ಛತ್ತೀಸ್ ಗಢ ಸಿಎಂ ಆಗಿ ಭೂಪೇಶ್ ಬಘೇಲ್ ಪ್ರಮಾಣ ವಚನ
ರಾಯ್ಪುರ, ಡಿಸೆಂಬರ್ 18: ಛತ್ತೀಸ್ ಗಢ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಭೂಪೇಶ್ ಭಘೇಲ್ ಅವರು ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು.
ಛತ್ತೀಸ್ ಗಢದ ರಾಜಧಾನಿ ರಾಯ್ಪುರದ ಬಲ್ಬಿರ್ ಸಿಂಗ್ ಜುನೆಜಾ ಒಳಾಂಗಣ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಿಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ರಾಜ್ಯಪಾಲರಾದ ಆನಂದಿಬೆನ್ ಪಾಟೀಲ್ ಅವರು ಪ್ರಮಾಣ ವಚನ ಬೋಧಿಸಿದರು.

ಛತ್ತೀಸ್ ಗಢದಲ್ಲಿ ನ.12 ಮತ್ತು 20 ರಂದು ಎರಡು ಹಂತಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಡಿ.11 ರಂದು ಹೊರಬಿದ್ದಿತ್ತು. ಒಟ್ಟು 90 ಕ್ಷೇತ್ರಗಳ ಛತ್ತೀಸ್ ಗಢ ವಿಧಾನಸಭೆಯಲ್ಲಿ ಕಾಂಗ್ರೆಸ್ 68 ಬಿಜೆಪಿ 15 ಮತ್ತು ಬಿಎಸ್ಪಿ 07 ಕ್ಷೇತ್ರಗಳಲ್ಲಿ ಗೆದ್ದಿದ್ದವು.
ಸೋಮವಾರ ಛತ್ತೀಸ್ ಗಢ ಮಾತ್ರವಲ್ಲದೆ, ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಮತ್ತು ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಅವರು ಸಹ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಛತ್ತೀಸ್ ಗಢ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೂಪೇಶ್ ಬಘೇಲ್ ಅವರು ಅಕ್ಟೋಬರ್ 2014ರಿಂದ ಅಧಿಕಾರ ನಡೆಸಿದ್ದಾರೆ. ದುರ್ಗ್ ಜಿಲ್ಲೆಯ ಪಟಾನ್ ಕ್ಷೇತ್ರದ ಅಭ್ಯರ್ಥಿ. ಈ ಹಿಂದೆ ದಿಗ್ವಿಜಯ್ ಸಿಂಗ್ ಅವರ ಸರ್ಕಾರದಿಂದ ಸಚಿವರಾಗಿದ್ದರು. ಸಾರಿಗೆ ಸಚಿವರಾಗಿ ಉತ್ತಮ ಹೆಸರು ಗಳಿಸಿದರು. ಛತ್ತೀಸ್ ಗಢ ರಾಜ್ಯ ಉದಯವಾದ ಬಳಿಕ ಬಘೇಲ್ ಅವರು ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications