇ ಇಲ್ಲವಾಗಿತ್ತು. ಹೀಗಾಗಿ ಆತನಿಗೆ ಜನರು ತಮ್ಮ ಕಾರುಗಳಲ್ಲಿ ಲಿಫ್ಟ್ ನೀಡುವುದನ್ನು ನಿಲ್ಲಿಸಿದ್ದರು ಎಂದು ಸಿಎಂ ಭಗವಂತ್ ಮಾನ್ ಅವರಿಗೆ ತಿಳಿಸಲಾಗಿದೆ ಎಂದು ಸಹಾಯಕರು ಹೇಳಿದ್ದಾರೆ.
ಈ ಬಾರಿ, ಮಾರ್ಚ್ 18 ರಂದು ನಡೆದ ಪ್ರಯತ್ನಕ್ಕಿಂತ ಹೆಚ್ಚಿನ ರೀತಿಯಲ್ಲಿ ಪೊಲೀಸರು ಉತ್ತಮವಾಗಿ ಸಿದ್ಧರಾಗಿದ್ದರು. ಗುರುದ್ವಾರವನ್ನು ಸುತ್ತುವರಿಯುವ ಮೊದಲು ಗ್ರಾಮದಾದ್ಯಂತ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ಯಾವುದೇ ಪ್ರಯತ್ನವು ನಿಷ್ಪ್ರಯೋಜಕವಾಗಬೇಕು ಎಂದು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡು ಬಳಿಕ ಅಮೃತ್ಪಾಲ್ಗೆ ಶರಣಾಗುವಂತೆ ಸೂಚಿಸಿದ್ದರು.
ಹೀಗಾಗಿ ಬೇರೆ ದಾರಿಯಿಲ್ಲದೆ ಅಮೃತಪಾಲ್ ಶರಣಾದರು. ತಕ್ಷಣ ಅವರನ್ನು ಬಂಧಿಸಲಾಯಿತು. ಶರಣಾಗುವ ಮುನ್ನ, ಹತ್ಯೆಗೀಡಾದ ಖಲಿಸ್ತಾನಿ ಹೋರಾಟಗಾರ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಅವರ ಭಾವಚಿತ್ರದ ಮುಂದೆ ವಿಡಿಯೋ ರೆಕಾರ್ಡ್ ಮಾಡಿ, ಶರಣಾಗುವುದಾಗಿ ಘೋಷಿಸಿದ್ದರು.
ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಅವರ ಸ್ಥಳೀಯ ಗ್ರಾಮವಾದ ರೋಡ್ನಲ್ಲಿರುವ ಗುರುದ್ವಾರ ಮತ್ತು ವಾರಿಸ್ ಪಂಜಾಬ್ ದೇನ ಮುಖ್ಯಸ್ಥರಾಗಿ ಕಳೆದ ವರ್ಷ ಅಧಿಕಾರ ವಹಿಸಿಕೊಂಡ ಗುರುದ್ವಾರದ ಸಾಂಪ್ರದಾಯಿಕ ಉಡುಪಿನಲ್ಲಿ ಹೊರ ಬಂದ ನಂತರ ಅವರನ್ನು ಬಂಧಿಸಲಾಯಿತು.
ಅಮೃತಪಾಲ್ ಅವರನ್ನು ಬಂಧಿಸುವಲ್ಲಿ ವಿಫಲವಾದ ಕಾರಣಕ್ಕಾಗಿ ಕಳೆದ ತಿಂಗಳಿನಿಂದ ಟೀಕೆಗೆ ಒಳಗಾಗುತ್ತಿದ್ದ ಮುಖ್ಯಮಂತ್ರಿ ಭಗವಂತ್ ಮಾನ್, ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ರಕ್ತಪಾತವನ್ನು ಬಯಸುವುದಿಲ್ಲ ಎಂದು ಒತ್ತಿ ಹೇಳಿದ್ದರು ಎನ್ನಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications