ಜುಲೈನಿಂದ ಶಿರಡಿಗೆ ವಿಮಾನ ಯಾನ ಸೇವೆ ಆರಂಭ!
ಪುಣೆ, ಜೂನ್ 6: ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಶಿರಡಿ ವಿಮಾನ ನಿಲ್ದಾಣವು ಮುಂದಿನ ತಿಂಗಳು ಕಾರ್ಯಾಚರಣೆ ಆರಂಭಿಸಲಿದೆ. ಆ ಮೂಲಕ ವಾಣಿಜ್ಯ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಮಹಾರಾಷ್ಟ್ರ ವಿಮಾನನಿಲ್ದಾಣ ಅಭಿವೃದ್ಧಿ ಕಂಪೆನಿಯ ಅಧಿಕಾರಿಗಳು ಈ ವಿಚಾರವನ್ನು ಸೋಮವಾರ ಖಾತ್ರಿ ಪಡಿಸಿದ್ದಾರೆ.
"ಜುಲೈ ತಿಂಗಳ ಆರಂಭದಲ್ಲಿ ವಾಣಿಜ್ಯ ವಿಮಾನಗಳ ಹಾರಾಟವು ಶಿರಡಿ ವಿಮಾನ ನಿಲ್ದಾಣದಲ್ಲಿ ಆರಂಭವಾಗಲಿದೆ. ಏರ್ ಇಂಡಿಯಾ ಇದರ ನೇತೃತ್ವ ವಹಿಸಲಿದೆ. ಆ ನಂತರ ಟ್ರೂಜೆಟ್ ಕೂಡ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆ ಇದೆ" ಎಂದು ಎಂಎಡಿಸಿಯ ಉಪಾಧ್ಯಕ್ಷ ಹಾಗೂ ಕಾರ್ಯನಿರ್ವಹಣಾ ನಿರ್ದೇಶಕ ಸುರೇಶ್ ಕಕಾನಿ ತಿಳಿಸಿದ್ದಾರೆ.

ಜೂನ್ ಏಳರಂದು ನವದೆಹಲಿಯಲ್ಲಿ ವಿಮಾನನಿಲ್ದಾಣ ಪ್ರಾಧಿಕಾರಕ್ಕೆ ತೆರಳಿ ಶಿರಡಿ ಹಾಗೂ ಪುಣೆ ವಿಮಾನ ನಿಲ್ದಾಣ ಯೋಜನೆ ಬಗ್ಗೆ ಮಾತುಕತೆ ನಡೆಸಲಿದ್ದೇವೆ. ಪರವಾನಗಿ ಅಗತ್ಯ ಇದ್ದಿದ್ದರಿಂದ ಸೇವೆ ತಡವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಹದಿನೈದು ದಿನದಲ್ಲಿ ಪರವಾನಗಿ ದೊರೆಯಲಿದೆ. ವಿಮಾನ ನಿಲ್ದಾಣ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಮುಂದಿನ ವಾರ ಒಮ್ಮೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಖಾತ್ರಿ ಪಡಿಸಿದ್ದಾರೆ. ಶಿರಡಿಯಿಂದ ದೇಶೀಯವಾಗಿ ಹಾಗೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಸಿದ್ಧತೆ ನಡೆದಿದೆ.
ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಎಂಎಡಿಸಿ ಅಧಿಕಾರಿಗಳ ಜತೆ ಸಭೆ ನಡೆಸಿದ್ದರು. ಮುಂದೆ ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದ ಅಧಿಕಾರಿಗಳ ಸಹಕಾರದ ಜತೆಗೆ ಶಿರಡಿ ವಿಮಾನ ನಿಲ್ದಾಣದ ವಿಸ್ತರಣೆಯ ಬಗ್ಗೆ ಸುಳಿವು ನೀಡಿದ್ದಾರೆ ಫಡಣವೀಸ್.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications