Coimbatore-Bengaluru Vande Bharat: ಕೊಯಮತ್ತೂರು-ಬೆಂಗಳೂರು ವಂದೇ ಭಾರತ್ ಪ್ರಯಾಣಿಕರಿಗೆ ಸಿಹಿಸುದ್ದಿ
ಚೆನ್ನೈ, ಫೆಬ್ರವರಿ.23: ಕೆಲವೊಂದು ರೈಲುಗಳ ವೇಳಾಪಟ್ಟಿಯಿಂದ ಜನರಿಗೆ ಉಪಯೋಗ ಆಗುವ ಬದಲು ತಿಂದರೆಯೇ ಹೆಚ್ಚಾಗುತ್ತದೆ. ಸಮಯ ಸರಿಯಾಗಿರದೆ, ರೈಲ್ವೆ ನಿಲ್ದಾಣಕ್ಕೆ ಹೋಗಲು ಆಗದೆ ಪರದಾಡುವ ಪ್ರಯಾಣಿಕರಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಹಲವು ಬಾರಿ ರೈಲ್ವೆ ವೇಳಾಪಟ್ಟಿಯನ್ನು ಬದಲಾಯಿಸಲಾಗುತ್ತದೆ.
ಸದ್ಯ ಕೊಯಮತ್ತೂರು - ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ನ ಸಮಯವನ್ನು ರೈಲ್ವೆ ಮಂಡಳಿಯು ಪರಿಷ್ಕರಿಸಿದೆ. ಬೆಳಗ್ಗೆ 5 ಗಂಟೆಗೆ ಹೊರಡುತ್ತಿದ್ದ ಈ ಎಕ್ಸ್ಪ್ರೆಸ್ಗೆ ತಲುಪಲು ಜನ ಕಷ್ಟಪಡುತ್ತಿದ್ದಾರೆ. ಹೀಗಾಗಿಯೇ ಈ ಸಮಯದಿಂದ ಅನಾನುಕೂಲತೆಗೆ ಒಳಗಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಡಿಸೆಂಬರ್ 30, 2023 ರಿಂದ ಕೊಯಮತ್ತೂರು - ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ಓಡುತ್ತಿದೆ. ಅ ಸಮಯದಿಂದಲೂ ಪ್ರಯಾಣಿಕರ ಸಂಘಗಳು ಮತ್ತು ಜನಪ್ರತಿನಿಧಿಗಳು ರೈಲ್ವೆ ಸಚಿವಾಲಯಕ್ಕೆ ಪದೇ ಪದೇ ಮನವಿ ಮಾಡಿದ ಹಿನ್ನೆಲೆಯಲ್ಲಿ ರೈಲ್ವೇ ನಿರ್ಗಮನ ಸಮಯವನ್ನು 5 ಗಂಟೆಯ ಬದಲು ಬೆಳಗ್ಗೆ 7.25 ಗಂಟೆಗೆ ಬದಲಾಯಿಸಲಾಗಿದೆ.
ಪರಿಷ್ಕೃತ ಸಮಯದ ಪ್ರಕಾರ, ಕೊಯಮತ್ತೂರು - ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಧ್ಯಾಹ್ನ 1.50 ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ವಾಪಸ್ ರೈಲು ಮಧ್ಯಾಹ್ನ 2.20 ಕ್ಕೆ ಇಲ್ಲಿಂದ ಹೊರಡಲಿದ್ದು, ರಾತ್ರಿ 8.45ಕ್ಕೆ ಕೊಯಮತ್ತೂರು ಜಂಕ್ಷನ್ ತಲುಪುತ್ತದೆ. ಕೊಯಮತ್ತೂರು - ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಗುರುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ.
ನೈಋತ್ಯ ರೈಲ್ವೆ ಮತ್ತು ದಕ್ಷಿಣ ರೈಲ್ವೆಗೆ ಬರೆದ ಪತ್ರದಲ್ಲಿ, ರೈಲ್ವೆ ಮಂಡಳಿಯು (20641/20642) ಬೆಂಗಳೂರು ಕಂಟೋನ್ಮೆಂಟ್-ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ನ ಸಮಯವನ್ನು ಪರಿಷ್ಕರಿಸುವ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ ಎಂದು ಹೇಳಿದೆ. ಜೊತೆಗೆ ರೈಲ್ವೇ ಸಮಯ ಬದಲಾವಣೆಗೆ ವ್ಯಾಪಕ ಪ್ರಚಾರ ನೀಡುವಂತೆ ನಿರ್ದೇಶನ ನೀಡಿದೆ. ಜೊತೆಗೆ "ಸಮಯದ ಬದಲಾವಣೆಯನ್ನು ಆರಂಭಿಕ ಅನುಕೂಲಕರ ದಿನಾಂಕದಿಂದ ಜಾರಿಗೆ ತರಬಹುದು" ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮುಂಜಾನೆ 5 ಗಂಟೆಗೆ ಕೊಯಮತ್ತೂರು - ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಹೊರಡುವ ಸಮಯವು ವಿಶೇಷವಾಗಿ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿತ್ತು. ಹಾಗೆಯೇ ಸಾರ್ವಜನಿಕ ಸಾರಿಗೆ ಸೇವೆಗಳ ಅನುಪಸ್ಥಿತಿಯಲ್ಲಿ ಅಥವಾ ಕೊರತೆಯ ಸಂದರ್ಭದಲ್ಲಿ ಪ್ರಯಾಣಿಕರು ತಮ್ಮ ಮನೆಗಳಿಂದ ಸ್ವಂತ ಅಥವಾ ಬಾಡಿಗೆ ವಾಹನಗಳಲ್ಲಿ ರೈಲ್ವೇ ನಿಲ್ದಾಣವನ್ನು ತಲುಪಬೇಕಿತ್ತು.
ಕೊಯಮತ್ತೂರಿನಿಂದ ಬೆಳಗ್ಗೆ 7.30ಕ್ಕೆ ಹೊರಡುವ ರೈಲು ಸಾಕಷ್ಟು ಅನುಕೂಲಕರವಾಗಿರುತ್ತದೆ ಎಂದು ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಮಾಜಿ ಸದಸ್ಯ ಮತ್ತು ಕೊಂಗು ಗ್ಲೋಬಲ್ ಫೋರಂನ ನಿರ್ದೇಶಕ ಜೆ.ಸತೀಶ್ ಹೇಳಿದ್ದಾರೆ. ಜೊತೆಗೆ, ರೈಲ್ವೆಯು ಎರಡೂ ದಿಕ್ಕುಗಳಲ್ಲಿ ಕನಿಷ್ಠ ಅರ್ಧ ಘಂಟೆಯ ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ವ್ಯಾಪ್ತಿಯನ್ನು ನೋಡಬಹುದು ಎಂದು ಶ್ರೀ ಸತೀಶ್ ಒತ್ತಿ ಹೇಳಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ










Click it and Unblock the Notifications