ಝಿಕಾ ವೈರಸ್ಗೆ ಮದ್ದು ನಿಮ್ಮ ಮನೆಯ ಕೈದೋಟದಲ್ಲೇ ಇದೆ
ನವದೆಹಲಿ, ಫೆಬ್ರವರಿ, 10: ಪ್ರಪಂಚವನ್ನೇ ಬೆಚ್ಚಿ ಬೀಳಿಸಲು ಹೊರಟಿರುವ ಝಿಕಾ ವೈರಸ್ ಪ್ರಕರಣಗಳು ಅಲ್ಲಲ್ಲಿ ದಾಖಲಾಗುತ್ತಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ವೆನಿಜ್ಯುಯೇಲಾದಿಂದ ಚೈನಾಗೆ ಆಗಮಿಸಿದ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದ್ದು ಚೀನಾದಲ್ಲಿ ಮೊದಲ ಪ್ರಕರಣ ದಾಖಲಾದಂತಾಗಿದೆ.
ಚೀನಾದ ದಕ್ಷಿಣ ಭಾಗದ ಗಂಜೌ ನಗರದ 34 ವರ್ಷದ ಈ ವ್ಯಕ್ತಿಯಲ್ಲಿ ಸೋಂಕು ಕಂಡು ಬಂದಿದೆ. ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿಯೂ ಹೊಸ ಪ್ರಕರಣಗಳು ದಾಖಲಾಗಿವೆ. ಇತ್ತ ಭಾರತದಲ್ಲಿ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.[ಝಿಕಾ ವೈರಸ್ ಎಂದರೇನು? ಹೇಗೆ ಹರಡುತ್ತದೆ?]
ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು ಕರ್ನಾಟಕ ರಾಜ್ಯ ಸರ್ಕಾರ ಗರ್ಭಿಣಿಯರಿಗೆ ನಿಂಬೆ ಹುಲ್ಲಿನ ತೈಲ (ಲೆಮನ್ ಗ್ರಾಸ್ ಆಯಿಲ್) ಹಾಗೂ ಮಡಿಲು ಕಿಟ್ ವಿತರಿಸಲು ಮುಂದಾಗಿದೆ. ಸೊಳ್ಳೆಯಿಂದ ಸೋಂಕು ಹರಡುವುದು ದೃಢಪಟ್ಟಿದ್ದು ಸೊಳ್ಳೆ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ.[ಸೊಳ್ಳೆ ಒದ್ದು ಓಡಿಸುವ ಗಿಡಗಳ ಬಗ್ಗೆ ನಿಮಗೆಷ್ಟು ಗೊತ್ತು?]

ತುರ್ತು ಪರಿಸ್ಥಿತಿ
ಝಿಕಾ ವೈರಸ್ ಸೋಂಕಿನ ಸಮಸ್ಯೆಯನ್ನು ಅಂತಾರಾಷ್ಟ್ರೀಯ ಸಾರ್ವಜನಿಕ ಆರೋಗ್ಯದ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಹಾಗಾಗಿ ಪ್ರತಿಯೊಂದು ದೇಶದ ಆರೋಗ್ಯ ಇಲಾಖೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಸೊಳ್ಳೆ ನಿಯಂತ್ರಣ
ಮುನ್ನೆಚ್ಚರಿಕೆ ಕ್ರಮದ ಒಂದು ಭಾಗವಾಗಿ ಗರ್ಭಿಣಿಯರನ್ನು ಝಿಕಾ ವೈರಸ್ನಿಂದ ದೂರವಿರಿಸಲು ನೈಸರ್ಗಿಕ ನಿಂಬೆ ಹುಲ್ಲಿನ ತೈಲ ವಿತರಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

15 ದಿನದಲ್ಲಿ ಅನುಷ್ಠಾನ
10-15 ದಿನಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ನಿಂಬೆಹುಲ್ಲಿನ ತೈಲ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಸವ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ನೀಡುವ ಮಡಿಲು ಕಿಟ್ನ ಜತೆ ನಿಂಬೆ ಹುಲ್ಲಿನ ತೈಲ ಕೂಡ ವಿತರಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಜಿಗೆ 1300 ರು. ಇದೆ
ಸಾಬೂನು ತಯಾರಿಕೆಯಲ್ಲಿ ಬಳಸುವ ನಿಂಬೆ ಹುಲ್ಲಿನ ತೈಲ ಕೆಜಿಗೆ 1300 ರು. ಇದೆ. ಗುಜರಾತ್ ಮೂಲದ ಕಂಪನಿಯಿಂದ ನಿಂಬೆ ಹುಲ್ಲಿನ ತೈಲ ಖರೀದಿ ಮಾಡಲಾಗುತ್ತಿದೆ ಎಂದು ಕೆಎಸ್ಡಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
-
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications