Bihar: ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತಪ್ಪಿತಸ್ಥರನ್ನು ತಲೆಕೆಳಗಾಗಿ ಗಲ್ಲಿಗೇರಿಸುತ್ತೇವೆ: ಶಾ
ನವದೆಹಲಿ, ಏಪ್ರೀಲ್ 02: ಉತ್ತರ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಬಿಹಾರದಲ್ಲಿ ಕೋಮುಗಲಭೆ, ಹಿಂಸಾಚಾರ ಕುರಿತು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಖಾತೆ ಸಚಿವ ಅಮಿತ್ ಶಾ ಅವರು ಭಾನುವಾರ ವಾಗ್ದಾಳಿ ನಡೆಸಿದರು. ಜೊತೆಗೆ ಬಿಜೆಪಿ ಸರ್ಕಾರ ಬಂದರೆ ಕೈಗೊಳ್ಳಬಹುದಾದ ಕಠಿಣ ಕ್ರಮ ಕರಿತು ಈಗಲೇ ಸ್ಪಷ್ಟಪಡಿಸಿದರು.
ಬಿಹಾರ ರಾಜ್ಯದಲ್ಲಿನ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು ಸಸಾರಾಮ್ ಮತ್ತು ಬಿಹಾರ ಷರೀಫ್ ಪಟ್ಟಣಗಳಲ್ಲಿ ಉಂಟಾದ ಕೋಮುಗಲಭೆಗಳನ್ನು 'ನಿಯಂತ್ರಿಸುವಲ್ಲಿ ವಿಫಲ'ವಾಗಿದೆ. ಈ ಬಿಹಾರದಲ್ಲಿ ರಾಜ್ಯದಲ್ಲಿ ಮುಂದಿನ 2025ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಕೋಮುಗಲಭೆಗಳಿಗೆ ಕಾರಣರಾದ ತಪ್ಪಿತಸ್ಥರನ್ನು ತಲೆಕೆಳಗಾಗಿ ಗಲ್ಲಿಗೇರಿಸಲಾಗುವುದು ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು?
ಇಲ್ಲಿನ ನವಾಡಾ ಜಿಲ್ಲೆಯ ಹಿಸುವಾದಲ್ಲಿ ಆಯೋಜಿಸಿದ್ದ ಸಮಾರಂಭ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು, 2024ರನೇ ಸಾಲಿನಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಹಾರದ ಜನತೆ ನಿರ್ಧರಿಸಿದ್ದಾರೆ. ಇದು ಈಗಾಗಲೇ ಖಾತರಿಯಾಗಿದೆ ಎಂದು ಅವರು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕಳೇದ ಹತ್ತು ವರ್ಷದಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡು ಭಾರಿ ಅಧಿಕಾರ ನಡೆಸಿದ್ದಾರೆ. ಮೂರನೇ ಬಾರಿಯು ನರೇಂದ್ರ ಮೋದಿಯವರೇ ಪ್ರಧಾನಿಯಾಗಬೇಕೆಂದು ದೇಶದ ಜನರೆಲ್ಲ ಬಯಸಿದ್ದಾರೆ. ಜನರ ಆಶಯದಂತೆ ನಡೆದಲ್ಲಿ ನಿತೀಶ್ ಕುಮಾರ್ ಅವರು ಪ್ರಧಾನಿಯಾಗುವ ಕನಸು ಹೊಂದಿರುವ ತೇಜಸ್ವಿ ಯಾದವ್ಗೆ ಕನಸಾಗಿಯೇ ಉಳಿದು ಬಿಡಲಿದೆ. ತಮ್ಮ ಭರವಸೆಯಿಂದ ತಾವೇ ಹಿಂದೆ ಸರಿಯಲಿದ್ದಾರೆ ಎಂದು ವ್ಯಂಗ್ಯವಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ್ದಾರೆ. ಆ ವೇಳೆ ಲಾಲು ಪ್ರಸಾದ್ ಮತ್ತು ನಿತೀಶ್ ಕುಮಾರ್ ಅವರು ಭಯೋತ್ಪಾದನೆಗೆ ಪ್ರಚೋದಿಸುವಂತೆ, ಭಯೋತ್ಪಾದನೆಗೆ ಪೂರಕವಾದಂತಹ, ಉಗ್ರರಿಗೆ ಸಹಾಯ ಮಾಡುವ ರೀತಿಯಲ್ಲಿ ತುಷ್ಟೀಕರಣದ ರಾಜಕಾರಣ ಮಾಡಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.

