ಅಂತಿಮ ವರ್ಷದ ಪರೀಕ್ಷೆಗಳು; ಗೃಹ ಸಚಿವಾಲಯದ ಸ್ಪಷ್ಟನೆ
ನವದೆಹಲಿ, ಆಗಸ್ಟ್ 13 : ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದೆ.
Recommended Video
ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸುವಾಗ ಆಗಸ್ಟ್ 31ರ ತನಕ ಶಾಲೆ, ಕಾಲೇಜುಗಳನ್ನು ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ. ಆದರೆ, ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವ ತೀರ್ಮಾನವನ್ನು ಕಾಲೇಜು, ವಿಶ್ವವಿದ್ಯಾಲಯಕ್ಕೆ ನೀಡಿದೆ.
ಉನ್ನತ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷದ ಪರೀಕ್ಷೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಬಹುದು ಎಂದು ಯುಜಿಸಿ ಹೇಳಿದೆ. ಯುಜಿಸಿ ಮಾರ್ಗಸೂಚಿ ಅನ್ವಯವೇ ಪರೀಕ್ಷೆ ನಡೆಸಿ, ಮೌಲ್ಯ ಮಾಪನ ಪ್ರಕ್ರಿಯೆ ನಡೆಸಬೇಕು ಎಂದು ಸೂಚಿಸಲಾಗಿದೆ ಎಂದು ಸುಪ್ರೀಂಕೋರ್ಟ್ಗೆ ತಿಳಿಸಲಾಗಿದೆ.

ಜುಲೈ 6ರಂದು ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆಯೊಂದನ್ನು ಕಳಿಸಿದೆ. ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ಪೂರ್ಣಗೊಳಿಸಿ ಪ್ರಕ್ರಿಯೆಗಳನ್ನು ಮುಗಿಸಬೇಕು. ಆನ್ಲೈನ್ ಅಥವ ಆಫ್ ಲೈನ್ ಮೂಲಕ ಪರೀಕ್ಷೆ ನಡೆಸುವ ತೀರ್ಮಾನ ವಿಶ್ವವಿದ್ಯಾಲಯಗಳಿಗೆ ಬಿಟ್ಟಿದ್ದು ಎಂದು ಹೇಳಿದೆ.
ವಿದ್ಯಾರ್ಥಿಗಳು ಉನ್ನತ ಶಿಕ್ಷಣ, ಉದ್ಯೋಗಕ್ಕೆ ತೆರಳಲು ಸಹಾಯಕವಾಗುವಂತೆ ಸೆಪ್ಟೆಂಬರ್ ಅಂತ್ಯದೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಗಿಸಬೇಕು. ಆದರೆ, ಕೆಲವು ರಾಜ್ಯಗಳು ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲು ವಿರೋಧ ವ್ಯಕ್ತಪಡಿಸಿವೆ.
ಹಲವು ರಾಜ್ಯಗಳು ಕಾಲೇಜುಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಿವೆ. ಇಂತಹ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಸೆಪ್ಟೆಂಬರ್ ಅಂತ್ಯದ ಗಡುವನ್ನು ಮುಂದೂಡಬೇಕು ಎಂದು ರಾಜ್ಯಗಳು ಕೇಂದ್ರವನ್ನು ಒತ್ತಾಯಿಸಿದ್ದವು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications