ಅರವಿಂದ್ ಕೇಜ್ರಿವಾಲ್ ಜೈಲಿಂದ್ದ ಹೊರಬರುತ್ತಿದ್ದ ಹಾಗೇ ಸತ್ಯವೇ ಗೆಲ್ಲುವುದು ಎಂದ ಸಿದ್ದರಾಮಯ್ಯ
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಅ ವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ.

ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ.ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತು: ಭೋಗೇಶ್ ಸೋಲಾಪುರ್
'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕೆಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಸಂಸ್ಥೆಯನ್ನು ಪಂಜರದ ಗಿಣಿ ಎನ್ನುವ ಮೂಲಕ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದೆಯೆಂದು ಛೀಮಾರಿ ಹಾಕಿದೆ. ಸಿಬಿಐ ನಡೆ ಬಗ್ಗೆಯೇ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬಿಐ ತಾನು ಬಂಧಮುಕ್ತ ಗಿಣಿಯೆಂದು ನಿರೂಪಿಸಬೇಕು. ಸಂಶಯಾತೀತವಾಗಿ ಕೆಲಸ ಮಾಡಬೇಕೆಂದು ಹೇಳಿದೆ. ಇದು ಸಿಬಿಐ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದೆ ಎಂದರು.
ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡುವವರಿಗೆ ಭರವಸೆ ನೀಡಿದೆ. ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇನ್ನಾದರೂ ದ್ವೇಷ ರಾಜಕಾರಣ ಬಿಟ್ಟು, ಜನ ಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಕೆಲಸ ಮಾಡಲಿ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ @ArvindKejriwal ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ.
— Siddaramaiah (@siddaramaiah) September 13, 2024
ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ…
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications