Vande Bharat : ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ನೀಡಲಾದ ಚಪಾತಿಯಲ್ಲಿ ಜಿರಳೆ ಪತ್ತೆ!
ಭಾರತೀಯ ರೈಲ್ವೇಯ ರೈಲುಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟವನ್ನು ಸುಧಾರಿಸಲಾಗಿದೆ ಎಂಬ ಹೇಳಿಕೆಯ ಹೊರತಾಗಿಯೂ, IRCTC ಯ ಊಟದಲ್ಲಿ ಕೀಟಗಳು ಕಂಡುಬರುವ ಘಟನೆಗಳಿಗೆ ಅಂತ್ಯವೇ ಇಲ್ಲ. ಇತ್ತೀಚಿನ ಘಟನೆಯೊಂದರಲ್ಲಿ ಅತಿ ಐಷಾರಾಮಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಚಪಾತಿಗೆ ಜಿರಳೆ ಅಂಟಿಕೊಂಡಿರುವುದು ಕಂಡುಬಂದಿದೆ.
ಭೋಪಾಲ್ನಿಂದ ಗ್ವಾಲಿಯರ್ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಚಪಾತಿಯಲ್ಲಿ ಈ ಕೀಟ ಸಿಕ್ಕಿದೆ. ಅವರು ಚಪಾತಿಯ ಫೋಟೋಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಫೋಟೋವನ್ನು ಶೇರ್ ಮಾಡಿದ ತಕ್ಷಣ, ಘಟನೆಯ ಬಗ್ಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ IRCTC ಟ್ವೀಟ್ಗೆ ಪ್ರತಿಕ್ರಿಯಿಸಲು ಮತ್ತು ಪ್ರಯಾಣಿಕರ PNR ಸಂಖ್ಯೆಯನ್ನು ಕೇಳಿದೆ. IRCTC ಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಹೀಗೆ ಉತ್ತರಿಸಿ, "ನಾವು ಈ ಅಹಿತಕರ ಅನುಭವಕ್ಕೆ ವಿಷಾದಿಸುತ್ತೇವೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದಿದೆ.
ರೈಲಿನಲ್ಲಿ IRCTC ನೀಡುವ ಊಟದಲ್ಲಿ ಕೀಟಗಳನ್ನು ಗುರುತಿಸುವ ಘಟನೆ ಇದೇ ಮೊದಲಲ್ಲ. ಇದು ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುವ ಹಲವು ಘಟನೆಗಳಲ್ಲಿ ಒಂದಾಗಿದೆ.
@IRCTCofficial found a cockroach in my food, in the vande bharat train. #Vandebharatexpress#VandeBharat #rkmp #Delhi @drmbct pic.twitter.com/Re9BkREHTl
— pundook🔫🔫 (@subodhpahalajan) July 24, 2023
ಇನ್ನೊಂದು ಸುದ್ದಿಯಲ್ಲಿ, ಭೋಪಾಲ್ನ ರಾಣಿ ಕಮಲಾಪತಿ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಶೌಚಾಲಯದ ಬಳಕೆಗೆ ಪರಿಹಾರಕ್ಕಾಗಿ ವ್ಯಕ್ತಿಯೊಬ್ಬರು 6,000 ಖರ್ಚು ಮಾಡಬೇಕಾಯಿತು. ಪ್ರಯಾಣಿಕ ತನ್ನ ಪತ್ನಿ ಮತ್ತು ಎಂಟು ವರ್ಷದ ಮಗನೊಂದಿಗೆ ಮಧ್ಯಪ್ರದೇಶದ ಸಿಂಗ್ರೌಲಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವ್ಯಕ್ತಿ ಶೌಚಾಲಯಕ್ಕೆ ಹೋಗಬೇಕಾಯಿತು.

ನಿಲ್ದಾಣದಲ್ಲಿ ಹತ್ತಿರದಲ್ಲಿ ಶೌಚಾಲಯ ಕಂಡುಬರಲಿಲ್ಲ. ಹೀಗಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಹತ್ತಿದ್ದಾನೆ. ಆದರೆ ಬಾಗಿಲು ಹಾಕಿದ್ದರಿಂದ ಹೊರಗೆ ಬರಲು ಸಾಧ್ಯವಾಗಿರಲಿಲ್ಲ. ಪೊಲೀಸರು ಮತ್ತು ಟಿಕೆಟ್ ಕಲೆಕ್ಟರ್ಗಳಿಂದ ಸಹಾಯ ಪಡೆದ ನಂತರ, ಟಿಕೆಟ್ ಇಲ್ಲದೆ ರೈಲು ಹತ್ತಿದ್ದಕ್ಕಾಗಿ ಮುಖ್ಯರಿಗೆ 1,020 ದಂಡ ವಿಧಿಸಬೇಕಾಯಿತು.
ವಂದೇ ಭಾರತ್ ರೈಲು ಊಟದಲ್ಲಿ ಉಗುರು ಪತ್ತೆ
ಈ ಹಿಂದೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ನೀಡಿದ ಆಹಾರದಲ್ಲಿ ಮನುಷ್ಯರ ಉಗುರುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿತ್ತು. ಈ ಪ್ರಯಾಣಿಕರಿಗೆ ರೈಲಿನ ಸಿಬ್ಬಂದಿ ಆಹಾರವನ್ನು ನೀಡಿದ್ದರು. ಆ ಆಹಾರದಲ್ಲಿ ಮನುಷ್ಯರ ಉಗುರು ಪತ್ತೆಯಾಗಿರುವುದು ಆಕ್ರೋಶಕ್ಕೆ ಗುರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮವು ಅಡುಗೆ ಗುತ್ತಿಗೆದಾರನಿಗೆ 25,000 ರೂಪಾಯಿ ದಂಡ ವಿಧಿಸಿತ್ತು. ಉಗುರು ಪತ್ತೆ ಹಚ್ಚಿರುವ ಪ್ರಯಾಣಿಕರು ಆಹಾರದ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಈ ಹಿಂದೆಯೂ ಮುಂಬೈ-ಗೋವಾ ರೈಲಿನಲ್ಲಿ ಕಳಪೆ ಗುಣಮಟ್ಟದ ಆಹಾರದ ಬಗ್ಗೆ ಹಲವಾರು ದೂರುಗಳು ಬಂದಿದೆ. ಈಗ, ಇಂತಹ ಘಟನೆಗಳನ್ನು ತಡೆಯಲು ಐಆರ್ಸಿಟಿಸಿ ಕೆಲವು ಪ್ರೋಟೋಕಾಲ್ಗಳನ್ನು ಜಾರಿಗೆ ತಂದಿದೆ. ಕಾರ್ಯನಿರ್ವಾಹಕ ಮಟ್ಟದ ಅಧಿಕಾರಿಯೊಬ್ಬರು ಈಗ ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಸಲಿದ್ದು, ರೈಲುಗಳಲ್ಲಿ ಆನ್-ಬೋರ್ಡ್ ಸೇವೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications