ಗುಜರಾತ್ನ ವಡೋದರಾದಲ್ಲಿ ಕೋಮು ಘರ್ಷಣೆ: 19 ಜನರ ಬಂಧನ
ವಡೋದರಾ, ಅಕ್ಟೋಬರ್ 25: ಗುಜರಾತ್ನ ವಡೋದರಾದಲ್ಲಿ ದೀಪಾವಳಿ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.
ಕೋಮು ಸೂಕ್ಷ್ಮ ಪ್ರದೇಶವಾದ ವಡೋದರಾದ ಪಾಣಿಗೇಟ್ ಬಳಿ ಮಂಗಳವಾರ ಮಧ್ಯರಾತ್ರಿ 12.45ರ ಸುಮಾರಿಗೆ ಘರ್ಷಣೆ ನಡೆದಿದೆ. ಈ ಘರ್ಷಣೆಯು ಪಟಾಕಿ ಸಿಡಿಸುವ ವಿಚಾರವಾಗಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘರ್ಷಣೆ ಸಂಭವಿಸಿದ ಒಂದು ಗಂಟೆಯ ಬಳಿಕೆ ಸ್ಥಳೀಯ ವ್ಯಕ್ತಿಯೊಬ್ಬ ತನ್ನ ಮನೆಯ ಮೂರನೇ ಮಹಡಿಯಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಅನ್ನು ಎಸೆದಿದ್ದಾನೆ. ಈ ಆರೋಪಿಯನ್ನೂ ಬಂಧಿಸಲಾಗಿದೆ ಎಂದು ವಡೋದರಾ ಉಪ ಪೊಲೀಸ್ ಆಯುಕ್ತ ಯಶಪಾಲ್ ಜಗನಿಯಾ ಹೇಳಿದ್ದಾರೆ.

ರಾಕೆಟ್ ಪಟಾಕಿ ಸಿಡಿದ ಸ್ಥಳದಲ್ಲಿದ್ದ ಬೈಕ್ಗೆ ಬೆಂಕಿ ಹೊತ್ತಿಕೊಂಡಿದೆ. ಈ ವಿಚಾರವಾಗಿ ಎರಡು ಕೋಮಿನವರ ನಡುವೆ ಜಗಳ ಆರಂಭವಾಗಿದೆ. ಆ ನಂತರ ಎರಡೂ ಸಮುದಾಯಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಹಾನಿ ಉಂಟಾಗಿದೆ ಎಂದು ಜಗನಿಯಾ ತಿಳಿಸಿದ್ದಾರೆ.
ಪ್ರಕರಣದ ಬಳಿಕ ವಡೋದರಾದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಈಗ ಪರಿಸ್ಥಿತಿ ಸಂಪೂರ್ಣ ಹತೋಟೆಯಲ್ಲಿದೆ ಅವರು ಹೇಳಿದ್ದಾರೆ. ಘರ್ಷಣೆಯಲ್ಲಿ ತೊಡಗಿದ ಶಂಕಿತರನ್ನು ಬಂಧಿಸಲಾಗುತ್ತಿದೆ. ಬಂಧಿತರಲ್ಲಿ ಎರಡೂ ಸಮೂದಾಯದವರು ಸೇರಿದ್ದಾರೆ. ಮನೆಮನೆಗೆ ತೆರಳಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗುಜರಾತ್ ವಿಧಾನಸಭೆಗೆ ಕೆಲ ದಿನಗಳಲ್ಲಿ ಚುನಾವಣೆ ನಡೆಯುತ್ತಿದೆ. ಕೋಮು ಸೂಕ್ಷ್ಮ ರಾಜ್ಯವಾದ ಗುಜರಾತ್ನಲ್ಲಿ ಮತ್ತೆ ಘರ್ಷಣೆಗಳು ಕಾಣಿಸಿಕೊಂಡಿವೆ. ಅಲ್ಲಿನ ಆಢಳಿತಾರೂಢ ಬಿಜೆಪಿ ಸರ್ಕಾರವು ಪರಿಸ್ಥಿತಿಯನ್ನು ಹೇಗೆ ನಿಭಾಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications