ಪ್ಯಾರಿಸ್ ಒಲಿಂಪಿಕ್ಸ್ನಿಂದ ವಿನೇಶ್ ಫೋಗಟ್ ಅನರ್ಹ: ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ಭಾರತದ ಕನಸು ಭಗ್ನವಾಗಿದೆ. 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ಇದರಿಂದ ಭಾರತೀಯರಿಗೆ ಆಘಾತವಾಗಿದ್ದು, ವಿನೇಶ್ ಫೋಗಟ್ ಅನರ್ಹಗೊಂಡಿರುವುದಕ್ಕೆ ಸಂಪೂರ್ಣ ದೇಶ ಬೇಸರದಲ್ಲಿದೆ.
ದೇಶದ ಹೆಮ್ಮೆಯಾಗಿದ್ದ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಅನರ್ಹಗೊಂಡಿರುವ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ನಡೆದಿರುವುದು ದುರದೃಷ್ಟಕರ ಘಟನೆ. ವಿನೇಶ್ ಫೋಗಟ್ ಅವರ ಶಕ್ತಿ, ಸ್ಥೈರ್ಯ, ಮತ್ತು ಸಮರ್ಪಣೆ ರಾಷ್ಟ್ರವನ್ನು ಯಾವಾಗಲೂ ಪ್ರೇರಿಪಿಸುತ್ತದೆ.

ಈ ಒಂದು ಕ್ಷಣ, ನಿಮ್ಮ ಲೆಕ್ಕವಿಲ್ಲದಷ್ಟು ಸಾಧನೆ ಹಾಗೂ ನೀವು ಭಾರತಕ್ಕೆ ತಂದ ಹೆಮ್ಮೆಯನ್ನು ಕಡಿಮೆ ಮಾಡುವುದಿಲ್ಲ. ನೀವು ಮತ್ತು ನಿಮ್ಮ ಈ ಸಾಧನೆಯ ಪಯಣದ ಬಗ್ಗೆ ನಮಗೆ ನಂಬಿಕೆ ಇದೆ. ನೀವು ಸದಾ ನಮ್ಮ ಚಾಂಪಿಯನ್ ಆಗಿರುತ್ತೀರಿ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹ ಯಾಕೆ..?
50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಅಂತಿಮ ಹಣಾಹಣಿಯಲ್ಲಿ ಅಮೆರಿಕಾದ ಸಾರಾ ಹಿಲ್ಡೆಬ್ರಾಂಡ್ರನ್ನ ಎದುರಿಸಬೇಕಿತ್ತು. ಇಂದು ಮಧ್ಯಾಹ್ನ 12:45ಕ್ಕೆ ಈ ಸ್ಪರ್ಧೆ ನಡೆಯಬೇಕಿತ್ತು. ಆದರೆ ಹೆಚ್ಚಿನ ತೂಕದ ಕಾರಣ ನೀಡಿ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದೆ.
ನಿನ್ನೆ ನಡೆದ ತೂಕ ಪರೀಕ್ಷೆಯಲ್ಲಿ ವಿನೇಶ್ ಅವರ ತೂಕ ನಿಗದಿಗಿಂತ ಹೆಚ್ಚಿತ್ತು. ಹೀಗಾಗಿ ಭಾರತ ತಂಡವು ರಾತ್ರಿಯಿಡೀ ಅವರ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸಿತು. ಆದರೆ ಇಂದು ಬೆಳಿಗ್ಗೆ ನಡೆದ ತೂಕ ಪರೀಕ್ಷೆಯಲ್ಲಿಯೂ ಕೂಡ ಅವರ ತೂಕವು ಹೆಚ್ಚಾಗಿದೆ. ಹೀಗಾಗಿ ಅವರನ್ನು ಅನರ್ಹಗೊಳಿಸಲಾಗಿದೆ. ಇದು ಇಡೀ ದೇಶಕ್ಕೆ ಆಘಾತ ತಂದಿದೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications