ಕಲ್ಲಿದ್ದಲು ಹಗರಣ: ರಂಜಿತ್ ಸಿನ್ಹಾ ಅವರ ವಿರುದ್ಧ ತನಿಖೆಗೆ ಅಸ್ತು!
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಸ್ಥೆಯ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಅವರ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಸೋಮವಾರ ಸಿಬಿಐಗೆ ಆದೇಶಿಸಿದೆ.
ನವದೆಹಲಿ, ಜನವರಿ 23: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಸ್ಥೆಯ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಅವರ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಸೋಮವಾರ ಸಿಬಿಐಗೆ ಆದೇಶಿಸಿದೆ.
ಕಲ್ಲಿದ್ದಲು ಹಗರಣದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪವನ್ನು ರಂಜಿತ್ ಸಿನ್ಹಾ ಎದುರಿಸುತ್ತಿದ್ದಾರೆ. ತಮ್ಮ ಅಧಿಕಾರ ಅವಧಿಯಲ್ಲಿ ಸದಾ ಒಂದಿಲ್ಲೊಂದು ವಿವಾದಗಳಿಗೆ ಈಡಾಗಿ ಮುಜುಗರಕ್ಕೆ ಒಳಗಾಗಿದ್ದರು.
ಸಿಬಿಐ ನಿರ್ದೇಶಕರಾಗಿ ರಂಜಿತ್ ಸಿನ್ಹಾ ಅಧಿಕಾರ ದುರುಪಯೋಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.. ಆದ್ದರಿಂದ ಈ ಕುರಿತಂತೆ ತನಿಖೆ ನಡೆಸುವಂತೆ ಎಂದು ಜಸ್ಟಿಸ್ ಎಂ.ಬಿ. ಲೋಕುರ್ ಅವರಿದ್ದ ವಿಶೇಷ ನ್ಯಾಯಪೀಠ ಆದೇಶಿಸಿದೆ.

ಸಿನ್ಹಾ ಅವರ ಪಾತ್ರದ ಬಗ್ಗೆ ತನಿಖೆಗೆ ವಿಶೇಷ ತನಿಖಾ ತಂಡ(SIT)ನ್ನು ರಚಿಸಬೇಕು. ತನಿಖೆಯ ವೇಳೆ ಕೇಂದ್ರ ಜಾಗೃತ ಆಯೋಗ(ಸಿವಿಸಿ)ವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಿಬಿಐ ನಿರ್ದೇಶಕ ಅಲೋಕ್ ವರ್ಮಾಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
1974ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿ ಸೇರ್ಪಡೆಗೊಂಡ ರಂಜಿತ್ ಸಿನ್ಹಾ ಐಟಿಬಿಪಿ, ರೈಲ್ವೆ ಬೋರ್ಡ್ ಸೇರಿದಂತೆ ದೇಶದ ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು. ಸಾರ್ವಜನಿಕ ವಲಯದ ಬ್ಯಾಂಕಿನ ಚೇರ್ಮನ್, ವ್ಯವಸ್ಥಾಪಕ ನಿರ್ದೇಶಕರಾಗಿದ್ದರು, ಸೆನ್ಸಾರ್ ಬೋರ್ಡ್ ನ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆರೋಪಿಯಾಗಿದ್ದ ಮೇವು ಹಗರಣದ ತನಿಖೆ ನಡೆಸಿದ್ದ ಸಿನ್ಹಾ ಅವರು ಕೊನೆಗೆ ಲಾಲೂ ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ತನಿಖೆಯನ್ನು ದಿಕ್ಕು ತಪ್ಪಿಸಿದರೆಂಬ ಆರೋಪವನ್ನು ಹೊರಬೇಕಾಯಿತು. ಸುಮಾರು 38 ವರ್ಷಗಳ ಕರ್ತವ್ಯ ಪಾಲನೆ ನಂತರ ಸಿನ್ಹಾ ನಿವೃತ್ತಿ ಹೊಂದಿದ್ದರು. ಆದರೆ, ಸಿನ್ಹಾ ಅವರು ಸಿಬಿಐ ಮುಖ್ಯಸ್ಥರಾಗಿದ್ದಾಗ ತನ್ನ ನಿವಾಸದಲ್ಲಿ ಕಲ್ಲಿದ್ದಲು ಹಗರಣದಲ್ಲಿ ಸಿಲುಕಿರುವ ಪ್ರಮುಖ ಆರೋಪಿಗಳನ್ನು ಭೇಟಿಯಾಗಿದ್ದು ಬಹಿರಂಗವಾದ ಬಳಿಕ ಸಿನ್ಹಾಗೆ ಸಮಸ್ಯೆಗಳು ಶುರುವಾಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications