ದೇವತೆಗಳೇ ಮದ್ಯಪಾನ ಮಾಡ್ತಿದ್ರು, ಆದ್ರೆ ನೀವು ಇದನ್ನ ಕುಡೀರಿ: ಸಿಎಂ ಸಲಹೆ
ದೇವಾನುದೇವತೆಗಳೇ ಹಿಂದೆ ಮದ್ಯಪಾನ ಮಾಡುತ್ತಿದ್ದರು. ಸಾರಾಯಿ ಎಂಬುದು ಅಂದಿನಿಂದಲೂ ಚಾಲ್ತಿಯಲ್ಲಿದೆ. ಆದರೆ ನಾನು ಮದ್ಯಪಾನ ಮಾಡುವವರ ಪರ ಎಂದಲ್ಲ. ನಿಮಗೆ ನಾನು ಸಾರಾಯಿ ಕುಡಿಯಿರಿ ಎಂದೂ ಹೇಳಲ್ಲ. ನೀವೆಲ್ಲ ಹಾಲು ಕುಡಿಯಿರಿ, ಹಾಲು ಒಂದು ಅರ್ಥಪೂರ್ಣ ಆಹಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನವದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಬಿಡುಗಡೆ ಹಾಗೂ ಮಾರಾಟಕ್ಕೆ ಚಾಲನೆ ನೀಡಿ ಸಿಎಂ ಮಾತನಾಡಿದರು. ಈ ಹಿಂದೆ ಕುರಿಯನ್ ಅವರು ಕ್ಷೀರಕ್ರಾಂತಿಗೆ ಮುಂದಾದಾಗ ಅದರ ಬಗ್ಗೆ ಸಂಸತ್ನಲ್ಲಿ ಚರ್ಚೆ ನಡೆದಿತ್ತು. ಹಳ್ಳಿಯ ಹಾಲು ಪಟ್ಟಣಕ್ಕೆ ಬಂತು, ಪಟ್ಟಣದ ಸಾರಾಯಿ ಹಳ್ಳಿಗೆ ಹೋಗ್ತಿದೆ ಎಂದು ಭಾರಿ ಟೀಕೆಗಳು ಬಂದಿದ್ದವು ಎಂದು ನೆನೆದರು.

ಈ ಹಿಂದೆ ಜೆ.ಹೆಚ್.ಪಟೇಲ್ ಸಿಎಂ ಆಗಿದ್ದಾಗ ಮದ್ಯಪಾನ ನಿಷೇಧ ಮಾಡಬೇಕೆಂಬ ಚರ್ಚೆ ನಡೆದಿತ್ತು. ಇದಕ್ಕಾಗಿ ರಚನೆಯಾಗಿದ್ದ ಸಮಿತಿಯಲ್ಲಿ ನಾನು ಕೂಡ ಇದ್ದೆ. ಮದ್ಯಪಾನ ನಿಷೇಧ ಸಂಬಂಧ ಅಧ್ಯಯನಕ್ಕಾಗಿ ಗುಜರಾತ್, ಕೇರಳಕ್ಕೆ ಭೇಟಿ ಸಹ ನೀಡಿದ್ದೆ. ಅಲ್ಲಿ ಮದ್ಯಪಾನ ನಿಷೇಧವಿದ್ದರೂ ಎಲ್ಲೆಲ್ಲೂ ಸಿಗುತ್ತಲೇ ಇತ್ತು. ಹಾಗಾಗಿ ಮದ್ಯಪಾನ ನಿಷೇಧ ಅಸಾಧ್ಯ, ಕುಡಿತಕ್ಕೆ ಕಾನೂನು ಪರಿಹಾರವಲ್ಲ ಎಂಬುದು ಅರ್ಥವಾಯಿತು ಎಂದು ಸಿದ್ದರಾಮಯ್ಯ ಹೇಳಿದರು.
ಹಾಲು ಪೌಷ್ಠಿಕಾಂಶ ಹೇರಳವಾಗಿ ಹೊಂದಿದೆ. ಮಕ್ಕಳ ಬೆಳವಣಿಗೆಗೆ ಹಾಲು ಸಹಕಾರಿ. ಹೈನುಗಾರಿಕೆಯಿಂದ ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಯಾಗುತ್ತಿದೆ. ಹೈನುಗಾರಿಕೆಯಲ್ಲಿ ಕರ್ನಾಟಕದಲ್ಲಿ 22 ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದೆ. ಪ್ರತಿದಿನವೂ 31 ಕೋಟಿ ರೂಪಾಯಿಗಳನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ ಎಂದು ವಿವರಿಸಿದರು.

ಈ ಹಿಂದೆ ನಾನು ಪಶುಸಂಗೋಪನಾ ಸಚಿವನಾಗಿದ್ದಾಗ ಹೈನುಗಾರಿಕೆ ಸಂಘಗಳು ಮತ್ತು ಡೇರಿಯನ್ನು ಒಗ್ಗೂಡಿಸಲು ನಿರ್ಧರಿಸಿದ್ದೆ. ಸಿಎಂ ಆದ ಬಳಿಕ ಕ್ಷೀರಭಾಗ್ಯ ಯೋಜನೆ ಜಾರಿ ಮಾಡಿದೆವು. ಆ ಯೋಜನೆಗೆ ವಿಶ್ವಬ್ಯಾಂಕ್ನಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಈಗ ದೆಹಲಿ ಕೂಡ ದೊಡ್ಡ ಹಾಗೂ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಜಗತ್ತಿನ ಮೂಲೆಮೂಲೆಯಿಂದ ಬಂದು ಜನ ಇಲ್ಲಿ ನೆಲೆಸಿದ್ದಾರೆ. ಅವರಿಗೆ ಗುಣಮಟ್ಟದ ಹಾಲಿನ ಅಗತ್ಯವಿದೆ ಎಂದರು.
ಕರ್ನಾಟಕದಿಂದ 2,500 ಕಿ.ಮೀ ದೂರ ಇರುವ ನವದೆಹಲಿಗೆ ನಂದಿನಿ ಹಾಲು ಸರಬರಾಜು ಮಾಡಲು ಸುಮಾರು 54 ಗಂಟೆ ಸಮಯ ಬೇಕಾಗುತ್ತದೆ. ಸುಮಾರು ಎರಡೂವರೆ ದಿನಗಳವರೆಗೆ ಹಾಲು ಪೂರೈಕೆ ಮಾಡುವಾಗ ಗುಣಮಟ್ಟದ ಬಗ್ಗೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುಜರಾತ್ ಬಳಿಕ ಹೈನುಗಾರಿಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ರೈತರಿಗೆ ಸರ್ಕಾರದಿಂದ ಹಣ ಪಾವತಿಯಾಗುತ್ತಿದೆ. ಗುಜರಾತ್ನ ಅಮುಲ್ ಸಂಸ್ಥೆ ಪ್ರತಿದಿನ ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿದೆ. ನಾವು ಗುಜರಾತ್ ಸಂಸ್ಥೆಯನ್ನು ಹಿಮ್ಮೆಟ್ಟಿಸಲು ಸಾಧ್ಯವಿಲ್ಲದೆ ಇರಬಹುದು. ಆದರೆ ಪೈಪೋಟಿ ನೀಡಲು ಅವಕಾಶವಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲೂ ಲಭ್ಯವಿದೆ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಏರಿಕೆ ಕಂಡಿದ್ದು, ಮಾರುಕಟ್ಟೆ ವಿಸ್ತರಿಸುವ ಸಲುವಾಗಿ ನಮ್ಮ ನಂದಿನಿ ಹಾಲು ಮತ್ತು ಮೊಸರು ಈಗ ದೆಹಲಿಗೆ ಕಾಲಿಟ್ಟಿದೆ ಎಂದರು.
ಕೆಎಂಎಫ್ ಈಗಾಗಲೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ತನ್ನ ಮಾರಾಟ ಕೇಂದ್ರಗಳನ್ನು ಹೊಂದಿದೆ. ಕನ್ನಡದ ರೈತರ ಶ್ರಮದ ಸಂಸ್ಥೆಯೊಂದು ಕನ್ನಡತನವನ್ನು ಉಳಿಸಿಕೊಂಡು ವಿಶ್ವವ್ಯಾಪಿಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications