ಸನಾತನ ಧರ್ಮ ವಿವಾದ : ಉದಯಾನಿಧಿ ಹೇಳಿಕೆ ಬೆನ್ನಲ್ಲೇ ಎಂಕೆ ಸ್ಟಾಲಿನ್ ಹಿಂದೂ ಮದುವೆ ಬಗ್ಗೆ ವ್ಯಂಗ್ಯ : ಹಳೇ ವಿಡಿಯೋ ವೈರಲ್
ಚೆನ್ನೈ, ಸೆಪ್ಟೆಂಬರ್ 5: ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡುವ ಮೂಲಕ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಉದಯಾನಿಧಿ ಅವರು ದೇಶಾದ್ಯಂತ ಸುದ್ದಿಯಾಗಿದ್ದಾರೆ. ಈ ಬೆನ್ನಲ್ಲೇ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಹಳೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಹಿಂದೂ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದೆ.
ಹಿಂದೂ ಸಾಂಪ್ರದಾಯಿಕ ವಿವಾಹಗಳಲ್ಲಿ ನಡೆಯುವ ವೈದಿಕ ಆಚರಣೆಗಳನ್ನು ಟೀಕಿಸುವ ಎಂ.ಕೆ. ಸ್ಟಾಲಿನ್ ಅವರ ಹಳೆಯ ವಿಡಿಯೋ ಈಗ ಮತ್ತೆ ಮುನ್ನಲೆಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಕ್ಕೂ ಕಾರಣವಾಗಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಡಿಎಂಕೆ ಅಧ್ಯಕ್ಷರಾಗಿದ್ದ ಕಾಲದಲ್ಲಿ ಎಂಕೆ ಸ್ಟಾಲಿನ್ ದ್ರಾವಿಡ ಸ್ವಾಭಿಮಾನ ಚಳವಳಿಗೆ ಬದ್ದವಾಗಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ತಮ್ಮ ಭಾಷಣದ ವೇಳೆ, ಸಾಂಪ್ರದಾಯಿಕ ಹಿಂದೂ ವಿವಾಹ ಮಂತ್ರಗಳ ಬಗ್ಗೆ ತಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದರು.
M.K.Stalin calls the traditional way of marriage as indecent, filthy and obscene. Question is how many of his voters will agree with that? #சனிக்கிழமைபிரதமர் pic.twitter.com/K9OLPo8K6i
— Vishwatma 🇮🇳 (@HLKodo) February 2, 2019
ವಿಡಿಯೋದಲ್ಲಿ ಹೇಳಿರುವುದೇನು?
ಒಂದು ನಿಮಿಷ ನಲವತ್ತು ಸೆಕೆಂಡುಗಳಲ್ಲಿ ಕೊನೆಯಾಗುವ ವಿಡಿಯೋದಲ್ಲಿ, ಎಂಕೆ ಸ್ಟಾಲಿನ್ ಅವರು ಹಿಂದೂ ಸಂಪ್ರದಾಯದ ವಿವಾಹಗಳ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಸಮಾರಂಭದಲ್ಲಿ ಕೆಲವು ಅಂಶಗಳನ್ನು ಎತ್ತಿ ತೋರಿಸುವ ಅವರು, ಮದುವೆಯ ಸಮಯದಲ್ಲಿ ಮಂತ್ರ ಹೇಳುವ, ಮದುವೆ ಮಾಡಿಸುವ ಪುರೋಹಿತ ಅತಥವಾ ಅಯ್ಯರ್ ಬಳಿ ವಧು - ವರರು ಹೇಗೆ ನೆಲದ ಮೇಲೆ ಕುಳಿತುಕೊಳ್ಳುತ್ತಾರೆ ಎನ್ನುವುದನ್ನು ಅವರು ವಿವರಿಸಿದ್ದಾರೆ.
ಬೆಂಕಿಯ ಹೊಗೆ ಕಣ್ಣೀರಿಗೆ ಕಾರಣವಾಗುವುದು, ಪುರೋಹಿತ ಗೊಂದಲ ಮತ್ತು ಅರ್ಥವಾಗದ ಭಾಷೆಯಲ್ಲಿ ಮಂತ್ರಗಳನ್ನು ಪಠಿಸುವುದು ಸೇರಿದಂತೆ ಮದುವೆಯ ಸಂಪ್ರದಾಯಗಳನ್ನು ಹಾಸ್ಯದಿಂದ ವಿವರಿಸುವುದನ್ನು ವಿಡಿಯೋದಲ್ಲಿ ನೋಡಬಹುದು.
ಸದಯ ಈ ವಿಡಿಯೋ ಸಾಮಾಜಿಮ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಮತ್ತೊಂದು ವಿವಾದ ಹುಟ್ಟುಹಾಕಿದೆ. ಶನಿವಾರ (ಸೆಪ್ಟೆಂಬರ್ 2) ರಂದು ಎಂಕೆ ಸ್ಟಾಲಿನ್ ಅವರ ಪುತ್ರ ಉದಯಾನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳಿಗೆ ಹೋಲಿಕೆ ಮಾಡಿದ್ದಲ್ಲದೆ, ಇಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.
ಇದರ ವಿರುದ್ಧ ಬಿಜೆಪಿ ನಾಯಕರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ತೀವ್ರ ಕಿಡಿ ಕಾರಿದ್ದಾರೆ. ಈ ಬಗ್ಗೆ ಹಲವು ಕಡೆಗಳಲ್ಲಿ ದೂರು ಕೂಡ ದಾಖಲಿಸಾಗಿದೆ, ಬಿಹಾರದಲ್ಲಿ ಉದಯಾನಿಧಿ ಸ್ಟಾಲಿನ್ ಅವರು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications