ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಸೇರಿ ಕೆಲವು ನಾಯಕರಿಗೆ ಗೃಹ ಬಂಧನ, ಕಚೇರಿಗೆ ಬೀಗ
ಶ್ರೀನಗರ, ಆಗಸ್ಟ್ 5: 370ನೇ ವಿಧಿಯನ್ನು ರದ್ದುಪಡಿಸಿದ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದ ಹಿನ್ನೆಲೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಅವರ ಪಕ್ಷದ ಕೆಲವು ಹಿರಿಯ ನಾಯಕರನ್ನು ಶನಿವಾರ ಗೃಹಬಂಧನದಲ್ಲಿ ಇರಿಸಲಾಗಿದೆ.
ಇಂದು ಇತರ ಹಿರಿಯ ಪಿಡಿಪಿ ನಾಯಕರೊಂದಿಗೆ ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಅಲ್ಲದೆ ನನ್ನ ಪಕ್ಷದ ಹಲವಾರು ಜನರನ್ನು ಪೊಲೀಸ್ ಠಾಣೆಗಳಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ. ಸುಪ್ರೀಂ ಕೋರ್ಟ್ಗೆ ಇಲ್ಲಿನ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಮಾಹಿತಿ ನೀಡಿ ತಮ್ಮ ಮೇಲೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಶ್ರೀನಗರದಾದ್ಯಂತ 370 ನೇ ವಿಧಿಯನ್ನು ರದ್ದುಗೊಳಿಸಿದ ನಡೆಯನ್ನು ಆಚರಿಸಲು ಕಾಶ್ಮೀರಿಗಳಿಗೆ ಕರೆ ನೀಡುವ ಬೃಹತ್ ಹೋರ್ಡಿಂಗ್ಗಳನ್ನು ಹಾಕಲಾಗಿದೆ. ಆದರೆ ಜನರ ನಿಜವಾದ ಭಾವನೆಯನ್ನು ಉಸಿರುಗಟ್ಟಿಸಲು ವಿವೇಚನಾರಹಿತ ಶಕ್ತಿಯನ್ನು ಬಳಸಲಾಗುತ್ತಿದೆ. ಆರ್ಟಿಕಲ್ 370 ವಿಚಾರಣೆಗೆ ಬಂದಿರುವ ಸಮಯದಲ್ಲಿ ಸುಪ್ರೀಂ ಕೋರ್ಟ್ ಈ ಬೆಳವಣಿಗೆಗಳ ಬಗ್ಗೆ ನಿಖರ ಮಾಹಿತಿ ತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕಳೆದ 4 ವರ್ಷಗಳ ಹಿಂದೆ ಅಂದರೆ ಆಗಸ್ಟ್ 5, 2019 ರಂದು ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ಹಿಂತೆಗೆದುಕೊಂಡಿತ್ತು. ಅಲ್ಲದೆ ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.
I’ve been put under house arrest along with other senior PDP leaders today. This comes after a midnight crackdown where scores of my party men are illegally detained in police stations. GOIs false claims about normalcy to the SC stands exposed by theirs actions driven by… pic.twitter.com/gqp25Ku2CJ
— Mehbooba Mufti (@MehboobaMufti) August 5, 2023
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಆರ್ಟಿಕಲ್ 370 ರದ್ದತಿಯ ನಾಲ್ಕನೇ ವಾರ್ಷಿಕೋತ್ಸವದಂದು ಶಾಂತಿಯುತ ಕಾರ್ಯಕ್ರಮವನ್ನು ಆಯೋಜಿಸಲು ಪಕ್ಷಕ್ಕೆ ಅನುಮತಿ ನಿರಾಕರಿಸಿದ ನಂತರ ಪಕ್ಷದ ನಾಯಕರ ವಿರುದ್ಧ ಮಧ್ಯರಾತ್ರಿಯಲ್ಲಿ ಗೃಹ ಬಂಧನ ವಿಧಿಸಲಾಯಿತು. ಮಾಜಿ ಸಚಿವರಾದ ಅಬ್ದುಲ್ ರೆಹಮಾನ್ ವೀರಿ, ನಯೀಮ್ ಅಖ್ತರ್ ಮತ್ತು ಆಸಿಯಾ ನಕಾಶ್, ಪಿಡಿಪಿ ಪ್ರಧಾನ ಕಾರ್ಯದರ್ಶಿ ಗುಲಾಮ್ ನಹಿ ಲೋನ್ ಹಂಜುರಾ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಮೆಹಬೂಬ್ ಬೇಗ್ ಮತ್ತು ಜಿಲ್ಲಾಧ್ಯಕ್ಷ ಬುದ್ಗಾಮ್ ಮೊಹಮ್ಮದ್ ಯಾಸಿನ್ ಭಟ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಕ್ಷದ ವಕ್ತಾರರು ಆರೋಪಿಸಿದ್ದಾರೆ.
ಪಕ್ಷದ ಮುಖ್ಯ ವಕ್ತಾರ ಸೈಯದ್ ಸುಹೇಲ್ ಬುಖಾರಿ, ಯುವ ಅಧ್ಯಕ್ಷ ವಹೀದ್ ಉರ್ ರೆಹಮಾನ್ ಪರ್ರಾ, ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಕೊಹಶೀನ್, ಹೆಚ್ಚುವರಿ ವಕ್ತಾರ ಅಬ್ದುಲ್ ರೌಫ್ ಭಟ್, ಜಿಲ್ಲಾಧ್ಯಕ್ಷ ಶ್ರೀನಗರ ಅಬ್ದುಲ್ ಖಯೂಮ್ ಭಟ್ ಮತ್ತು ಇತರ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ವಿವಿಧ ಪೊಲೀಸ್ ಠಾಣೆಗಳಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಶೇರ್-ಎ-ಕಾಶ್ಮೀರ್ ಪಾರ್ಕ್ ಬಳಿಯ ಪಿಡಿಪಿ ಪ್ರಧಾನ ಕಚೇರಿಗೆ ಹೋಗುವ ರಸ್ತೆಗಳನ್ನು ಸೀಲ್ ಮಾಡಲಾಗಿದೆ ಮತ್ತು ಯಾವುದೇ ಸಿಬ್ಬಂದಿಯನ್ನು ಕಚೇರಿಗೆ ಪ್ರವೇಶಿಸಲು ಅನುಮತಿಸಲಾಗಿಲ್ಲ. ನ್ಯಾಷನಲ್ ಕಾನ್ಫರೆನ್ಸ್ (NC) ತನ್ನ ಪಕ್ಷದ ಪ್ರಧಾನ ಕಚೇರಿ ನವಾ-ಇ-ಸುಬಾಹ್ ಅನ್ನು "ಸೀಲ್" ಮಾಡಲಾಗಿದೆ ಮತ್ತು ಯಾರಿಗೂ ಒಳಗೆ ಹೋಗಲು ಅನುಮತಿಸಲಾಗಿಲ್ಲ ಎಂದು ಹೇಳಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications