IMD Weather Forecast: 05 ದಿನ ಈ ಭಾಗಗಳಲ್ಲಿ ಶೀತ ಅಲೆ, ಒಣ ಹವೆ ಅಲರ್ಟ್, ಮಳೆ ಮುನ್ಸೂಚನೆ
India Weather Alert: ದೇಶದೆಲ್ಲಡೆ ಮಳೆ ಹವಾಮಾನ ಪರಿಸ್ಥಿತಿ ಕುಗ್ಗಿದೆ. ಹಿಂಗಾರು ಮಳೆ ದುರ್ಬಲಗೊಂಡಿದ್ದು, ದಕ್ಷಿಣ ಹಾಗೂ ಉತ್ತರ ಭಾರತದ ಪ್ರಮುಖ ರಾಜ್ಯಗಳು, ಮಹಾನಗರಗಳಲ್ಲಿ ಚಳಿ ಆವರಿಸಿದೆ. ಬೆಳಬೆಳಗ್ಗೆ ದಟ್ಟ ಮಂಜು, ಮೈಕೊರೆವ ಚಳಿ ಆವರಿಸುತ್ತಿದೆ. ಇದೇ ವಾತಾವರಣ ಮುಂದಿನ 05 ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಸಮುದ್ರ ಮೇಲ್ಭಾಗದಲ್ಲಿ 1.5 ಕಿಲೋ ಮೀಟರ್ ಎತ್ತರದವರೆಗ ಟ್ರಫ್ ಸೃಷ್ಟಿಯಾಗಿದೆ. ಪೂರ್ವ ಭಾರತದ ಪ್ರದೇಶದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 12 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿದೆ. ಬಾಂಗ್ಲಾದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇಲ್ಮೈ ಚಂಡಮಾರುತ ಪರಿಚಲನೆ ಉಂಟಾಗಿದೆ ಎಂದು ಬುಧವಾರದ ಹವಾಮಾನ ಮುನ್ಸೂಚನೆ ವರದಿಯಲ್ಲಿ ತಿಳಿಸಲಾಗಿದೆ.

ಈ ಭಾಗಗಳಲ್ಲಿ ಶೀತದ ಅಲೆ ಮುನ್ಸೂಚನೆ
ಸದ್ಯ ವ್ಯಾಪಕ ಮಳೆ ಲಕ್ಷಣಗಳು ಕಾಣಿಸುತ್ತಿಲ್ಲ. ಬದಲಾಗಿ ಶೀತದ ಅಲೆಯ ಎಚ್ಚರಿಕೆ ಇದೆ. ದೇಶದ ಛತ್ತೀಸ್ಗಢ, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಉತ್ತರ ಕರ್ನಾಟಕದ ಒಳನಾಡು, ಒಡಿಶಾ, ಪಂಜಾಬ್, ತೆಲಂಗಾಣ ಮತ್ತು ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಶೀತ ಅಲೆಯ ಮುನ್ಸೂಚನೆ ನೀಡಲಾಗಿದೆ. ಇಲ್ಲಿ ತೀವ್ರ ಸ್ವರೂಪದಲ್ಲಿ ತೇವ ಭರಿತ ಗಾಳಿ ಬೀಸಲಿದೆ. ಮೈಕೊರೆವ ಚಳಿ ಕಂಡು ಬರಲಿದೆ.
55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತೆ..
ಇನ್ನೂ ಅಸ್ಸಾಂ ಮತ್ತು ಮೇಘಾಲಯ, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಪೂರ್ವ ಉತ್ತರ ಪ್ರದೇಶ, ನಾಗಾಲ್ಯಾಂಡ್ ಹಾಗೂ ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆ ಹೆಚ್ಚು. ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವರೆಗೆ ಗಾಳಿಯ ವೇಗದೊಂದಿಗೆ 55 ಕಿ.ಮೀ ವರೆಗೆ ಗಾಳಿಯ ವೇಗದೊಂದಿಗೆ ಬಿರುಗಾಳಿ ಬೀಸುವ ನಿರೀಕ್ಷೆ ಇದೆ. ಮುಂದಿನ ಐದು ದಿನ ಈ ಕರಾವಳಿ ಭಾಗದಲ್ಲಿ ಥಂಢಿ ಆವರಿಸಲಿದೆ.
ದೆಹಲಿ, ಮಧ್ಯ ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಒಡಿಶಾ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಕನಿಷ್ಠ ತಾಪಮಾನ ಕುಸಿದಿದೆ. ಇಲ್ಲಿ ಶೀತದ ಅಲೆ ಎಚ್ಚರಿಕೆ ನೀಡಲಾಗಿದೆ. ಮಧ್ಯಾಹ್ನ ಬಿರು ಬಿಸಲು ಕಾಡಲಿದ್ದು, ಗರಿಷ್ಟ ತಾಪಮಾನದಲ್ಲಿ ಭಾರೀ ಹೆಚ್ಚಾಗುವ ನಿರೀಕ್ಷೆ ಇದೆ. ಮುಂದಿನ ಕೆಲವು ದಿನಗಳ ಕಾಲ ಒಣಹವೆಯೇ ಮುಂದುವರಿಯಲಿದೆ.
ಈ ಭಾಗಗಳಲ್ಲಿ ಮಳೆ ಎಚ್ಚರಿಕೆ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಆಗಲಿದೆ. ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications