ಝಿಕಾ ವೈರಸ್ಗೆ ಮದ್ದು ನಿಮ್ಮ ಮನೆಯ ಕೈದೋಟದಲ್ಲೇ ಇದೆ
ನವದೆಹಲಿ, ಫೆಬ್ರವರಿ, 10: ಪ್ರಪಂಚವನ್ನೇ ಬೆಚ್ಚಿ ಬೀಳಿಸಲು ಹೊರಟಿರುವ ಝಿಕಾ ವೈರಸ್ ಪ್ರಕರಣಗಳು ಅಲ್ಲಲ್ಲಿ ದಾಖಲಾಗುತ್ತಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ವೆನಿಜ್ಯುಯೇಲಾದಿಂದ ಚೈನಾಗೆ ಆಗಮಿಸಿದ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದ್ದು ಚೀನಾದಲ್ಲಿ ಮೊದಲ ಪ್ರಕರಣ ದಾಖಲಾದಂತಾಗಿದೆ.
ಚೀನಾದ ದಕ್ಷಿಣ ಭಾಗದ ಗಂಜೌ ನಗರದ 34 ವರ್ಷದ ಈ ವ್ಯಕ್ತಿಯಲ್ಲಿ ಸೋಂಕು ಕಂಡು ಬಂದಿದೆ. ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿಯೂ ಹೊಸ ಪ್ರಕರಣಗಳು ದಾಖಲಾಗಿವೆ. ಇತ್ತ ಭಾರತದಲ್ಲಿ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.[ಝಿಕಾ ವೈರಸ್ ಎಂದರೇನು? ಹೇಗೆ ಹರಡುತ್ತದೆ?]
ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು ಕರ್ನಾಟಕ ರಾಜ್ಯ ಸರ್ಕಾರ ಗರ್ಭಿಣಿಯರಿಗೆ ನಿಂಬೆ ಹುಲ್ಲಿನ ತೈಲ (ಲೆಮನ್ ಗ್ರಾಸ್ ಆಯಿಲ್) ಹಾಗೂ ಮಡಿಲು ಕಿಟ್ ವಿತರಿಸಲು ಮುಂದಾಗಿದೆ. ಸೊಳ್ಳೆಯಿಂದ ಸೋಂಕು ಹರಡುವುದು ದೃಢಪಟ್ಟಿದ್ದು ಸೊಳ್ಳೆ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ.[ಸೊಳ್ಳೆ ಒದ್ದು ಓಡಿಸುವ ಗಿಡಗಳ ಬಗ್ಗೆ ನಿಮಗೆಷ್ಟು ಗೊತ್ತು?]

ತುರ್ತು ಪರಿಸ್ಥಿತಿ
ಝಿಕಾ ವೈರಸ್ ಸೋಂಕಿನ ಸಮಸ್ಯೆಯನ್ನು ಅಂತಾರಾಷ್ಟ್ರೀಯ ಸಾರ್ವಜನಿಕ ಆರೋಗ್ಯದ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಹಾಗಾಗಿ ಪ್ರತಿಯೊಂದು ದೇಶದ ಆರೋಗ್ಯ ಇಲಾಖೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಸೊಳ್ಳೆ ನಿಯಂತ್ರಣ
ಮುನ್ನೆಚ್ಚರಿಕೆ ಕ್ರಮದ ಒಂದು ಭಾಗವಾಗಿ ಗರ್ಭಿಣಿಯರನ್ನು ಝಿಕಾ ವೈರಸ್ನಿಂದ ದೂರವಿರಿಸಲು ನೈಸರ್ಗಿಕ ನಿಂಬೆ ಹುಲ್ಲಿನ ತೈಲ ವಿತರಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

15 ದಿನದಲ್ಲಿ ಅನುಷ್ಠಾನ
10-15 ದಿನಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ನಿಂಬೆಹುಲ್ಲಿನ ತೈಲ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಸವ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ನೀಡುವ ಮಡಿಲು ಕಿಟ್ನ ಜತೆ ನಿಂಬೆ ಹುಲ್ಲಿನ ತೈಲ ಕೂಡ ವಿತರಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಜಿಗೆ 1300 ರು. ಇದೆ
ಸಾಬೂನು ತಯಾರಿಕೆಯಲ್ಲಿ ಬಳಸುವ ನಿಂಬೆ ಹುಲ್ಲಿನ ತೈಲ ಕೆಜಿಗೆ 1300 ರು. ಇದೆ. ಗುಜರಾತ್ ಮೂಲದ ಕಂಪನಿಯಿಂದ ನಿಂಬೆ ಹುಲ್ಲಿನ ತೈಲ ಖರೀದಿ ಮಾಡಲಾಗುತ್ತಿದೆ ಎಂದು ಕೆಎಸ್ಡಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications