Yogi Adityanath: ಕೋವಿಡ್ ಅನಾಥರಿಗೆ ಸಹಾಯ ಹಸ್ತ ನೀಡಿದ ಸಿಎಂ ಯೋಗಿ ಸರ್ಕಾರ
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಸಿಕ ನೆರವು ನೀಡುವ ಮೂಲಕ ಕೋವಿಡ್ ಅನಾಥರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಲಕ್ನೋ ಮಾರ್ಚ್ 9: ಎರಡು ವರ್ಷಗಳ ಹಿಂದೆ ದೇಶವನ್ನು ಬೆಚ್ಚಿಬೀಳಿಸಿದ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಉತ್ತರ ಪ್ರದೇಶದಲ್ಲೂ ಸಾವಿರಾರು ಸಾವುಗಳು ಸಂಭವಿಸಿವೆ. ಕೋವಿಡ್ನ ಪ್ರಭಾವದಿಂದ ತಮ್ಮ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿರುವ ಅನೇಕ ಜನರಿದ್ದಾರೆ. ಸರ್ಕಾರಗಳು ಅವರಿಗೆ ಮಾನವೀಯ ನೆರವು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶಿಸಿತ್ತು. ಈ ನಿಟ್ಟಿನಲ್ಲಿ ಹಲವು ಸರಕಾರಗಳು ನಿರ್ಧಾರ ಕೈಗೊಂಡಿವೆ. ಆದರೆ ಅದೆಲ್ಲಕ್ಕಿಂತ ಭಿನ್ನವಾಗಿ ಯುಪಿಯಲ್ಲಿ ಯೋಗಿ ಸರ್ಕಾರ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.
ಕೋವಿಡ್ನಿಂದಾಗಿ ಒಬ್ಬ ಅಥವಾ ಇಬ್ಬರು ಪೋಷಕರ ಸಾವಿನಿಂದ ಅನಾಥರಾದ ಮಕ್ಕಳಿಗೆ ಅನೇಕ ಸರ್ಕಾರಗಳು ಏಕರೂಪದ ಪರಿಹಾರವನ್ನು ಒದಗಿಸಿವೆ. ಇನ್ನೂ ಕೆಲವು ಸರಕಾರಗಳು ಹಣದ ಕೊರತೆಯ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿವೆ. ಆದರೆ ಯುಪಿಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಕೋವಿಡ್ನಿಂದ ಅನಾಥರಾದವರಿಗೆ ನಿಯಮಿತ ಕಲ್ಯಾಣ ಯೋಜನೆಯನ್ನು ಲಭ್ಯಗೊಳಿಸಿದೆ. ತಮ್ಮ ಸರ್ಕಾರ ಯುಪಿಯಲ್ಲಿ ಇರುವವರೆಗೂ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಇತ್ತೀಚೆಗೆ ಘೋಷಿಸಿದ್ದರು.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ತಮ್ಮ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗಾಗಿ ಯುಪಿ ಸರ್ಕಾರ ಹೊಸ ಕಲ್ಯಾಣ ಯೋಜನೆಯನ್ನು ಪ್ರಾರಂಭಿಸಿದೆ. ಇತ್ತೀಚೆಗಷ್ಟೇ ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಸ್ವಕ್ಷೇತ್ರ ಗೋರಖ್ಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇದಕ್ಕೆ ಚಾಲನೆ ನೀಡಿದರು. ಈ ಯೋಜನೆಯ ಭಾಗವಾಗಿ, ಕೋವಿಡ್-19 ಅವಧಿಯಲ್ಲಿ ಒಬ್ಬರು ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಯುಪಿ ಸರ್ಕಾರ ಮಾಸಿಕ ರೂ. 4,000 ನೀಡುತ್ತದೆ. ಈಗಾಗಲೇ ನೀಡಿರುವ ಪಿಂಚಣಿಗಳ ಮಾದರಿಯಲ್ಲಿಯೇ ಈ ಮೊತ್ತವನ್ನು ಸರಕಾರ ವರ್ಷವಿಡೀ ನೀಡಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications