ಜೆಡಿಎಸ್ನಿಂದ ಅಧಿಕೃತವಾಗಿ ಸಿಎಂ ಇಬ್ರಾಹಿಂ ಜೊತೆಗೆ ಮತ್ತೊಬ್ಬರಿಗೂ ಗೇಟ್ಪಾಸ್ : ಗೌಡ್ರು ಹೇಳಿದ್ದೇನು?
ಬೆಂಗಳೂರು,ಡಿಸೆಂಬರ್09: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ತಿಳಿಸಿದರು.
ಈ ಕುರಿತು ಶನಿವಾರ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಬ್ಬರು ನಾಯಕರ ಉಚ್ಛಾಟನೆ ನಿರ್ಧಾರವನ್ನು ಪ್ರಕಟಿಸಿದರು.

ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದು ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು.
ಮಂಡ್ಯ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು, ಇಬ್ರಾಹಿಂ ಅವರನ್ನು ಹಾಗೂ ಪಶ್ಚಿಮ ಬಂಗಾಳ ಜೆಡಿಎಸ್ ಘಟಕದ ಅಧ್ಯಕ್ಷ ಪುನೀತ್ ಕುಮಾರ ಸಿಂಗ್ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ನಿರ್ಣಯವನ್ನು ಕಾರ್ಯಕಾರಿಣಿ ಸಭೆಯಲ್ಲಿ ಮಂಡನೆ ಮಾಡಿದ್ದರು. ಈ ಇಬ್ಬರು ಮಂಡಿಸಿದ ನಿರ್ಣಯಗಳನ್ನು ಕಾರ್ಯಕಾರಿಣಿಯೂ ಸರ್ವಾನುಮತದಿಂದ ಅಂಗೀಕಾರ ಮಾಡಿತು.
ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರ ಹಾಜರಿ
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜತೆಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸೇರಿದಂತೆ ಎಲ್ಲಾ ರಾಜ್ಯಗಳ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಿದ್ದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾ ಖಾನ್, ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಪುನೀತ್ ಕುಮಾರ ಸಿಂಗ್, ಹರಿಯಾಣ ರಾಜ್ಯಾಧ್ಯಕ್ಷ ಜೋರಾ ಸಿಂಗ್, ಪಂಜಾಬ್ ರಾಜ್ಯಾಧ್ಯಕ್ಷ ಅವತಾರ್ ಸಿಂಗ್, ಜಮ್ಮು ಮತ್ತು ಕಾಶ್ಮೀರದ ರಾಜ್ಯಾಧ್ಯಕ್ಷ ರಾಮ್ ರತನ್ ಶರ್ಮ, ಉತ್ತರಾಖಂಡ್ ರಾಜ್ಯಾಧ್ಯಕ್ಷ ಹರ್ ಜಿತ್ ಸಿಂಗ್, ಸುರೇಶ್ ದಾಸ್, ಮಹಾರಾಷ್ಟ್ರ ರಾಜ್ಯಾಧ್ಯಕ್ಷ ನರೇಂದ್ರ ಸಿಂಗ್ ಹರಿದಾಸ್ ಕಂತಾರಿಯಾ, ಗುಜರಾತ್ ರಾಜ್ಯಾಧ್ಯಕ್ಷ ಶಾ ಗಣಪತಿ ಭಾಯ್, ಬಿಹಾರ ರಾಜ್ಯಾಧ್ಯಕ್ಷ ಹಲ್ದಾರ್ ಕಾಂತ್ ಮಿಶ್ರಾ, ಬಿಹಾರದ ಕಾರ್ಯಾಧ್ಯಕ್ಷ ಸುನೀಲ್ ಕುಮಾರ್ ಪಾಟೀಲ್
ತಮಿಳುನಾಡು ರಾಜ್ಯಾಧ್ಯಕ್ಷ ಕೆ.ಎಂ. ಪೊನ್ನುಸ್ವಾಮಿ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಉತ್ತರಾಖಂಡದ ಸುರೇಶ್ ದಾಸ್, ಮಹಾರಾಷ್ಟ್ರದ ಮೋಹದ್ ಅಜ್ಮಲ್ ಖಾನ್ ಮತ್ತು ನರೇಂದ್ರ ಸಿಂಗ್ ಹರಿದಾಸ್, ಗುಜರಾತಿನ ದೋಹಲಿಯಾ ಭರತ್ ಭಯ್, ಉತ್ತರ ಪ್ರದೇಶದ ಓಂಕಾರ್ ಸಿಂಗ್ ಮತ್ತು ಎಸ್. ಎಂ. ತಾಜ್ ಆಲಂ, ತಮಿಳುನಾಡಿನ ಸಿ.ಬಲರಾಮ್, ದೆಹಲಿಯ ಕುಲದೀಪ ರಾನ (ರಮೇಶ್), ತಮಿಳುನಾಡಿನ ಎನ್. ಎಸ್. ಎಂ. ಗೌಡ, ತೆಲಂಗಾಣದ ಬಾಲಕೃಷ್ಣ ರಾವ್, ಆಂಧ್ರಪ್ರದೇಶದ ಸಿ.ಹೆಚ್. ಬಾಲಕಿಶನ್ ರಾವ್ ಸಭೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕದಿಂದ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆಗೆ ವಿಧಾನ ಪರಿಷತ್ ಸದಸ್ಯ ಬಿಎಂ ಫಾರೂಕ್, ಮಾಜಿ ಸಚಿವ - ಶಾಸಕ ಹೆಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಜಿಟಿ ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಹೆಚ್.ಕೆ.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಲೀಲಾದೇವಿ ಆರ್ ಪ್ರಸಾದ್, ಮಾಜಿ ಶಾಸಕರಾದ ಎಂ.ಎಸ್.ನಾರಾಯಣ ರಾವ್, ದೇವಾನಂದ್ ಚೌಹಾಣ್, ರಾಜಾ ವೆಂಕಟಪ್ಪ ನಾಯಕ, ಎ.ಎಸ್.ರವೀಂದ್ರ, ಕೆ.ಎಸ್. ಲಿಂಗೇಶ್ ಹಾಗೂ ಮಹಾಂತೇಶ್ ಪಾಟೀಲ್, ತಿಮ್ಮಾ ರೆಡ್ಡಿ, ಶೀಲಾ ನಾಯಕ್, ವಿ.ನಾರಾಯಣಸ್ವಾಮಿ, ರುತ್ ಮನೋರಮಾ, ಬಿ.ಕಾಂತರಾಜು, ವಿ.ಎನ್. ಮಂಜುನಾಥ್, ಎ.ಪಿ.ರಂಗನಾಥ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications