CM Vijay: ನನ್ನ ಸರ್ಕಾರದಲ್ಲಿ ರಹಸ್ಯ ಭೇಟಿಗೆ ಅವಕಾಶವಿಲ್ಲ, ಜನರ ಹಣಕ್ಕೆ ಕೈಹಾಕಲ್ಲ: ಸಿಎಂ ವಿಜಯ್‌ ಭರವಸೆ

ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಮ್ಮ ಮೊದಲ ಭಾಷಣ ಮಾಡಿದ ನಟ ವಿಜಯ್ ಅವರು, ಹಿಂದಿನ ಡಿಎಂಕೆ ಸರ್ಕಾರದ ಹಣಕಾಸು ಸ್ಥಿತಿಗತಿಗಳ ಕುರಿತು 'ಶ್ವೇತಪತ್ರ' ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿ ಸರ್ಕಾರ ನಿರ್ಗಮಿಸಿದೆ ಎಂದು ಅವರು ಈ ಸಂದರ್ಭದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಹಿಂದಿನ ಡಿಎಂಕೆ ಸರ್ಕಾರವು 10 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿದ್ದು, ಬೊಕ್ಕಸವನ್ನು ಸಂಪೂರ್ಣವಾಗಿ ಖಾಲಿ ಮಾಡಿದೆ ಎಂದು ವಿಜಯ್ ಟೀಕಿಸಿದ್ದಾರೆ. ಪರಿಸ್ಥಿತಿಯನ್ನು ಹತ್ತಿರದಿಂದ ನೋಡಿದಾಗ ಮಾತ್ರ ವಾಸ್ತವ ಏನೆಂದು ಅರ್ಥವಾಗುತ್ತದೆ ಎಂದು ಅವರು ಹೇಳಿದ್ದಾರೆ. ತಾವು ಪಾರದರ್ಶಕ ಸರ್ಕಾರವನ್ನು ನಡೆಸಲು ಬಯಸುತ್ತಿದ್ದು, ಪ್ರತಿಯೊಂದು ಕಾರ್ಯವನ್ನು ಮುಕ್ತವಾಗಿ ಮತ್ತು ಬಹಿರಂಗವಾಗಿ ಮಾಡುವುದಾಗಿ ವಿಜಯ್ ತಿಳಿಸಿದ್ದಾರೆ. ಯಾರನ್ನೇ ಭೇಟಿಯಾಗಬೇಕಿದ್ದರೂ ಅದು ರಹಸ್ಯವಾಗಿ ಅಥವಾ ಮುಚ್ಚಿದ ಬಾಗಿಲಿನ ಹಿಂದೆ ನಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

CM Vijay

ಜನರ ಹಣಕ್ಕೆ ಕೈಹಾಕುವುದಿಲ್ಲ

ಜನರ ತೆರಿಗೆ ಹಣದ ಒಂದೂ ಪೈಸೆಯನ್ನೂ ತಾವು ಮುಟ್ಟುವುದಿಲ್ಲ ಎಂದು ಭರವಸೆ ನೀಡಿದ ಅವರು, ಶಿಕ್ಷಣ, ರಸ್ತೆ, ಕುಡಿಯುವ ನೀರು ಮತ್ತು ಅಗತ್ಯ ಸೇವೆಗಳ ಸುಧಾರಣೆಗೆ ತಮ್ಮ ಮೊದಲ ಆದ್ಯತೆ ಇರಲಿದೆ ಎಂದು ವಾಗ್ದಾನ ಮಾಡಿದ್ದಾರೆ. ರಾಜ್ಯದ ಎಂಟು ಕೋಟಿ ಜನರನ್ನು ತಮ್ಮವರೆಂದು ಭಾವಿಸುವ ತಾವು, ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

Vijay: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಪ್ರಮಾಣವಚನ; ಟಿವಿಕೆ ಸಾರಥ್ಯದ ನೂತನ ಸರ್ಕಾರ ಅಸ್ತಿತ್ವಕ್ಕೆ
Vijay: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಪ್ರಮಾಣವಚನ; ಟಿವಿಕೆ ಸಾರಥ್ಯದ ನೂತನ ಸರ್ಕಾರ ಅಸ್ತಿತ್ವಕ್ಕೆ

ಮೊದಲ ಸಹಿ ಮತ್ತು ನಿರ್ಧಾರಗಳು

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ಮೊದಲ ಕಡತಕ್ಕೆ ಸಹಿ ಹಾಕಿದ್ದು, ಅದರಂತೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ಮಾದಕ ವಸ್ತುಗಳ ತಡೆಗೆ ವಿಶೇಷ ಕಾರ್ಯಪಡೆ ರಚನೆ ಮತ್ತು ಮಹಿಳೆಯರ ರಕ್ಷಣೆಗಾಗಿ ವಿಶೇಷ ಪಡೆಗಳ ಸ್ಥಾಪನೆಗೆ ಅನುಮೋದನೆ ನೀಡಿದ್ದಾರೆ. ಚುನಾವಣಾ ಸಮಯದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಹಂತಹಂತವಾಗಿ ಮತ್ತು ಪ್ರಾಮಾಣಿಕವಾಗಿ ಈಡೇರಿಸಲು ಶ್ರಮಿಸುವುದಾಗಿ ತಿಳಿಸಿದ ಅವರು, ಇದಕ್ಕಾಗಿ ಸ್ವಲ್ಪ ಸಮಯ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ವಿಸಿಕೆ ಮುಖ್ಯಸ್ಥ ತಿರುಮಾವಳವನ್ ಮತ್ತು ಸಿಪಿಐ(ಎಂ) ನಾಯಕ ಪಿ.ಷಣ್ಮುಗಂ ಅವರಿಗೆ ವಿಜಯ್ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಜನಪ್ರಿಯತೆ ಮತ್ತು ಚುನಾವಣಾ ಪ್ರಚಾರದ ಶೈಲಿಯಿಂದ ಮಾಜಿ ಸಿಎಂ ಎಂ.ಜಿ. ರಾಮಚಂದ್ರನ್ (ಎಂಜಿಆರ್) ಅವರಿಗೆ ಹೋಲಿಸಲ್ಪಡುತ್ತಿರುವ ವಿಜಯ್, 2026ರ ಚುನಾವಣೆಯಲ್ಲಿ ಪೆರಂಬೂರ್ ಮತ್ತು ತಿರುಚಿ ಪೂರ್ವ ಕ್ಷೇತ್ರಗಳಿಂದ ಜಯಗಳಿಸಿದ್ದಾರೆ. ಇದೀಗ ಅವರು ಯಾವುದಾದರೂ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ. ರಾಜಕೀಯ ಪ್ರವೇಶಕ್ಕೂ ಮುನ್ನವೇ ತಮ್ಮ ಚಿತ್ರಗಳ ಮೂಲಕ ಭ್ರಷ್ಟಾಚಾರ ಮತ್ತು ಸಾಮಾಜಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುತ್ತಿದ್ದ ಅವರು, ಇದೀಗ ಅಧಿಕೃತವಾಗಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+