ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಎಚ್ಡಿಕೆ, ದೇವೇಗೌಡರಿಂದ ರಾಜನಾಥ್ ಸಿಂಗ್ ಭೇಟಿ

|
Google Oneindia Kannada News

Recommended Video

ದೆಹಲಿಯಲ್ಲಿ ರಾಜನಾಥ್ ಸಿಂಗ್ ದೇವೇಗೌಡ ಭೇಟಿ | Oneindia Kannada

ದೆಹಲಿ, ಅಕ್ಟೋಬರ್ 05: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ದೆಹಲಿಯಲ್ಲಿಂದು(ಅ.05) ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.

ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಭೀಕರ ಪ್ರವಾಹಕ್ಕೆ ತುತ್ತಾದ ಕರ್ನಾಟಕದ ಕೆಲವು ಜಿಲ್ಲೆಗಳ ದುರಸ್ಥಿ ಕಾರ್ಯಕ್ಕೆ ಕೇಂದ್ರ ಸರ್ಕಾರ ನೆರವು ಬೇಕೆಂದು ಈ ಸಂದರ್ಭದಲ್ಲಿ ಉಭಯ ನಾಯಕರು ಮನವಿ ಮಾಡಿಕೊಂಡರು.

ಕೊಡಗಿನಲ್ಲಿ ಆದ ನಷ್ಟದ ಅಂದಾಜು ಅಂಕಿ-ಅಂಶಗಳುಕೊಡಗಿನಲ್ಲಿ ಆದ ನಷ್ಟದ ಅಂದಾಜು ಅಂಕಿ-ಅಂಶಗಳು

ಕೊಡಗಿನಲ್ಲಿ ಆಗಸ್ಟ್ ಎರಡನೇ ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಪ್ರವಾಹ ತಲೆದೂರಿತ್ತು. ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನ ಮೃತರಾಗಿದ್ದರೆ, ಸಾವಿರಾರು ಕೋಟಿ ಮೌಲ್ಯದ ಜಮೀನು, ಆಸ್ತಿ ನಷ್ಟವಾಗಿದೆ.

CM HD kumaraswamy and HD Deve Gowda meet HM Rajnath Singh in Delhi

ಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆ ಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆ

ಸದ್ಯಕ್ಕೆ ಸಂಚಾರಕ್ಕೆ ರಸ್ತೆಗಳೂ ಇಲ್ಲದೆ ಜನ ಪರದಾಡುವಂತಾಗಿದೆ. 1500 ಕಿ.ಮೀ. ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದೆ. 150 ಕಿ.ಮೀ. ರಸ್ತೆಯನ್ನು ಪರ್ಯಾಯ ಮಾರ್ಗದಲ್ಲಿ ಹೊಸದಾಗಿ ನಿರ್ಮಿಸಬೇಕಿದೆ. 58 ಸೇತುವೆ, 258 ಕಟ್ಟಡಗಳಿಗೆ ಹಾನಿಯಾಗಿದೆ. ತನ್ನಿಮಿತ್ತ ಕೇಂದ್ರ ಸರ್ಕಾರದ ನೆರವನ್ನು ರಾಜ್ಯ ಸರ್ಕಾರ ಬಯಸಿದೆ.

English summary
Karnataka CM HD Kumaraswamy meets Home Minister Rajnath Singh at his residence seeking Centre's assistance for relief work and rebuilding of the damaged infrastructure in the flood-hit areas of Karnataka. Former PM HD Deve Gowda also present.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X