ಕೋಮುಗಲಭೆ ತಡೆಯುವಲ್ಲಿ ವಿಫಲರಾದ ಮತ್ತು ರಾಜ್ಯದಾದ್ಯಂತ ಜಾತಿವಾದದ ವಿಷವನ್ನು ಹರಡುತ್ತಿರುವವ ನಿತೀಶ್ ಕುಮಾರ್ ಮತ್ತು 'ಜಂಗಲ್ ರಾಜ್' ಪ್ರವರ್ತಕ ಲಾಲು ಪ್ರಸಾದ್ ಅವರೊಂದಿಗೆ ಬಿಜೆಪಿ ಎಂದಿಗೂ ಕೈಜೋಡಿಸವುದಿಲ್ಲ. ಹೀಗೆಂದು ಅಮಿತ್ ಶಾ ಅವರು ಇದೇ ವೇಳೆ ಸ್ಪಷ್ಟಪಡಿಸಿದರು. ಬಹುಮತ ಬರದೇ ಇದ್ದ ಪಕ್ಷದಲ್ಲಿ ಈ ಪಕ್ಷಗಳಿಗೆ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕಾಗಿ ಇಲ್ಲವೇ ಜಂಟಿಯಾಗಿ ಸರ್ಕಾರ ರಚಿಸುವ ವಿಚಾರಕ್ಕಾಗಿ ಬಿಜೆಪಿಯ ಬಾಗಿಲು ಸದಾ ಮುಚ್ಚಿರುತ್ತದೆ ಎನ್ನುವ ಮೂಲಕ ಮೈತ್ರಿ ಅಸಾಧ್ಯ ಎಂದು ತಿಳಿಸಿದರು.
ಕಾಂಗ್ರೆಸ್, ಜೆಡಿಯು, ಆರ್ಜೆಡಿ, ಟಿಎಂಸಿ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣವನ್ನು ವಿರೋಧಿಸಿದ್ದರು. ಇಂತಹ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕುವ ಮೂಲಕ ಸ್ಥಾಪನಾ ಕಾರ್ಯ ಆರಂಭಿಸಿದರು. ಹೀಗಾಗಿಯೇ ದೇಶದ ಜನರ ಪ್ರಧಾನಿ ಮೋದಿಯನ್ನು ಇನ್ನೋಮ್ಮೆ ಅಧಿಕಾರಕ್ಕೆ ತರಲು ಬಯಸಿದ್ದಾರೆ ಎಂದು ಅವರು ಹೇಳಿದರು.
ಬಿಹಾರ ರಾಜ್ಯದಲ್ಲಿ ಆಗಾಗ್ಗೆ ಜರುಗುತ್ತಿರುವ ಕೋಮುಗಲಭೆ ಕುರಿತು ಅಮಿತ್ ಶಾ ವಿಷಾಧ ವ್ಯಕ್ತಪಡಿಸಿದರು. ಆದಷ್ಟು ಶೀಘ್ರದಲ್ಲಿ ವಾತಾವರಣ ಸಹಜ ಸ್ಥಿತಿಗೆ ಮರಳಲಿದ್ದು, ಆ ಬಗ್ಗೆ ತಾವು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಭಾನುವಾರ ಬೆಳಗ್ಗೆ ರಾಜ್ಯಪಾಲರೊಂದಿಗೆ ಮಾತನಾಡಿದಾಗ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಬಿಹಾರ ರಾಜ್ಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು ಎಂದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications