ವಿಡಿಯೋ: ಮದುವೆ ಸಮಾರಂಭದಲ್ಲಿ ಕಾಲುಜಾರಿ ಬಿದ್ದ ಮಧ್ಯಪ್ರದೇಶ ಸಿಎಂ
ಉಧಮ್ಸಿಂಗ್ ನಗರ, ಏಪ್ರಿಲ್ 19: ಮದುವೆ ಸಮಾರಂಭವೊಂದರಲ್ಲಿ ಮಧ್ಯಪ್ರದೇಶದ ಸಿಎಂ ಕಾಲುಜಾರಿ ಕೆಳಗೆಬಿದ್ದ ಘಟನೆ ಮುಜುಗರಕ್ಕೀಡು ಮಾಡಿದೆ. ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಉತ್ತರಾಖಂಡದ ಕಾಶಿಪುರಕ್ಕೆ ನಿನ್ನೆ ತೆರಳಿದ್ದರು. ಈ ವೇಳೆ ಕಾರ್ಯಕ್ರಮದಿಂದ ನಿರ್ಗಮಿಸುವಾಗ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಏಕಾಏಕಿ ಕಾಲುಜಾರಿ ಮೆಟ್ಟಿಲುಗಳ ಮೇಲೆ ಬಿದ್ದಿದ್ದಾರೆ. ತಕ್ಷಣಕ್ಕೆ ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿಗಳು ಅವರನ್ನು ಮೇಲೆತ್ತುವ ಮೂಲಕ ಅವರನ್ನು ರಕ್ಷಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಸಹ-ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್ ಅವರ ಸೋದರಳಿಯನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಸೋಮವಾರ (ಏಪ್ರಿಲ್ 18) ಉತ್ತರಾಖಂಡಕ್ಕೆ ತೆರಳಿದ್ದರು. ಈ ಕಾರ್ಯಕ್ರಮವನ್ನು ಉಧಮ್ ಸಿಂಗ್ ನಗರದ ಕಾಶಿಪುರದಲ್ಲಿರುವ ಹೋಟೆಲ್ನಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಲು ದೇಶದ ಹಲವು ರಾಜ್ಯಗಳಿಂದ ಬಿಜೆಪಿ ಮುಖ್ಯಮಂತ್ರಿಗಳು, ದೊಡ್ಡ ದೊಡ್ಡ ನಾಯಕರು ಆಗಮಿಸಿದ್ದರು.
हादसा टला
— Abhishek Dubey (@AbhishekDubey_J) April 19, 2022
बीजेपी के राष्ट्रीय पदाधिकारी के यहां मांगलिक समारोह में सीएम शिवराज सिंह चौहान जैसे ही प्रतिभोज कार्यक्रम के लिए निकले, वैसे ही अचानक सीढ़ियों पर फिसलकर गिर पड़े. हालांकि फौरन सुरक्षाकर्मियों ने उन्हें उठाया और आगे को रवाना हुए… @BJP4MP #indore #mp #india #mpcm pic.twitter.com/nCIVeaA5ca
ಮದುವೆ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಔತಣಕೂಟಕ್ಕೆ ತೆರಳುತ್ತಿದ್ದಾಗ ಆಯ ತಪ್ಪಿ ಏಕಾಏಕಿ ಮೆಟ್ಟಿಲುಗಳ ಮೇಲೆ ಜಾರಿ ಬಿದ್ದರು. ಇದು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಭದ್ರತಾ ಸಿಬ್ಬಂದಿಯಲ್ಲಿ ಕೋಲಾಹಲ ಉಂಟು ಮಾಡಿತ್ತು. ಆದರೆ ತಕ್ಷಣವೇ ಅವರನ್ನು ಭದ್ರತಾ ಸಿಬ್ಬಂದಿ ಮೇಲೆತ್ತಿದರು. ಅದೃಷ್ಟವಶಾತ್ ಅವರಿಗೆ ಯಾವುದೇ ಗಾಯಗಳಾಗಿಲ್ಲ.

ಬಿಜೆಪಿಯ ರಾಷ್ಟ್ರೀಯ ನಾಯಕ ಶಿವಪ್ರಕಾಶ್ ಅವರ ಸೋದರಳಿಯ ವಿವಾಹ ಕಾರ್ಯಕ್ರಮದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಶಾಸಕರು ಸೇರಿದಂತೆ ದೇಶದ ಹಲವು ರಾಜಕೀಯ ಮುಖಂಡರು, ಗಣ್ಯರು ಮದುವೆ ಸಮಾರಂಭಕ್ಕೆ ಹಾಜರಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications