Gujarat: ಗುಜರಾತ್ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು
ಗಾಂಧಿನಗರ ಜನವರಿ 5: ಗುಜರಾತ್ ನ ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಭಾರೀ ಅಪಘಾತವೊಂದು ಸಂಭವಿಸಿದೆ. ಗುಜರಾತ್ನ ಪೋರಬಂದರ್ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನಗೊಂಡಿದೆ. ಈ ಅಪಘಾತದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.
ದೇಹವನ್ನು ಪತ್ತೆ ಮಾಡಲಾಗಿದ್ದು ಭಾವಸಿಂಗ್ಜಿ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಯಿತು. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಎಎಲ್ಎಚ್-ಧ್ರುವ ಹೆಲಿಕಾಪ್ಟರ್ ಆಗಿದೆ. ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದಾಗಿ ಅದು ಪತನಗೊಂಡಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಹಾರಾಟದ ಸಮಯದಲ್ಲಿ ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ಗಳ ಜೊತೆಗೆ ಒಬ್ಬ ಸಹಾಯಕರು ಸೇರಿ ಒಟ್ಟು ಮೂವರು ಜನ ಇದ್ದರು. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಅಪಘಾತದ ಕಾರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಸುಟ್ಟ ಸ್ಥಿತಿಯಲ್ಲಿ ಪೈಲಟ್ಗಳ ದೇಹ ಪತ್ತೆ
ಪೋರಬಂದರ್ ಪೊಲೀಸ್ ಅಧೀಕ್ಷಕ ಭಗೀರತ್ ಸಿಂಗ್ ಜಡೇಜಾ ಅವರು ಈ ಘಟನೆಯು ಮಧ್ಯಾಹ್ನ 12.10 ಕ್ಕೆ ಸಂಭವಿಸಿದೆ ಎಂದು ಹೇಳಿದರು. ಮೂವರು ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಹೊರತೆಗೆದು ಪೋರಬಂದರ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ತಿಳಿಸಿದ್ದಾರೆ.
ಈ ಅಪಘಾತದ ಬಗ್ಗೆ ಕೋಸ್ಟ್ ಗಾರ್ಡ್ ನಿಂದ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಎರಡು ತಿಂಗಳ ಹಿಂದೆಯೂ ಇಲ್ಲಿ ಇಂತಹದ್ದೇ ಅವಘಡ ಸಂಭವಿಸಿತ್ತು. ಎರಡು ತಿಂಗಳ ಹಿಂದೆ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರಕ್ಕೆ ಪತನವಾಗಿತ್ತು. ಹೆಲಿಕಾಪ್ಟರ್ ನೆಲಕ್ಕೆ ಅಪ್ಪಳಿಸಿದ ತಕ್ಷಣ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಹೊರ ಬಂದು ಕಪ್ಪು ಮೋಡವಾಗಿ ಧಗಧಗಿಸಿತ್ತು.
ALH-ಧ್ರುವ ಹೆಲಿಕಾಪ್ಟರ್ನ ವಿಶೇಷತೆ ಏನು?
ಅಪಘಾತಕ್ಕೀಡಾದ ಹೆಲಿಕಾಪ್ಟರ್ ಎಎಲ್ಎಚ್-ಧ್ರುವ್ ಹೆಲಿಕಾಪ್ಟರ್ ಆಗಿದ್ದು, ಯಾವುದೇ ಹವಾಮಾನದಲ್ಲಿಯೂ ಇದನ್ನು ಬಳಸಬಹುದಾಗಿದೆ. ಈ ಹೆಲಿಕಾಪ್ಟರ್ನಲ್ಲಿ ಶಕ್ತಿ ಎಂಜಿನ್ ಅಳವಡಿಸಲಾಗಿರುತ್ತದೆ. ಇದು ಕಾರ್ಯಾಚರಣೆಯ ಹೆಚ್ಚುವರಿ ಪೇಲೋಡ್ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಗುಡ್ಡಗಾಡು ಮತ್ತು ಪ್ರವೇಶಿಸಲಾಗದ ಹಾಗೂ ಒರಟಾದ ಪ್ರದೇಶಗಳಲ್ಲಿ ಲ್ಯಾಂಡ್ ಮಾಡಬಹುದು. ಪರಿಹಾರ-ಪಾರುಗಾಣಿಕಾ ಕೆಲಸ ಮತ್ತು ಸರಕು ಸಾಗಣೆಯಂತಹ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೆಲಿಕಾಪ್ಟರ್ ಅನ್ನು ವಿನ್ಯಾಸ ಮಾಡಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications