Chandrayaan-3: ಯುಪಿ ಶಾಲಾ-ಕಾಲೇಜುಗಳಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ನ ನೇರ ಪ್ರಸಾರಕ್ಕೆ ಸಿಎಂ ಸೂಚನೆ!
ಉತ್ತರ ಪ್ರದೇಶ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ನ ನೇರ ಪ್ರಸಾರ ಮಾಡಲು ಸರ್ಕಾರ ಸೂಚನೆ ನೀಡಿದೆ. ಇದಕ್ಕಾಗಿ ನಾಳೆ ಸಂಜೆ ಒಂದು ಗಂಟೆ ಶಾಲೆಯನ್ನು ತೆರೆಯಲು ಮಕ್ಕಳಿಗೆ ಇದನ್ನು ವೀಕ್ಷಿಸಲು ಬೇಕಾದ ವ್ಯವಸ್ಥೆ ಮಾಡಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಚರಿತ್ರೆ ಬರೆಯಲು ಭಾರತ ಸಜ್ಜಾಗಿದೆ. ಚಂದ್ರಯಾನ 3 ಮಿಷನ್ ಯಶಸ್ವಿಯಾಗಲು ಕ್ಷಣಗಣನೆ ಆರಂಭವಾಗಿದೆ. ನಾಳೆ ಸಂಜೆ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಪ್ರಗ್ಯಾನ್ ರೋವರ್ ವಿಕ್ರಂ ಲ್ಯಾಂಡರ್ನಿಂದ ಹೊರಬಂದು ಚಂದ್ರನ ಮೇಲೆ 14 ದಿನಗಳ ಕಾಲ ಸಂಶೋಧನೆ ನಡೆಸಲಿದೆ.

ಚಂದ್ರಯಾನ-3 ಯಶಸ್ವಿಗಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಈ ಸಂದರ್ಭದಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದನ್ನು ಎಲ್ಲಾ ಶಾಲೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಶಾಲೆಗಲ್ಲಿ ಸಂಜೆ ಒಂದು ಗಂಟೆ ವಿಶೇಷವಾಗಿ ನೇರ ಪ್ರಸಾರ ಮಾಡಲಾಗುವುದು ಎಂದು ಸಿಎಂ ಯೋಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಶಿಕ್ಷಣ ಸಚಿವಾಲಯದ ಸೂಚನೆಗಳನ್ನು ಉಲ್ಲೇಖಿಸಿ, ಉತ್ತರ ಪ್ರದೇಶ ಸರ್ಕಾರವು "ಆಗಸ್ಟ್ 23 ರಂದು ಸಂಜೆ 5.27 ಕ್ಕೆ ಚಂದ್ರಯಾನ -3 ಚಂದ್ರನ ಮೇಲೆ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಇಸ್ರೋ ವೆಬ್ಸೈಟ್, ಯೂಟ್ಯೂಬ್ ಚಾನೆಲ್ ಮತ್ತು ಡಿಡಿ ನ್ಯಾಷನಲ್ನಲ್ಲಿ ನೇರ ಪ್ರಸಾರ ಮಾಡಲಾಗುವುದು. ಇದನ್ನು ಸಂಜೆ 5.15 ರಿಂದ 6.15 ರವರೆಗೆ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಬೇಕು'' ಎಂದಿದೆ.
ಬುಧವಾರ ಸಂಜೆ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ತನ್ನಲ್ಲಿರುವ ಪ್ರಗ್ಯಾನ್ ರೋವರ್ನೊಂದಿಗೆ ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಆಗಲು ಸಿದ್ಧವಾಗಿದೆ.
ಈ ಬಗ್ಗೆ ರಾಜ್ಯ ಹೆಚ್ಚುವರಿ ಯೋಜನಾ ನಿರ್ದೇಶಕ ಮಧುಸೂದನ ಹುಲಗಿ ಮಾತನಾಡಿ, 'ಇಂತಹ ಐತಿಹಾಸಿಕ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸರ್ಕಾರ ಸಂಜೆ ಶಾಲೆಗಳನ್ನು ತೆರೆಯಲು ಇದೇ ಮೊದಲ ಬಾರಿಗೆ ನಿರ್ಧರಿಸಿದೆ. ಇದೊಂದು ಮಹತ್ವದ ಸಂದರ್ಭವಾಗಿದ್ದು, ಇದು ನಮ್ಮ ಯುವಜನರ ಮನಸ್ಸಿನಲ್ಲಿ ಕುತೂಹಲವನ್ನು ಹೆಚ್ಚಿಸುವುದಲ್ಲದೆ ಅನ್ವೇಷಣೆಯ ಉತ್ಸಾಹವನ್ನು ಪ್ರಚೋದಿಸುತ್ತದೆ' ಎಂದು ಹೇಳಿದರು.
ರಾಜ್ಯ ಸರ್ಕಾರವು ಎಲ್ಲಾ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಶಾಲೆಗಳ ಪ್ರಾಂಶುಪಾಲರಿಗೆ ಶಾಲೆಗಳಲ್ಲಿ ನೇರ ಪ್ರಸಾರಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಸೂಚಿಸಿದೆ.
"ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನದ ಶಕ್ತಿಯನ್ನು ನಾವು ಒಟ್ಟಾಗಿ ಆಚರಿಸುತ್ತಿರುವಾಗ ಇದು ಹೆಮ್ಮೆ ಮತ್ತು ಏಕತೆಯ ಅರ್ಥವನ್ನು ಉತ್ತೇಜಿಸುತ್ತದೆ. ಈ ಅನುಕ್ರಮದಲ್ಲಿ ಸಂಜೆ 5.15 ರಿಂದ 6.15 ರವರೆಗೆ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಸಭೆ ಆಯೋಜಿಸುವ ಮೂಲಕ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲು ಎಲ್ಲಾ ಪ್ರಾಂಶುಪಾಲರು ಮತ್ತು ಮೂಲ ಶಿಕ್ಷಣ ಅಧಿಕಾರಿಗಳಿಗೆ (ಬಿಎಸ್ಎ) ಸೂಚಿಸಲಾಗಿದೆ'' ಎಂದು ಹುಳಗಿ ಹೇಳಿದರು.
ರಷ್ಯಾದ ಲೂನಾ -25 ಮಿಷನ್ ವಿಫಲವಾಗಿದ್ದು, ಎಲ್ಲರ ಚಿತ್ತ ಭಾರತದ ಚಂದ್ರಯಾನ -3 ರತ್ತ ನಾಟಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಜುಲೈ 14 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಮಿಷನ್ ಅನ್ನು ಪ್ರಾರಂಭಿಸಿತು.
ಭಾರತದ ಮೂರನೇ ಚಂದ್ರನ ಕಾರ್ಯಾಚರಣೆಯಾದ ಚಂದ್ರಯಾನ-3 ರ ಉದ್ದೇಶಿತ ಉದ್ದೇಶಗಳು ಸುರಕ್ಷಿತ ಮತ್ತು ಮೃದುವಾದ ಲ್ಯಾಂಡಿಂಗ್ ಆಗಿದ್ದು, ಇದಕ್ಕಾಗಿ ಸಾಕಷ್ಟು ವೈಜ್ಞಾನಿಕ ಪ್ರಯೋಗಗಳು ನಡೆದಿವೆ. ಚಂದ್ರಯಾನ-3ರ ಅನುಮೋದಿತ ವೆಚ್ಚ 250 ಕೋಟಿ (ಉಡಾವಣಾ ವಾಹನ ವೆಚ್ಚ ಹೊರತುಪಡಿಸಿ) ಆಗಿದೆ.
ಭಾರತವು ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿದೆ. ಭಾರತ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ವಿಶ್ವದ ಏಕೈಕ ದೇಶವಾಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications