ದೇಶಾದ್ಯಂತ ಕಲ್ಲಿದ್ದಲು ಕೊರತೆ: ಥರ್ಮಲ್ ಘಟಕಗಳು ಸ್ತಬ್ಧ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 26: ದೇಶಾದ್ಯಂತ ಕಲ್ಲಿದ್ದಲು ಕೊರತೆ ಉಂಟಾಗಿದೆ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಮಾಡಲು ನಿರ್ಧರಿಸಲಾಗಿತ್ತು ಆದರೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನಿರ್ದೇಶನದ ಮೇರೆಗೆ ಅಲ್ಲಿಗೆ ಕಾರ್ಯ ಕೈಬಿಡಲಾಗಿದೆ. ಆದರೆ ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಂದ ಏನೆಲ್ಲಾ ಸಮಸ್ಯೆ ಉದ್ಭವವಾಗುತ್ತಿದೆ ಎನ್ನವುದನ್ನು ಗಮನಿಸೋಣ.
ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಬಾಧಿಸುತ್ತಿರುವ ಕಲ್ಲಿದ್ದಲು ಕೊರತೆ, ಕೇವಲ ಕರ್ನಾಟಕಕ್ಕಷ್ಟೇ ಸೀಮಿತವಾಗಿಲ್ಲ, ದೇಶದ ಬಹುತೇಕ ಕಲ್ಲಿದ್ದಲು ಆಧಾರಿತ ಕೇಂದ್ರಗಳಿಗೆ ಕಲ್ಲಿದ್ದಲು ಒದಗಿಸುವಿಕೆಯಲ್ಲಿ ನಿಧಾನವಾಗುತ್ತಿದೆ.
ಕಲ್ಲಿದ್ದಲು ಗಣಿ ಕಂಪನಿಗಳ ಬಳಿಯಿರುವ ವಿದ್ಯುತ್ ಕೇಂದ್ರ ಹೊರತುಪಡಿಸಿ, ಬಹುತೇಕ ಕಡೆ ಕಲ್ಲಿದ್ದಲು ಕೊರತೆ ಉಂಟಾಗಿದೆ. ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಕಲ್ಲಿದ್ದಲು ಗಣಿಗಳ ಹಂಚಿಕೆಯಲ್ಲಿ ವಿಳಂಬ ಮಾಡುತ್ತಿರುವುದು ಸೇರಿ ಗಣಿಗಾರಿಕೆಗೆ ಎದುರಾಗಿರುವ ಅನೇಕ ಸಂಕಷ್ಟಗಳ ಪರಿಣಾಮ ಕಲ್ಲಿದ್ದಲು ಆಧಾರಿತ ವಿದ್ಯುತ್ ಕೇಂದ್ರಗಳಿಗೆ ಪೆಟ್ಟು ಬಿದ್ದಿದೆ.

22 ವಿದ್ಯುತ್ ಕೇಂದ್ರಗಳು ಸಂಕಷ್ಟದಲ್ಲಿವೆ
ದೇಶದಲ್ಲಿರುವ 7ಕ್ಕಿಂತ ಕಡಿಮೆ ಅವಧಿಗೆ ಸಾಕಾಗುವಷ್ಟು ಕಲ್ಲಿದ್ದಲು ಸಂಗ್ರಹ 9 ಕೇಂದ್ರಗಳಲ್ಲಿದೆ. ಅದೇ ರೀತಿ ದೇಶದ 22 ಶಾಖೋತ್ಪನ್ನ ಕೇಂದ್ರಗಳಲ್ಲಿ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅದರಲ್ಲಿ ರಾಜ್ಯದ ಶಕ್ತಿನಗರ ಮತ್ತು ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳು ಸೇರಿವೆ.

ಜಲವಿದ್ಯುತ್ ಘಟಕಗಳ ಪರಿಸ್ಥಿತಿ ಹೇಗಿದೆ
ಮಳೆಗಾಲದಲ್ಲ ವಿದ್ಯುತ್ ಬೇಡಿಕೆ ಭರಾಟೆಗೆ ಬೆಚ್ಚಿರುವ ಸರ್ಕಾರ ಅನಿವಾರ್ಯವಾಗಿ ಜಲವಿದ್ಯುತ್ ಬಳಕೆಗೆ ಒತ್ತು ನೀಡಿದೆ. ರಾಜ್ಯದಲ್ಲಿ ಕಳೆದೆರೆಡು ದಿನಗಳಲ್ಲಿ ಪ್ರಮುಖ ಜಲವಿದ್ಯುತ್ ಕೇಂದ್ರಗಳಾದ ಶರಾವತಿ, ವರಾಹಿ, ಸೂಪಾ, ಶಿವನಸಮುದ್ರ ಸೇರಿ ಅನೇಕ ಜಲವಿದ್ಯುತ್ ಕೇಂದ್ರಗಳಲ್ಲಿ ಉತ್ಪಾದನಾ ಪ್ರಮಾಣ ಹೆಚ್ಚಿಸಲಾಗಿದೆ.

ಘಟಕಗಳಲ್ಲಿ 20 ದಿನಗಳಿಗಾಗುವಷ್ಟು ಕಲ್ಲಿದ್ದಲು ಮಾತ್ರ ಇದೆ
ಕಲ್ಲಿದ್ದಲು ಗಣಿ ಇರುವ ಪ್ರದೇಶದ ತೀರಾ ಹತ್ತಿರವಿರುವ ಕೆಲವೇ ಕೆಲವು ಶಾಖೋತ್ಪನ್ನ ಘಟಕಗಳಲ್ಲಿ ಮಾತ್ರ ಸರಾಸರಿ 20ರಿಂದ 40 ದಿನಕ್ಕೆ ಆಗುವಷ್ಟು ಕಲ್ಲಿದ್ದಲು ಸಂಗ್ರಹವಿದೆ. ಇನ್ನುಳಿದಂತೆ ದೂರದ ಪ್ರದೇಶಗಳಲ್ಲಿರುವ ಕೇಂದ್ರಗಳಲ್ಲಿ ಒಂದು ವಾರಕ್ಕಾಗುವಷ್ಟು ಕಲ್ಲಿದ್ದಲೂ ಕೂಡ ಇಲ್ಲ.

ದೇಶದಲ್ಲಿ 112 ಕೇಂದ್ರದಲ್ಲಿ ಕಲ್ಲಿದ್ದಲು ಸಂಗ್ರಹ ತಳಕಚ್ಚಿದೆ
ದೇಶದಲ್ಲಿ 112 ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಕೇಂದ್ರಗಳಲ್ಲಿ ಬಹುತೇಕ ಕಡೆ ಕಲ್ಲಿದ್ದಲು ಸಂಗ್ರಹ ನೆಲಕಚ್ಚಿದೆ ಕೇಂದ್ರ ಸರ್ಕಾರದ ವಿದ್ಯುತ್ ಪ್ರಾಧಿಕಾರದ ಮೂಲಗಳಿಂದ ತಿಳಿದುಬಂದಿದೆ. ದಿನದ ಬೇಡಿಕೆ 9 ಸಾವಿರ ಮೆಗಾ ವ್ಯಾಟ್ ದಾಟಿದೆ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications