ಕಲ್ಲಿದ್ದಲು ಹಗರಣ: ರಂಜಿತ್ ಸಿನ್ಹಾ ಅವರ ವಿರುದ್ಧ ತನಿಖೆಗೆ ಅಸ್ತು!
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಸ್ಥೆಯ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಅವರ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಸೋಮವಾರ ಸಿಬಿಐಗೆ ಆದೇಶಿಸಿದೆ.
ನವದೆಹಲಿ, ಜನವರಿ 23: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಸ್ಥೆಯ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಅವರ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಸೋಮವಾರ ಸಿಬಿಐಗೆ ಆದೇಶಿಸಿದೆ.
ಕಲ್ಲಿದ್ದಲು ಹಗರಣದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪವನ್ನು ರಂಜಿತ್ ಸಿನ್ಹಾ ಎದುರಿಸುತ್ತಿದ್ದಾರೆ. ತಮ್ಮ ಅಧಿಕಾರ ಅವಧಿಯಲ್ಲಿ ಸದಾ ಒಂದಿಲ್ಲೊಂದು ವಿವಾದಗಳಿಗೆ ಈಡಾಗಿ ಮುಜುಗರಕ್ಕೆ ಒಳಗಾಗಿದ್ದರು.
ಸಿಬಿಐ ನಿರ್ದೇಶಕರಾಗಿ ರಂಜಿತ್ ಸಿನ್ಹಾ ಅಧಿಕಾರ ದುರುಪಯೋಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.. ಆದ್ದರಿಂದ ಈ ಕುರಿತಂತೆ ತನಿಖೆ ನಡೆಸುವಂತೆ ಎಂದು ಜಸ್ಟಿಸ್ ಎಂ.ಬಿ. ಲೋಕುರ್ ಅವರಿದ್ದ ವಿಶೇಷ ನ್ಯಾಯಪೀಠ ಆದೇಶಿಸಿದೆ.

ಸಿನ್ಹಾ ಅವರ ಪಾತ್ರದ ಬಗ್ಗೆ ತನಿಖೆಗೆ ವಿಶೇಷ ತನಿಖಾ ತಂಡ(SIT)ನ್ನು ರಚಿಸಬೇಕು. ತನಿಖೆಯ ವೇಳೆ ಕೇಂದ್ರ ಜಾಗೃತ ಆಯೋಗ(ಸಿವಿಸಿ)ವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಿಬಿಐ ನಿರ್ದೇಶಕ ಅಲೋಕ್ ವರ್ಮಾಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
1974ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿ ಸೇರ್ಪಡೆಗೊಂಡ ರಂಜಿತ್ ಸಿನ್ಹಾ ಐಟಿಬಿಪಿ, ರೈಲ್ವೆ ಬೋರ್ಡ್ ಸೇರಿದಂತೆ ದೇಶದ ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು. ಸಾರ್ವಜನಿಕ ವಲಯದ ಬ್ಯಾಂಕಿನ ಚೇರ್ಮನ್, ವ್ಯವಸ್ಥಾಪಕ ನಿರ್ದೇಶಕರಾಗಿದ್ದರು, ಸೆನ್ಸಾರ್ ಬೋರ್ಡ್ ನ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆರೋಪಿಯಾಗಿದ್ದ ಮೇವು ಹಗರಣದ ತನಿಖೆ ನಡೆಸಿದ್ದ ಸಿನ್ಹಾ ಅವರು ಕೊನೆಗೆ ಲಾಲೂ ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ತನಿಖೆಯನ್ನು ದಿಕ್ಕು ತಪ್ಪಿಸಿದರೆಂಬ ಆರೋಪವನ್ನು ಹೊರಬೇಕಾಯಿತು. ಸುಮಾರು 38 ವರ್ಷಗಳ ಕರ್ತವ್ಯ ಪಾಲನೆ ನಂತರ ಸಿನ್ಹಾ ನಿವೃತ್ತಿ ಹೊಂದಿದ್ದರು. ಆದರೆ, ಸಿನ್ಹಾ ಅವರು ಸಿಬಿಐ ಮುಖ್ಯಸ್ಥರಾಗಿದ್ದಾಗ ತನ್ನ ನಿವಾಸದಲ್ಲಿ ಕಲ್ಲಿದ್ದಲು ಹಗರಣದಲ್ಲಿ ಸಿಲುಕಿರುವ ಪ್ರಮುಖ ಆರೋಪಿಗಳನ್ನು ಭೇಟಿಯಾಗಿದ್ದು ಬಹಿರಂಗವಾದ ಬಳಿಕ ಸಿನ್ಹಾಗೆ ಸಮಸ್ಯೆಗಳು ಶುರುವಾಯಿತು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications