ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ
ಅಮರಾವತಿ, ಅಕ್ಟೋಬರ್ 09: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣೆಗೆ ದಿನಾಂಕ ಘೋಷಿಸಿದ ಬೆನ್ನಲ್ಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿಪಿ ಮುಖ್ಯಸ್ಥರೂ ಆಗಿರುವ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024 ರ ಮಾರ್ಚ್ನಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಬಹುದು. ನಾವು ಪಕ್ಷದ ಪ್ರಣಾಳಿಕೆಯನ್ನು ಫೆಬ್ರವರಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸೋಮವಾರ ಘೋಷಿಸಿದರು.

ವಿಜಯವಾಡದ ಇಂದಿರಾಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ವೈಎಸ್ಆರ್ಸಿಪಿ ಕಾರ್ಯಕರ್ತರೊಂದಿಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದ್ದು, ಚುನಾವಣೆಗೆ ಸಜ್ಜಾಗುವಂತೆ ಪಕ್ಷದ ನಾಯಕರಿಗೆ ತಿಳಿಸಿದರು. ಚುನಾವಣೆ ಗೆಲ್ಲಲು ತಾವು ಯಾವತ್ತೂ ಮೈತ್ರಿಯನ್ನು ಅವಲಂಭಿಸಿಲ್ಲ. ಪಕ್ಷ ಗೆಲ್ಲಲು ಜನರು, ಕಾರ್ಯಕರ್ತರು ಮತ್ತು ದೇವರ ಮೇಲೆ ಮಾತ್ರ ಅವಲಂಬಿತರಾಗಿದ್ದೇವೆ. ಚುನಾವಣೆಯಲ್ಲಿ ಮತ್ತೊಮ್ಮೆ ಪಕ್ಷ ದೊಡ್ಡ ಜನಾದೇಶದೊಂದಿಗೆ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಎಪಿಗೆ ಜಗನ್ ಏಕೆ ಬೇಕು', 'ಜಗನಣ್ಣ ಆರೋಗ್ಯ ಸುರಕ್ಷಾ' ಮತ್ತು ಬಸ್ ಯಾತ್ರೆ ಸೇರಿದಂತೆ ನಾಲ್ಕು ಜನ ಸಂಪರ್ಕ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು. ಅವುಗಳನ್ನು ನವೆಂಬರ್ನಲ್ಲಿ ಪ್ರಾರಂಭಿಸಲಾಗುವುದು. ಬಸ್ ಯಾತ್ರೆಯು ಬಡವರಿಗೆ ಈ ಸರ್ಕಾರ ಮಾಡಿದ್ದೆಲ್ಲವನ್ನೂ ತಿಳಿಸುವ ಪ್ರವಾಸವಾಗಿದೆ. ಅಕ್ಟೋಬರ್ 25 ರಿಂದ ಡಿಸೆಂಬರ್ 31 ರವರೆಗೆ ಎಲ್ಲಾ 175 ಕ್ಷೇತ್ರಗಳಲ್ಲಿ ಎಸ್ಸಿ/ಎಸ್ಟಿ/ಬಿಸಿ/ ಅಲ್ಪಸಂಖ್ಯಾತ ಮುಖಂಡರಿಂದ ಸಾರ್ವಜನಿಕ ಸಭೆಗಳು ನಡೆಯಲಿದ್ದು, ಪ್ರತಿದಿನ 3 ಸಭೆಗಳು ನಡೆಯಲಿವೆ. ಆಡುವುದು ಜಾತಿ ಯುದ್ಧವಲ್ಲ ಆದರೆ ವರ್ಗದ ಯುದ್ಧ. ಇದು ಬಡವರು ಮತ್ತು ಗಣ್ಯ ಶ್ರೀಮಂತರ ನಡುವಿನ ಘರ್ಷಣೆಯಾಗಿದೆ ಎಂದು ಅವರು ಹೇಳಿದರು.
ವಿವಿಧ ಯೋಜನೆಗಳ ಮೂಲಕ ಮಹಿಳಾ ಗುಂಪುಗಳಿಗೆ 31 ಸಾವಿರ ಕೋಟಿ ಅನುದಾನ ನೀಡಲಾಗುವುದು. ಜನವರಿ 1, 2024 ರಿಂದ ಕಲ್ಯಾಣ ಪಿಂಚಣಿಯನ್ನು 3,000 ರೂ.ಗೆ ಹೆಚ್ಚಿಸಲಾಗುವುದು. ಜನವರಿ 10-20 ರಿಂದ ವೈಎಸ್ಆರ್ ಚೇಯುತ ಯೋಜನೆ ಜಾರಿಗೆ ಬರಲಿದೆ ಮತ್ತು ಮಹಿಳೆಯರಿಗೆ 19,000 ಕೋಟಿ ರೂಪಾಯಿಗಳನ್ನು ವಿತರಿಸಲಾಗುವುದು ಮತ್ತು ಅವರು ಜನವರಿ 20-30 ರಿಂದ ಆಸರಾ ಕಾರ್ಯಕ್ರಮದ ಮೂಲಕ 26,000 ಕೋಟಿ ರೂಪಾಯಿಗಳನ್ನು ಆರ್ಥಿಕ ಸಹಾಯವಾಗಿ ವಿತರಿಸುತ್ತಾರೆ ಎಂದು ತಿಳಿಸಿದರು.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications