ದೇಶಕ್ಕಾಗಿ ಹುತಾತ್ಮನಾದ ಕರ್ನಲ್ ಸಂತೋಷ್ ಮಹಾದೀಕ್
ನವದೆಹಲಿ, ನವೆಂಬರ್, 18 : ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಲಷ್ಕರೆ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಕರ್ನಲ್ ಸಂತೋಷ್ ಮಹಾದೀಕ್ ಮಂಗಳವಾರ ಹುತಾತ್ಮರಾಗಿದ್ದಾರೆ. ನಾಡಿನ ಹಲವಾರು ಗಣ್ಯರು ಇವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಜಮ್ಮು ಕಾಶ್ಮೀರದ ಕುಪ್ವಾರ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಆಗಮಿಸಲು ಪ್ರಯತ್ನಪಟ್ಟ ಲಷ್ಕರೆ ಉಗ್ರರನ್ನು ತಡೆಯಲು ಯತ್ನಿಸುವ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸಂತೋಷ್ ತೀವ್ರ ಗಾಯಗೊಂಡಿದ್ದರು. ತಕ್ಷಣ ಇವರನ್ನು ದುರ್ಗ್ ಮುಲ್ಲಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದ ವೀರಯೋಧ ಸಂತೋಷ ದೇಶಕ್ಕಾಗಿ ತಮ್ಮ ಪ್ರಾಣ ತೆತ್ತಿದ್ದಾರೆ.[ಕಲಬುರ್ಗಿಯ ಯೋಧನೊಂದಿಗೇ ಬೂದಿಯಾದ ಸಾವಿನ ರಹಸ್ಯ]

ಸುಮಾರು ರಾತ್ರಿ 2 ಗಂಟೆ ವೇಳೆಗೆ ಸಂತೋಷ್ ಮಹಾದೀಕ್ ತಮ್ಮ ಗುಂಪಿನ ಸೈನಿಕರೊಂದಿಗೆ ಕುಪ್ವಾರ ಜಿಲ್ಲೆಯ ಹಜಿ ನಾಕಾ ಎಂಬ ದಟ್ಟಾರಣ್ಯದ ಗಡಿ ಪ್ರದೇಶದಲ್ಲಿ ಅಡಗಿರುವ ಉಗ್ರರ ದಂಡನ್ನು ಹತ್ತಿಕ್ಕಲು ಮುಂದಾದಾಗ ಈ ಅವಘಡಕ್ಕೆ ಒಳಗಾಗಿದ್ದು, ದೇಶದ ಉಳಿವಿಗಾಗಿ ಹೋರಾಡುತ್ತಲೇ ಮರಣ ಹೊಂದಿದ್ದಾರೆ.[ಭಾರತದಲ್ಲೇ ಎಕೆ 47 ತಯಾರಿಸಲಾಗುತ್ತದೆ, ಏಕೆ?]
ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರ ಉಗ್ರರ ವಿರುದ್ಧ ನಡೆಸಿದ ಹಲವಾರು ಕಾರ್ಯಾಚರಣೆಯಲ್ಲಿ ಸಂತೋಷ್ ಮಹಾದೀಕ್ (38) ಸಕ್ರೀಯವಾಗಿ ಭಾಗವಹಿಸಿದ್ದರು. ಇವರು 2003ರಲ್ಲಿ ನಡೆದ ರೈನೋ ಕಾರ್ಯಾಚರಣೆಯಲ್ಲಿ ಮಾಡಿದ ಸಾಧನೆಗಾಗಿ ಸೇನಾ ಪದಕ ಪಡೆದಿದ್ದರು. ರಾಷ್ಟ್ರೀಯ ಶಸ್ತ್ರಾಸ್ತ್ರ ಸೇನೆಯ ಕಮ್ಯಾಂಡ್ ಆಗಿ ಸೇವೆ ಸಲ್ಲಿಸಿದ ಇವರು ಈ ಬಾರಿ 41 ರಾಷ್ಟ್ರೀಯ ರೈಫಲ್ಸ್ ಪಡೆಯ ಕಮಾಂಡಿಂಗ್ ಆಫೀಸರ್ ಹೊಣೆ ಹೊತ್ತಿದ್ದರು.
ಈ ವರ್ಷ ಸಂತೋಷ ಒಳಗೊಂಡಂತೆ ಇಬ್ಬರು ಸೈನಿಕರು ಜಮ್ಮು ಕಾಶ್ಮೀರ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಜನವರಿಯಲ್ಲಿ ಮುನೀಂದ್ರ ರೈ ಎಂಬಾತ ಜಮ್ಮು ಮತ್ತು ಕಾಶ್ಮೀರ ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು.
PM Narendra Modi pays tribute to late VHP leader Ashok Singhal, in Delhi. pic.twitter.com/mOwLHknmf8
— ANI (@ANI_news) November 18, 2015 -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications