ದೆಹಲಿಯಲ್ಲಿ ಎಚ್ಡಿಕೆ, ದೇವೇಗೌಡರಿಂದ ರಾಜನಾಥ್ ಸಿಂಗ್ ಭೇಟಿ

Recommended Video

      ದೆಹಲಿಯಲ್ಲಿ ರಾಜನಾಥ್ ಸಿಂಗ್ ದೇವೇಗೌಡ ಭೇಟಿ | Oneindia Kannada

      ದೆಹಲಿ, ಅಕ್ಟೋಬರ್ 05: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ದೆಹಲಿಯಲ್ಲಿಂದು(ಅ.05) ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.

      ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಭೀಕರ ಪ್ರವಾಹಕ್ಕೆ ತುತ್ತಾದ ಕರ್ನಾಟಕದ ಕೆಲವು ಜಿಲ್ಲೆಗಳ ದುರಸ್ಥಿ ಕಾರ್ಯಕ್ಕೆ ಕೇಂದ್ರ ಸರ್ಕಾರ ನೆರವು ಬೇಕೆಂದು ಈ ಸಂದರ್ಭದಲ್ಲಿ ಉಭಯ ನಾಯಕರು ಮನವಿ ಮಾಡಿಕೊಂಡರು.

      ಕೊಡಗಿನಲ್ಲಿ ಆಗಸ್ಟ್ ಎರಡನೇ ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಪ್ರವಾಹ ತಲೆದೂರಿತ್ತು. ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನ ಮೃತರಾಗಿದ್ದರೆ, ಸಾವಿರಾರು ಕೋಟಿ ಮೌಲ್ಯದ ಜಮೀನು, ಆಸ್ತಿ ನಷ್ಟವಾಗಿದೆ.

      CM HD kumaraswamy and HD Deve Gowda meet HM Rajnath Singh in Delhi

      ಸದ್ಯಕ್ಕೆ ಸಂಚಾರಕ್ಕೆ ರಸ್ತೆಗಳೂ ಇಲ್ಲದೆ ಜನ ಪರದಾಡುವಂತಾಗಿದೆ. 1500 ಕಿ.ಮೀ. ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದೆ. 150 ಕಿ.ಮೀ. ರಸ್ತೆಯನ್ನು ಪರ್ಯಾಯ ಮಾರ್ಗದಲ್ಲಿ ಹೊಸದಾಗಿ ನಿರ್ಮಿಸಬೇಕಿದೆ. 58 ಸೇತುವೆ, 258 ಕಟ್ಟಡಗಳಿಗೆ ಹಾನಿಯಾಗಿದೆ. ತನ್ನಿಮಿತ್ತ ಕೇಂದ್ರ ಸರ್ಕಾರದ ನೆರವನ್ನು ರಾಜ್ಯ ಸರ್ಕಾರ ಬಯಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+