ತಕ್ಷಣದಿಂದಲೇ ಜಾರಿ; ಎಲ್ಪಿಜಿ ಸಿಲಿಂಡರ್ ದರ 25 ರೂ. ಏರಿಕೆ
ಬೆಂಗಳೂರು, ಮಾರ್ಚ್ 01: ಕ್ಯಾಲೆಂಡರ್ ಹೊಸ ವರ್ಷದ ಮೂರನೇ ತಿಂಗಳ ಮೊದಲ ದಿನವೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ದರಗಳನ್ನು ಏರಿಕೆ ಮಾಡಲಾಗಿದೆ. ಇದರಿಂದಾಗಿ ಹೋಟೆಲ್ಗಳಲ್ಲಿಯೂ ದರ ಹೆಚ್ಚಾಗುವ ನಿರೀಕ್ಷೆಇದೆ.
ಮಾರ್ಚ್ 1ರ ಶುಕ್ರವಾರದಿಂದಲೇ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 25 ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಪ್ರತಿ ತಿಂಗಳ ಮೊದಲ ದಿನವೇ ಸಿಲಿಂಡರ್ ಬೆಲೆಯಲ್ಲಿ ಏರಿಳಿತ ಆಗುತ್ತದೆ. ಈ ಬಾರಿ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ ಏರಿಕೆಯಾಗಿದೆ. ಅಲ್ಲದೇ ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಶುಕ್ರವಾರದಿಂದಲೇ ಸಿಲಿಂಡರ್ಗೆ ಹೆಚ್ಚು ಹಣ ಪಾವತಿ ಮಾಡಬೇಕಿದೆ.
ಯಾವ ನಗರದಲ್ಲಿ ಎಷ್ಟು ದರ?: ಪರಿಷ್ಕೃತ ದರ ಜಾರಿಯಾದ ಬಳಿಕ ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1795 ರೂ.ಗಳಿಗೆ ಏರಿಕೆಯಾಗಿದೆ. ಹೋಟೆಲ್ಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಬೆಲೆಯನ್ನು ಗ್ರಾಹಕರ ಮೇಲೆ ಹಾಕುವ ಸಾಧ್ಯತೆ ಇದ್ದು, ಊಟ, ಉಪಹಾರದ ದರದಲ್ಲಿ ಏರಿಕೆ ಆಗುವ ನಿರೀಕ್ಷೆ ಇದೆ.
ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಬೆಲೆ 2023ರಲ್ಲಿ ನಿರಂತರ ಏರಿಕೆ ಕಂಡಿತ್ತು. ಆದರೆ ಡಿಸೆಂಬರ್ನಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ರೂ. 39.50 ಕಡಿತಗೊಳಿಸಿದ್ದು, ಜನರಿಗೆ ನೆಮ್ಮದಿ ತಂದಿತ್ತು.
ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದರು. ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 14 ರೂ. ಏರಿಕೆ ಮಾಡಲಾಗಿತ್ತು.
ಪ್ರತಿ ತಿಂಗಳ ಮೊದಲ ದಿನವೇ ತೈಲ ಕಂಪನಿಗಳು ವಾಣಿಜ್ಯ ಮತ್ತು ಗೃಹ ಬಳಕೆಯ ಸಿಲಿಂಡರ್ಗಳ ದರಗಳಲ್ಲಿ ಏರಿಕೆ, ಇಳಿಕೆ ಮಾಡುತ್ತವೆ. ಫೆಬ್ರವರಿಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 14 ರೂ. ಮತ್ತು ಮಾರ್ಚ್ನಲ್ಲಿ 25 ರೂ. ಏರಿಕೆಯಾಗಿದೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮಾರ್ಚ್ ತಿಂಗಳ 10ರ ಬಳಿಕ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಇಂತಹ ಸಮಯದಲ್ಲಿಯೇ ವಾಣಿಜ್ಯ ಬಳಕೆಯ ಸಿಲಿಂಡರ್ಗಳ ದರದಲ್ಲಿ ಏರಿಕೆ ಕಂಡುಬಂದಿದೆ.
ಈ ಹಿಂದೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತಿಂಗಳಿನಲ್ಲಿ ಎರಡು ಬಾರಿ ಪೆಟ್ರೋಲ್, ಡೀಸೆಲ್, ಎಲ್ಪಿಜಿಗಳ ಬೆಲೆಯನ್ನು ಪರಿಷ್ಕರಣೆ ಮಾಡಲು ಅವಕಾಶವಿತ್ತು. ಆದರೆ ಈಗ ತಿಂಗಳ ಮೊದಲ ದಿನವೇ ದರಗಳನ್ನು ಪರಿಷ್ಕರಣೆ ಮಾಡುತ್ತವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications