Breaking: ಎನ್ ಬಿರೇನ್ ಸಿಂಗ್ ಮತ್ತೊಮ್ಮೆ ಮಣಿಪುರದ ಸಿಎಂ ಆಗಿ ಆಯ್ಕೆ
ಇಂಫಾಲ, ಮಾರ್ಚ್ 20: ಇಂಫಾಲದಲ್ಲಿ ನಡೆದ ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
''ಎಲ್ಲರೂ ಒಮ್ಮತದಿಂದ ತೆಗೆದುಕೊಂಡ ನಿರ್ಧಾರ ಇದು. ಇದು ಮಣಿಪುರದಲ್ಲಿ ಸ್ಥಿರ ಮತ್ತು ಜವಾಬ್ದಾರಿಯುತ ಸರ್ಕಾರವನ್ನು ಹೊಂದಿದೆ ಎಂದು ಖಚಿತಪಡಿಸುತ್ತದೆ ಏಕೆಂದರೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರವು ಈಶಾನ್ಯ ರಾಜ್ಯಗಳಿಗೆ ವಿಶೇಷ ಗಮನವನ್ನು ನೀಡುತ್ತದೆ,'' ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿದರು.
ಬಿಜೆಪಿಯ ಹಿರಿಯ ನಾಯಕ ತೊಂಗಂ ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಈಗ ಹಾಲಿ ಸ್ಪೀಕರ್ ಯುಮ್ನಮ್ ಖೇಮ್ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ.
Manipur's acting CM N Biren Singh unanimously elected as the Chief Minister of the State in the Manipur BJP legislature party meeting, in Imphal today. pic.twitter.com/KU57xu5nW6
— ANI (@ANI) March 20, 2022
ರಾಜ್ಯದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ವೀಕ್ಷಕರಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರು ಪ್ರಕಟಿಸಿದರು.
ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ.

2022ರ ವಿಧಾನಸಭೆ ಫಲಿತಾಂಶ 60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನ, ಜನತಾ ದಳ (ಯುನೈಟೆಡ್) 6, ಕಾಂಗ್ರೆಸ್ 5, ಎನ್ ಪಿ ಪಿ 7, ಎನ್ ಪಿಎಫ್ 5, ಕುಕಿ ಪೀಪಲ್ಸ್ ಮೈತ್ರಿಕೂಟ 2 ಸ್ಥಾನ ಗೆದ್ದುಕೊಂಡಿವೆ. ಬಿಜೆಪಿ ಶೇ 37.83, ಕಾಂಗ್ರೆಸ್ 16.83%, ಜೆಡಿಯು 10.77%, ಎನ್ ಪಿ ಇ ಪಿ 17.29%, ಎನ್ ಪಿ ಎಫ್ 8.09 %, ಇತರೆ 7.53 % ಬಂದಿದೆ.
ಈ ನಡುವೆ ಮಣಿಪುರದಲ್ಲಿ ಶೇ 10.77ರಷ್ಟು ಮತ ಗಳಿಕೆ ಮೂಲಕ 6 ಸ್ಥಾನ ಗೆದ್ದಿರುವ ಜನತಾ ದಳ(ಸಂಯುಕ್ತ) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಈಗಾಗಲೇ ಎನ್ ಪಿ ಎಫ್ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿರೇನ್ ಸಿಂಗ್, ಮುಂದಿನ ಸರ್ಕಾರದಲ್ಲಿ ಎನ್ಪಿಪಿ ನಮ್ಮೊಂದಿಗೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಜೆಡಿಯು ಶಾಸಕರಿಗೆ ಸಚಿವರಾಗುವ ಅವಕಾಶ ಲಭ್ಯವಾಗಲಿವೆ. ಎನ್ಪಿಎಫ್ ಹಾಗೂ ಎನ್ಪಿಪಿ ಎರಡೂ ಪಕ್ಷಗಳು ಬಿಜೆಪಿ ನೇತೃತ್ವದ ಪ್ರಸ್ತುತ ಆಡಳಿತ ಮೈತ್ರಿಕೂಟದ ಭಾಗವಾಗಿದೆ. ಆದಾಗ್ಯೂ, ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ 60 ಸ್ಥಾನಗಳಲ್ಲಿ ಏಕಾಂಗಿಯಾಗಲು ಸ್ಪರ್ಧಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications