100 ದಿನಗಳನ್ನು ಪೂರೈಸಿದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ

ಬೆಂಗಳೂರು, ಡಿಸೆಂಬರ್‌ 16: ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯೂ ಬರೋಬ್ಬರಿ ನೂರು ದಿನಗಳನ್ನು ಪೂರೈಸಿದೆ. ಕನ್ಯಾಕುಮಾರಿಯಿಂದ ಆರಂಭವಾದ ಈ ಯಾತ್ರೆಯೂ ಪ್ರಸ್ತುತ ರಾಜಸ್ತಾನದಲ್ಲಿ ಚಲಿಸುತ್ತಿದೆ.

ಭಾರತ್ ಜೋಡೋ ಯಾತ್ರೆಯ ದೊಡ್ಡ ಸಾಧನೆ ಎಂದರೆ ಅದು ಜನರಿಗೆ ಸಂಬಂಧಿಸಿದ ವಿಷಯಗಳನ್ನು ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ ಸಿ ವೇಣುಗೋಪಾಲ್ ಶುಕ್ರವಾರ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ರಸ್ತೆಯಲ್ಲಿ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಹೇಳಿದ್ದಾರೆ.

ರಾಹುಲ್‌ ಗಾಂಧಿ, ವೇಣುಗೋಪಾಲ್, ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ರಾಜಸ್ತಾನದ ಮೀನಾ ಹೈಕೋರ್ಟ್‌ನಿಂದ ಶುಕ್ರವಾರ ಬೆಳಿಗ್ಗೆ ಯಾತ್ರೆಯನ್ನು ಪ್ರಾರಂಭಿಸಿದರು. ಈ ವೇಳೆ ವೇಣುಗೋಪಾಲ್, ರಾಹುಲ್‌ ಗಾಂಧಿ ಅವರ ವರ್ಚಸ್ಸನ್ನು ನಾಶ ಮಾಡುವ ಬಿಜೆಪಿಯ ಪ್ರಯತ್ನವನ್ನು ನಾವು ಹಿಮ್ಮೆಟ್ಟಿಸಿದ್ದೇವೆ ಎಂದು ಅವರು ಹೇಳಿದರು.

ಜನವರಿ 26ರಿಂದ ಪಕ್ಷವು ಕೈಗೊಳ್ಳಲಿರುವ ಮುಂದಿನ ಅಭಿಯಾನದ ಮೂಲಕ ಯಾತ್ರೆಯ ಸಂದೇಶವನ್ನು ಹರಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ವೇಣುಗೋಪಾಲ್‌ ಹೇಳಿದರು. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾದ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಈಗ ರಾಜಸ್ಥಾನದಲ್ಲಿ ಎಂಟು ರಾಜ್ಯಗಳಲ್ಲಿ ಸಂಚರಿಸಿದೆ.

ತನ್ನ 2,800 ಕಿಲೋಮೀಟರ್‌ಗಳ ನಡಿಗೆಯಲ್ಲಿ ರಾಹುಲ್‌ ಗಾಂಧಿಯವರು ತಮ್ಮ ಬೆಂಬಲಿಗರು ಮತ್ತು ವಿರೋಧಿಗಳ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಹಲವಾರು ಸಂದರ್ಭಗಳಲ್ಲಿ ವಾಗ್ದಾಳಿ ನಡೆಸುವುದರೊಂದಿಗೆ ವಿವಾದಗಳು ಯಾತ್ರೆಯ ಭಾಗವಾಗಿದೆ. ಯಾತ್ರೆಯು ಡಿಸೆಂಬರ್ 24 ರಂದು ದೆಹಲಿಯನ್ನು ಪ್ರವೇಶಿಸಲಿದ್ದು, ಸುಮಾರು ಎಂಟು ದಿನಗಳ ವಿರಾಮದ ನಂತರ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದೆ.

ಅಡ್ಮಿರಲ್ ಎಲ್ ರಾಮದಾಸ್, ಆದಿತ್ಯ ಠಾಕ್ರೆ ಭಾಗಿ

ಅಡ್ಮಿರಲ್ ಎಲ್ ರಾಮದಾಸ್, ಆದಿತ್ಯ ಠಾಕ್ರೆ ಭಾಗಿ

ಇದು ಪೂಜಾ ಭಟ್, ರಿಯಾ ಸೇನ್, ಸುಶಾಂತ್ ಸಿಂಗ್, ಸ್ವರಾ ಭಾಸ್ಕರ್, ರಶ್ಮಿ ದೇಸಾಯಿ, ಆಕಾಂಕ್ಷಾ ಪುರಿ ಮತ್ತು ಅಮೋಲ್ ಪಾಲೇಕರ್ ಅವರಂತಹ ಚಲನಚಿತ್ರ ಮತ್ತು ಸೆಲೆಬ್ರಿಟಿಗಳನ್ನು ಒಳಗೊಂಡಂತೆ ಸಮಾಜದ ವಿವಿಧ ಕ್ಷೇತ್ರಗಳ ಜನರು ಇಲ್ಲಿ ಪಾಲ್ಗೊಂಡಿದ್ದಾರೆ. ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್ ರಾಮದಾಸ್, ಶಿವಸೇನೆಯ ಆದಿತ್ಯ ಠಾಕ್ರೆ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಲೆ, ಮತ್ತು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್‌ರಂತಹ ವಿರೋಧ ಪಕ್ಷದ ನಾಯಕರು ಸೇರಿದಂತೆ ಸೆಲೆಬ್ರಿಟಿಗಳು, ಬರಹಗಾರರು, ಮಿಲಿಟರಿ ಯೋಧರು ಭಾಗವಹಿಸುವುದರ ಜೊತೆಗೆ ವಿವಿಧ ಹಂತಗಳಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ವಿರಾಮ

ಬೆಳಗ್ಗೆ 11 ಗಂಟೆಗೆ ವಿರಾಮ

ಭಾರತ್ ಜೋಡೋ ಯಾತ್ರೆಯ 100 ದಿನಗಳ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್‌ನ ಅಧಿಕೃತ ಟ್ವಿಟ್ಟರ್ ಖಾತೆಯು ಅದರ ಪ್ರದರ್ಶನ ಚಿತ್ರವನ್ನು (ಡಿಪಿ) "100 ದಿನಗಳ ಯಾತ್ರೆ" ಎಂದು ಬದಲಾಯಿಸಿದೆ. ಮೀನಾ ಹೈಕೋರ್ಟ್‌ನಿಂದ ಆರಂಭವಾಗುವ ಯಾತ್ರೆಯು ಗಿರಿರಾಜ್ ಧರನ್ ದೇವಸ್ಥಾನದಲ್ಲಿ ಬೆಳಗ್ಗೆ 11 ಗಂಟೆಗೆ ವಿರಾಮ ತೆಗೆದುಕೊಂಡಿದೆ.

ಜೈಪುರದಲ್ಲಿ ಸಂಗೀತ ಕಾರ್ಯಕ್ರಮ

ಜೈಪುರದಲ್ಲಿ ಸಂಗೀತ ಕಾರ್ಯಕ್ರಮ

ಜೈಪುರದ ಕಾಂಗ್ರೆಸ್ ಕಚೇರಿಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿ ನಡೆಸಿದ ಬಳಿಕ ರಾಹುಲ್ ಗಾಂಧಿ ಲೈವ್ ಕನ್ಸರ್ಟ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಆಚರಿಸಲು ಕಾಂಗ್ರೆಸ್ ಶುಕ್ರವಾರ ಜೈಪುರದಲ್ಲಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಲ್ಬರ್ಟ್ ಹಾಲ್‌ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ನೇರ ಪ್ರದರ್ಶನವನ್ನು ಆಯೋಜಿಸಿದೆ.

ಸೆಪ್ಟೆಂಬರ್ 7 ರಂದು ಪ್ರಾರಂಭವಾಗಿತ್ತು

ಸೆಪ್ಟೆಂಬರ್ 7 ರಂದು ಪ್ರಾರಂಭವಾಗಿತ್ತು

ಶುಕ್ರವಾರ ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಯ 12 ನೇ ದಿನವಾಗಿದೆ. ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದ ರಾಜ್ಯದ ಐದನೇ ಜಿಲ್ಲೆ ದೌಸಾ ಆಗಿದೆ. ಯಾತ್ರೆಯು ಕನ್ಯಾಕುಮಾರಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭವಾಯಿತು. ಭಾರತ್ ಜೋಡೋ ಯಾತ್ರೆಯು ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶವನ್ನು ಕ್ರಮಿಸಿ ಬಂದಿದೆ. ರಾಜಸ್ಥಾನವನ್ನು ಮುಗಿಸಿದ ನಂತರ ಯಾತ್ರೆ ಡಿಸೆಂಬರ್ 21 ರಂದು ಹರಿಯಾಣವನ್ನು ಪ್ರವೇಶಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+