ಹಸಿಬಿಸಿ ಕಾಂಡೋಮ್ ಜಾಹೀರಾತು ಪ್ರಸಾರ: ರೊಚ್ಚಿಗೆದ್ದ ಮಹಿಳೆ ವಿಡಿಯೋ ವೈರಲ್ !
Condom Ad: ಭಾರತದಲ್ಲಿ ಮೊದಲಿನಿಂದಲೂ ಕಾಂಡೋಮ್ ಜಾಹೀರಾತಿನ ಬಗ್ಗೆ ಹಾಗೂ ಅದನ್ನು ಪ್ರಸಾರ ಮಾಡುವ ಸಮಯದ ಬಗ್ಗೆ ಆಕ್ಷೇಪಣೆಗಳು ಕೇಳಿ ಬರುತ್ತಿವೆ. ಇದೀಗ ಭಾರತ ಮತ್ತು ಪಾಕಿಸ್ತಾನದ ಏಷ್ಯಾ ಕಪ್ ಫೈನಲ್ ಮ್ಯಾಚ್ನಲ್ಲಿ ಪ್ರಮುಖ ಕಾಂಡೋಮ್ ಕಂಪನಿಯೊಂದರ ಜಾಹೀರಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇಷ್ಟೊಂದು ಹಸಿಬಿಸಿ ಕಾಂಡೋಮ್ ವಿಡಿಯೋವನ್ನು ಮ್ಯಾಚ್ ಸಮಯದಲ್ಲಿ ಯಾಕೆ ಪ್ರಸಾರ ಮಾಡಿದರು ಎಂದು ಮಹಿಳೆಯೊಬ್ಬರು ಪ್ರಶ್ನೆ ಮಾಡಿದ್ದು. ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಕಾಂಡೋಮ್ ವಿಡಿಯೋ & ಸುದ್ದಿ ನೋಡೋಣ.
ಸೆಪ್ಟೆಂಬರ್ 28ರಂದು ದುಬೈನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಏಷ್ಯಾ ಕಪ್ 2025 ರ ಫೈನಲ್ ಅನ್ನು ಗೆದ್ದ ನಂತರ ಅವರು ಇನ್ಸ್ಟಾಗ್ರಾಮ್ನಲ್ಲಿ ಹಲವು ವಿಡಿಯೋಗಳು ವೈರಲ್ ಆಗಿವೆ. ಸಹಜವಾಗಿಯೇ ಭಾರತದ ಸಂಭ್ರಮಾಚರಣೆ, ಪಾಕಿಸ್ತಾನದ ಕ್ರಿಕೆಟರಿಗೆ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಚಮಕ್ ಕೊಟ್ಟಿದ್ದು, ರಿವೆಂಜ್ ವಿಡಿಯೋ ಮಾಡಿದ್ದೆಲ್ಲವೂ ವೈರಲ್ ಆಗಿದೆ. ಇದೇ ಸಂದರ್ಭದಲ್ಲಿ ಕಾಂಡೋಮ್ ಜಾಹೀರಾತಿನ ಬಗ್ಗೆಯೂ ಭಾರೀ ಚರ್ಚೆ ನಡೆದಿದ್ದು, ಮಹಿಳೆಯೊಬ್ಬರು ಮಾಡಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ.

ಕ್ರಿಕೆಟ್ ಪಂದ್ಯಗಳ ಸಮಯದಲ್ಲಿ ಪ್ರಸಾರವಾದ ಕಾಂಡೋಮ್ ಜಾಹೀರಾತಿನ ಬಗ್ಗೆ ಇಶಿನ್ನಾ (ishinna_b_sadana) ಎನ್ನುವವರು ಕಳವಳ ವ್ಯಕ್ತಪಡಿಸಿದ್ದು, ಈ ವಿಡಿಯೋದಲ್ಲಿ ಅವರು ಕಾಂಡೋಮ್ ವಿಚಾರವು ಅಥವಾ ಜಾಹೀರಾತು ಮಕ್ಕಳು ನೋಡುವುದಕ್ಕೆ ಸೂಕ್ತವಲ್ಲ ಎಂದು ಅಭಿಪ್ರಾಯ
ಪಟ್ಟಿದ್ದಾರೆ. ಈ ಕ್ರಿಕೆಟ್ ಮ್ಯಾಚ್ನ ಸಂದರ್ಭದಲ್ಲಿ ಅನೇಕ ಮಕ್ಕಳು ಜಾಹೀರಾತನ್ನು ನೋಡಿದ್ದಾರೆ. ಇದು ಮಕ್ಕಳು ಮತ್ತು ಯುವಕರ ಲೈಂಗಿಕ ವಿಷಯಕ್ಕೆ ಬೇಗನೆ ಒಡ್ಡಿಕೊಳ್ಳುವ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಹಸಿಬಿಸಿ ಕಾಂಡೋಮ್ ಜಾಹೀರಾತಿನ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದ ಎಲ್ಲಾ ಮಕ್ಕಳು ಈ ಜಾಹೀರಾತನ್ನು ವೀಕ್ಷಿಸಿದರು. ಭಾರತವು ಏಷ್ಯಾ ಕಪ್ ಗೆದ್ದಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಆದರೆ ಈ ಜಾಹೀರಾತು ನಿರಂತರವಾಗಿ ಕಾಣಿಸಿಕೊಳ್ಳುತ್ತಲೇ ಇತ್ತು. ನಾನು ಆಶ್ಚರ್ಯ ಪಡುತ್ತಿದ್ದೆ, ಅನೇಕ ಪೋಷಕರು ತಮ್ಮ ಕುಟುಂಬದೊಂದಿಗೆ ಇದನ್ನು ವೀಕ್ಷಿಸುತ್ತಿದ್ದಾರೆ ಎಂದಿದ್ದಾರೆ.
ಇನ್ನು ಈ ರೀತಿ ಭಾರತದಲ್ಲಿ ಮಾತ್ರ ಆಗಲು ಸಾಧ್ಯ. ಯುರೋಪಿಯನ್ ದೇಶಗಳಲ್ಲಿ ಈ ರೀತಿಯ ಜಾಹೀರಾತುಗಳ ಪ್ರಸಾರಕ್ಕೆ ಬೇರೆಯದ್ದೇ ಮಾನದಂಡವನ್ನು ಅನುಸರಿಸಲಾಗುತ್ತದೆ. ಈ ರೀತಿಯ ಜಾಹೀರಾತುಗಳನ್ನು ಆ ದೇಶಗಳಲ್ಲಿ ರಾತ್ರಿ 11 ಗಂಟೆಯ ನಂತರ ಪ್ರಸಾರ ಮಾಡಲು ಮಾತ್ರ ಅವಕಾಶವಿದೆ ಎಂದು ಅವರು ಹೇಳಿದ್ದಾರೆ. ನಾವು ಯುವಕರಿಗೆ ಮೌಲ್ಯ ಕಲಿಸುತ್ತಿಲ್ಲ ಅಥವಾ ಇಂದಿನ ಯುವ ಸಮೂಹದಲ್ಲಿ ಮೌಲ್ಯ ಕಡಿಮೆ ಆಗುತ್ತಿದೆ ಎನ್ನುವುದಕ್ಕಿಂತ ಮೊದಲು ಈ ರೀತಿಯ ವಿಷಯಗಳನ್ನು ಗಮನಹರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications