ಮಳೆ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಯೋಗಿ ಸೂಚನೆ

ಲಕ್ನೋ, ಸೆಪ್ಟೆಂಬರ್‌ 12: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಳೆ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹವಾಮಾನ ವೈಪರೀತ್ಯದಿಂದ ಸಂತ್ರಸ್ತರಾಗಿರುವ ಜನರಿಗೆ ಪರಿಹಾರ ಮೊತ್ತ ನೀಡುವಂತೆ ಸಿಎಂ ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. "ಪ್ರದೇಶಗಳಲ್ಲಿ ನೀರು ನಿಲ್ಲುವ ಸಂದರ್ಭದಲ್ಲಿ ಸರಿಯಾದ ನೀರಿನ ಒಳಚರಂಡಿ ವ್ಯವಸ್ಥೆಗಳು ಇರಬೇಕು. ನದಿಗಳ ಅಪಾಯದ ಗುರುತುಗಳನ್ನು ನಿರಂತರವಾಗಿ ಪರಿಶೀಲಿಸಬೇಕು" ಎಂದು ಸಿಎಂ ಯೋಗಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

CM Yogi Adityanath instructs officials to carry out relief work in rain affected districts

ಇದಲ್ಲದೆ, ಅತಿವೃಷ್ಟಿಯಿಂದ ಬೆಳೆಗಳಿಗೆ ಆಗಿರುವ ಹಾನಿಯ ಬಗ್ಗೆ ಅವಲೋಕನ ನಡೆಸಿ ರೈತರಿಗೆ ಪರಿಹಾರ ನೀಡುವಂತೆಯೂ ಯುಪಿ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಏತನ್ಮಧ್ಯೆ, ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬೆಳೆ ಹಾನಿಯಾದ ಬಗ್ಗೆ ರೈತರು ಅಸಮಾಧಾನಗೊಂಡಿದ್ದಾರೆ.

ಮೊರಾದಾಬಾದ್ ಜಿಲ್ಲಾಧಿಕಾರಿಗಳು ಹೊಲಗಳಿಗೆ ಭೇಟಿ ನೀಡಿ, ಸಂಭವಿಸಿದ ಹಾನಿಯ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. "ಯಾರಾದರೂ ಸಮೀಕ್ಷೆಯಿಂದ ಹೊರಗುಳಿದಿದ್ದಲ್ಲಿ, ಅವರು ಅರ್ಜಿಯನ್ನು ಸಲ್ಲಿಸಬಹುದು ಮತ್ತು ಮುಂದಿನ 72 ಗಂಟೆಗಳ ಒಳಗೆ ಪರಿಹಾರದ ಮೊತ್ತವನ್ನು ಅವರಿಗೆ ಒದಗಿಸಲಾಗುವುದು" ಎಂದು ಮೊರಾದಾಬಾದ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಾನವೇಂದ್ರ ಸಿಂಗ್ ಹೇಳಿದರು.

ರಾಜಧಾನಿ ಲಕ್ನೋದಲ್ಲಿ ಸೋಮವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಜಲಾವೃತವಾಗಿದೆ. ಜಿಲ್ಲೆಯ ಸದರ್‌ನ ತಗ್ಗು ಪ್ರದೇಶಗಳಲ್ಲಿ ಜಲಾವೃತ ಮತ್ತು ರಸ್ತೆ ಕುಸಿತದಿಂದ ನಿವಾಸಿಗಳು ಸಮಸ್ಯೆಗಳನ್ನು ಎದುರಿಸಿದರು. ನಗರದಲ್ಲಿ ನಿರಂತರ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+